<p>ಅಳ್ನಾವರ: ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶ ಹೊತ್ತು ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕಿನ ಸೇವೆ ಶ್ಲಾಘನೀಯ ಎಂದು ಹುಬ್ಬಳ್ಳಿ ವಾಣಿಜ್ಯೋದ್ಯಮ<br /> ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಸಿ. ಹಿರೇಮಠ ಹೇಳಿದರು.</p>.<p>ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಮಂಗಳವಾರ ನಡೆದ ಸ್ಟೇಟ್ ಬ್ಯಾಂಕ್ಸ್ ದಿನಾಚರಣೆ ಹಾಗೂ ನೂತನ ತಂತ್ರಜ್ಞಾನದ ಎಟಿಎಂ ಸೇವೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸದಾ ನಮ್ಮ ಏಳಿಗೆ ಬಯಸುವ ಸ್ನೇಹಿತನಂತೆ ಗ್ರಾಹಕರು ಬ್ಯಾಂಕಿನ ಜೊತೆಗೆ ಒಳ್ಳೆಯ ಸಂಬಂಧವನ್ನು ಇಟ್ಟುಕೊಂಡಾಗ ಮಾತ್ರ ನಮ್ಮ ಏಳಿಗೆಯ ಜೊತೆಗೆ ಬ್ಯಾಂಕಿನ ಅಭಿವೃದ್ಧಿ ಸಾಧ್ಯ. ಗ್ರಾಹಕರು ಸುಧಾರಿತ<br /> ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು’ ಎಂದರು.</p>.<p>ಶಾಖಾ ಕಚೇರಿಯ ವ್ಯವಸ್ಥಾಪಕ ಅಭಿಷೇಕ ಅಡಿಗ, ‘ದೇಶದ ಉದ್ದಗಲಕ್ಕೂ ಎಸ್ಬಿಐ ತನ್ನ ಶಾಖೆಗಳನ್ನು ತೆರೆದು ಗ್ರಾಹಕರಿಗೆ ಸೇವೆ ನೀಡುತ್ತಿದೆ. ಅದರ ಜೊತೆಗೆ ನೂತನ ತಂತ್ರಜ್ಞಾನ ಮತ್ತು ಯಂತ್ರಗಳನ್ನು ಅಳವಡಿಸುವ ಮೂಲಕ ಗ್ರಾಹಕರಿಗೆ ಸಕಾಲದಲ್ಲಿ ಸೇವೆಗಳನ್ನು ನೀಡುತ್ತಿದೆ’ ಎಂದರು.</p>.<p>ಆನಂದ ಬಿಜಾಪೂರ, ಬಸವರಾಜ ಬಾಗೇವಾಡಿ, ಮಂಜುನಾಥ ರಾವಲ, ವಿನಯಾ ಮಯಾ, ಯಮುನಾ ಆನಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಳ್ನಾವರ: ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಉದ್ದೇಶ ಹೊತ್ತು ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕಿನ ಸೇವೆ ಶ್ಲಾಘನೀಯ ಎಂದು ಹುಬ್ಬಳ್ಳಿ ವಾಣಿಜ್ಯೋದ್ಯಮ<br /> ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಸಿ. ಹಿರೇಮಠ ಹೇಳಿದರು.</p>.<p>ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಮಂಗಳವಾರ ನಡೆದ ಸ್ಟೇಟ್ ಬ್ಯಾಂಕ್ಸ್ ದಿನಾಚರಣೆ ಹಾಗೂ ನೂತನ ತಂತ್ರಜ್ಞಾನದ ಎಟಿಎಂ ಸೇವೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸದಾ ನಮ್ಮ ಏಳಿಗೆ ಬಯಸುವ ಸ್ನೇಹಿತನಂತೆ ಗ್ರಾಹಕರು ಬ್ಯಾಂಕಿನ ಜೊತೆಗೆ ಒಳ್ಳೆಯ ಸಂಬಂಧವನ್ನು ಇಟ್ಟುಕೊಂಡಾಗ ಮಾತ್ರ ನಮ್ಮ ಏಳಿಗೆಯ ಜೊತೆಗೆ ಬ್ಯಾಂಕಿನ ಅಭಿವೃದ್ಧಿ ಸಾಧ್ಯ. ಗ್ರಾಹಕರು ಸುಧಾರಿತ<br /> ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು’ ಎಂದರು.</p>.<p>ಶಾಖಾ ಕಚೇರಿಯ ವ್ಯವಸ್ಥಾಪಕ ಅಭಿಷೇಕ ಅಡಿಗ, ‘ದೇಶದ ಉದ್ದಗಲಕ್ಕೂ ಎಸ್ಬಿಐ ತನ್ನ ಶಾಖೆಗಳನ್ನು ತೆರೆದು ಗ್ರಾಹಕರಿಗೆ ಸೇವೆ ನೀಡುತ್ತಿದೆ. ಅದರ ಜೊತೆಗೆ ನೂತನ ತಂತ್ರಜ್ಞಾನ ಮತ್ತು ಯಂತ್ರಗಳನ್ನು ಅಳವಡಿಸುವ ಮೂಲಕ ಗ್ರಾಹಕರಿಗೆ ಸಕಾಲದಲ್ಲಿ ಸೇವೆಗಳನ್ನು ನೀಡುತ್ತಿದೆ’ ಎಂದರು.</p>.<p>ಆನಂದ ಬಿಜಾಪೂರ, ಬಸವರಾಜ ಬಾಗೇವಾಡಿ, ಮಂಜುನಾಥ ರಾವಲ, ವಿನಯಾ ಮಯಾ, ಯಮುನಾ ಆನಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>