ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಕಾಶ್ಮೀರದ ಮೂವರು ವಿದ್ಯಾರ್ಥಿಗಳಿಗೆ ಇಲ್ಲಿನ ಐದನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಸೋಮವಾರ ಜಾಮೀನು ತಿರಸ್ಕರಿಸಿದೆ.
ಪ್ರಕರಣದ ತನಿಖೆ ಆರಂಭದ ಹಂತದಲ್ಲಿದೆ. ಈ ಸಂದರ್ಭದಲ್ಲಿ ಅವರಿಗೆ ಜಾಮೀನು ನೀಡುವುದು ಸಮಂಜಸವಲ್ಲ ಎನ್ನುವ ಕಾರಣಕ್ಕೆ ನ್ಯಾಯಾಧೀಶ ಕೆ.ಎನ್. ಗಂಗಾಧರ ಜಾಮೀನು ನಿರಾಕರಿಸಿದ್ದಾರೆ. ವಿದ್ಯಾರ್ಥಿಗಳ ಪರ ಸಲ್ಲಿಸಲಾಗಿದ್ದ ಜಾಮೀನು ಅರ್ಜಿ ವಿಚಾರಣೆ ಮಾ. 5ರಂದು ನಡೆದಿತ್ತು.