ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿರೇಮಠ ‘ಔಷಧಿ ಸಸ್ಯಗಳನ್ನು ಹೊಂದಿರುವ ಕಪ್ಪತಗುಡ್ಡ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ಕೊಡಬೇಕು ಎಂದು ಉದಾಸಿ ಹಾಗೂ ವಿರೂಪಾಕ್ಷಪ್ಪ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಪ್ರಾಕೃತಿಕ ಸಂಪತ್ತು ರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದ್ದು, ಜನಪ್ರತಿನಿಧಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು. ಒಂದು ವೇಳೆ ಗಣಿಗಾರಿಕೆಗೆ ಅನುಮತಿ ಕೊಟ್ಟರೆ ಕಪ್ಪತಗುಡ್ಡ ಹೋರಾಟ ಸಮಿತಿ ಮತ್ತು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹೋರಾಟ ಮಾಡಲಾಗುವುದು’ ಎಚ್ಚರಿಸಿದರು.