<p><strong>ಅಣ್ಣಿಗೇರಿ</strong>: ರೈತರು ಹಿಂಗಾರು ಹಂಗಾಮಿನ ಬೀಜಗಳಾದ ಕಡಲೆ, ಜೋಳ ಸೇರಿದಂತೆ ಮುಂತಾದ ಬೀಜಗಳನ್ನು ಸರ್ಕಾರದ ಸಹಾಯಧನದಲ್ಲಿ ವಿತರಣೆ ಮಾಡಲಾಗುತ್ತಿದೆ. ಪ್ರತಿಯೊಬ್ಬ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಾಸಕ ಎನ್. ಎಚ್. ಕೋನರಡ್ಡಿ ಹೇಳಿದರು.</p>.<p>ಅವರು ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>ಕಡಲೆ ಬೀಜ ಪ್ರತಿ ಪ್ಯಾಕೆಟ್ಗೆ ₹ 1,160 ಹಾಗೂ ಜೋಳ ಪ್ರತಿ ಪ್ಯಾಕೆಟ್ಗೆ ₹169 ರ ಸಹಾಯ ಧನದಲ್ಲಿ ನೀಡಲಾಗುತ್ತಿದೆ. ಈಗಾಗಲೇ ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಅಗತ್ಯ ಬಿದ್ದರೆ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ದಾಸ್ತಾನು ಕೊಠಡಿಗಳನ್ನು ವೀಕ್ಷಣೆ ಮಾಡಿ, ಶೀಘ್ರದಲ್ಲೇ ಹೊಸ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಸಹಾಯಕ ಕೃಷಿ ನಿರ್ದೇಶಕ ರವೀಂದ್ರಗೌಡ ಪಾಟೀಲ, ಕೃಷಿ ಅಧಿಕಾರಿ ವೀರಣ್ಣ ಗಡಾದ, ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ ಸೇರಿದಂತೆ ಕೃಷಿಕ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಣ್ಣಿಗೇರಿ</strong>: ರೈತರು ಹಿಂಗಾರು ಹಂಗಾಮಿನ ಬೀಜಗಳಾದ ಕಡಲೆ, ಜೋಳ ಸೇರಿದಂತೆ ಮುಂತಾದ ಬೀಜಗಳನ್ನು ಸರ್ಕಾರದ ಸಹಾಯಧನದಲ್ಲಿ ವಿತರಣೆ ಮಾಡಲಾಗುತ್ತಿದೆ. ಪ್ರತಿಯೊಬ್ಬ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಾಸಕ ಎನ್. ಎಚ್. ಕೋನರಡ್ಡಿ ಹೇಳಿದರು.</p>.<p>ಅವರು ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡ ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.</p>.<p>ಕಡಲೆ ಬೀಜ ಪ್ರತಿ ಪ್ಯಾಕೆಟ್ಗೆ ₹ 1,160 ಹಾಗೂ ಜೋಳ ಪ್ರತಿ ಪ್ಯಾಕೆಟ್ಗೆ ₹169 ರ ಸಹಾಯ ಧನದಲ್ಲಿ ನೀಡಲಾಗುತ್ತಿದೆ. ಈಗಾಗಲೇ ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಅಗತ್ಯ ಬಿದ್ದರೆ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ದಾಸ್ತಾನು ಕೊಠಡಿಗಳನ್ನು ವೀಕ್ಷಣೆ ಮಾಡಿ, ಶೀಘ್ರದಲ್ಲೇ ಹೊಸ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಸಹಾಯಕ ಕೃಷಿ ನಿರ್ದೇಶಕ ರವೀಂದ್ರಗೌಡ ಪಾಟೀಲ, ಕೃಷಿ ಅಧಿಕಾರಿ ವೀರಣ್ಣ ಗಡಾದ, ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ ಸೇರಿದಂತೆ ಕೃಷಿಕ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>