<p><strong>ಹುಬ್ಬಳ್ಳಿ</strong>: ‘ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ಪೂರೈಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಇಲಾಖೆ ಸಚಿವರ ಮನವೊಲಿಸಲಾಗುವುದು’ ಎಂದು ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಹೇಳಿದರು.</p>.<p>‘ಸಿಬ್ಬಂದಿ ಮತ್ತು ಆರ್ಥಿಕ ಸಂಪನ್ಮೂಲ ಕೊರತೆಯಿಂದ ಸಮವಸ್ತ್ರ ಪೂರೈಸಲು ಆಗುತ್ತಿಲ್ಲ. ರಾಜ್ಯದ ಎಲ್ಲ ಶಾಲೆಗಳಿಗೆ ನಿಗಮದಿಂದ ಸಮವಸ್ತ್ರ ಪೂರೈಸಿದರೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ’ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸರ್ಕಾರವು ನಿಗಮಕ್ಕೆ ಪ್ರಸಕ್ತ ವರ್ಷ ₹10 ಕೋಟಿ ಅನುದಾನ ನೀಡಿದೆ. ಅಭಿವೃದ್ಧಿ ಕುಂಠಿತವಾಗಲು ಅನುದಾನ ಕೊರತೆಯೂ ಕಾರಣ. ಹೀಗಾಗಿ ₹30 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಹೇಳಿದರು.</p>.<p>‘ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಮತ್ತು ಜವಳಿ ಸಂಪನ್ಮೂಲ ಅಭಿವೃದ್ಧಿ ನಿಗಮದ ವಿಲೀನ ಪ್ರಕ್ರಿಯೆ ನಡೆದಿದೆ. ಅಧಿಕಾರಿಗಳು ಈ ಬಗ್ಗೆ ವರದಿ ಸಿದ್ಧಪಡಿಸುತ್ತಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ಪೂರೈಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಇಲಾಖೆ ಸಚಿವರ ಮನವೊಲಿಸಲಾಗುವುದು’ ಎಂದು ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಹೇಳಿದರು.</p>.<p>‘ಸಿಬ್ಬಂದಿ ಮತ್ತು ಆರ್ಥಿಕ ಸಂಪನ್ಮೂಲ ಕೊರತೆಯಿಂದ ಸಮವಸ್ತ್ರ ಪೂರೈಸಲು ಆಗುತ್ತಿಲ್ಲ. ರಾಜ್ಯದ ಎಲ್ಲ ಶಾಲೆಗಳಿಗೆ ನಿಗಮದಿಂದ ಸಮವಸ್ತ್ರ ಪೂರೈಸಿದರೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ’ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸರ್ಕಾರವು ನಿಗಮಕ್ಕೆ ಪ್ರಸಕ್ತ ವರ್ಷ ₹10 ಕೋಟಿ ಅನುದಾನ ನೀಡಿದೆ. ಅಭಿವೃದ್ಧಿ ಕುಂಠಿತವಾಗಲು ಅನುದಾನ ಕೊರತೆಯೂ ಕಾರಣ. ಹೀಗಾಗಿ ₹30 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಹೇಳಿದರು.</p>.<p>‘ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಮತ್ತು ಜವಳಿ ಸಂಪನ್ಮೂಲ ಅಭಿವೃದ್ಧಿ ನಿಗಮದ ವಿಲೀನ ಪ್ರಕ್ರಿಯೆ ನಡೆದಿದೆ. ಅಧಿಕಾರಿಗಳು ಈ ಬಗ್ಗೆ ವರದಿ ಸಿದ್ಧಪಡಿಸುತ್ತಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>