ಈ ಕುರಿತು ಪ್ರಜಾವಾಣಿ ಜೊತೆ ಮಾತನಾಡಿದ ವಲಯ ಅರಣ್ಯಾಧಿಕಾರಿ ಶ್ರೀಧರ ತೆಗ್ಗಿನಮನಿ ‘ಇಲಾಖೆಯ ಕೆಲ ಸಿಬ್ಬಂದಿ ಕವಲಗೇರಿಯಲ್ಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನುಳಿದ ಸಿಬ್ಬಂದಿ ಬೆಟ್ಟದ ಸಮೀಪದಲ್ಲಿರುವ ವಾಟರ್ ಟ್ಯಾಂಕ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಯೋಗಾಲಯದ ವರದಿ ಬರುವ ತನಕ ಈ ಕೆಲಸ ಮುಂದುವರಿಯಲಿದೆ’ ಎಂದರು.