<p><strong>ಹುಬ್ಬಳ್ಳಿ: </strong>ಸುರಕ್ಷತೆ ದೃಷ್ಟಿಯಿಂದ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಪೊಲೀಸ್ ಹುತಾತ್ಮ ದಿನದ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು ಸ್ವಯಂ ಸುರಕ್ಷತೆಗೆ ತರಬೇತಿ ನೀಡುವ ಕೆಲಸವನ್ನು ಕೆಎಸ್ ಆರ್ ಪಿಗೆ ವಹಿಸಲಾಗುವುದು. ಪೊಲೀಸ್ ತರಬೇತಿ ಶಾಲೆಗಳಲ್ಲಿ ಕೆಲಸ ಮಾಡಿದ ನಿವೃತ್ತ ಪ್ರಾಂಶುಪಾಲರನ್ನು ತರಬೇತಿ ನೀಡಲು ಬಳಸಿಕೊಳ್ಳಲಾಗುವುದು ಎಂದರು.</p>.<p>ಕೇರಳ ಹಾಗೂ ಉತ್ತರಾಖಂಡ ಭೂ ಕುಸಿತ ಘಟನೆ ಬಗ್ಗೆ ಪ್ರತಿಕ್ರಿಯಿಸಿ ಈ ಕುರಿತು ಕೇರಳ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ಅಗತ್ಯ ನೆರವು ನೀಡುವುದಾಗಿಯೂ ತಿಳಿಸಿದ್ದೇನೆ ಎಂದರು.</p>.<p>ಉತ್ತರಾಖಂಡದಲ್ಲಿ ಸಿಲುಕಿರುವ ಕರ್ನಾಟಕದವರ ರಕ್ಷಣೆಗಾಗಿ ಕ್ರಮಕೈಗೊಳ್ಳಲಾಗಿದೆ. ತುಷಾರ್ ಗಿರಿನಾಥ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.</p>.<p>ಉಪಚುನಾವಣೆ ಪ್ರಚಾರದಲ್ಲಿ ವೈಯಕ್ತಿಕ ನಿಂದನೆಗಳೇ ಹೆಚ್ಚಾಗುತ್ತಿವೆಯಲ್ಲ ಎನ್ನುವ ಪ್ರಶ್ನೆಗೆ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಚುನಾವಣೆ ಜನರ ಧ್ವನಿಯಾಗಿದೆ. ಜನರ ಹಾಗೂ ಕ್ಷೇತ್ರದ ಅಭಿವೃಧ್ದಿಗೆ ಸೀಮಿತರಾದರೆ ಜನಪ್ರತಿನಿಧಿಗಳಿಗೆ ಒಳ್ಳೆಯದು. ಜನರ ಮನಸ್ಸು ಗೆಲ್ಲುವ ಮಾತಗಳನ್ನಾಡಬೇಕೆ ಹೊರತು ಇನ್ನೊಬ್ಬರನ್ನು ನಿಂದಿಸುವ ಕೆಲಸ ಮಾಡಬಾರದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಸುರಕ್ಷತೆ ದೃಷ್ಟಿಯಿಂದ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಪೊಲೀಸ್ ಹುತಾತ್ಮ ದಿನದ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು ಸ್ವಯಂ ಸುರಕ್ಷತೆಗೆ ತರಬೇತಿ ನೀಡುವ ಕೆಲಸವನ್ನು ಕೆಎಸ್ ಆರ್ ಪಿಗೆ ವಹಿಸಲಾಗುವುದು. ಪೊಲೀಸ್ ತರಬೇತಿ ಶಾಲೆಗಳಲ್ಲಿ ಕೆಲಸ ಮಾಡಿದ ನಿವೃತ್ತ ಪ್ರಾಂಶುಪಾಲರನ್ನು ತರಬೇತಿ ನೀಡಲು ಬಳಸಿಕೊಳ್ಳಲಾಗುವುದು ಎಂದರು.</p>.<p>ಕೇರಳ ಹಾಗೂ ಉತ್ತರಾಖಂಡ ಭೂ ಕುಸಿತ ಘಟನೆ ಬಗ್ಗೆ ಪ್ರತಿಕ್ರಿಯಿಸಿ ಈ ಕುರಿತು ಕೇರಳ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ಅಗತ್ಯ ನೆರವು ನೀಡುವುದಾಗಿಯೂ ತಿಳಿಸಿದ್ದೇನೆ ಎಂದರು.</p>.<p>ಉತ್ತರಾಖಂಡದಲ್ಲಿ ಸಿಲುಕಿರುವ ಕರ್ನಾಟಕದವರ ರಕ್ಷಣೆಗಾಗಿ ಕ್ರಮಕೈಗೊಳ್ಳಲಾಗಿದೆ. ತುಷಾರ್ ಗಿರಿನಾಥ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.</p>.<p>ಉಪಚುನಾವಣೆ ಪ್ರಚಾರದಲ್ಲಿ ವೈಯಕ್ತಿಕ ನಿಂದನೆಗಳೇ ಹೆಚ್ಚಾಗುತ್ತಿವೆಯಲ್ಲ ಎನ್ನುವ ಪ್ರಶ್ನೆಗೆ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಚುನಾವಣೆ ಜನರ ಧ್ವನಿಯಾಗಿದೆ. ಜನರ ಹಾಗೂ ಕ್ಷೇತ್ರದ ಅಭಿವೃಧ್ದಿಗೆ ಸೀಮಿತರಾದರೆ ಜನಪ್ರತಿನಿಧಿಗಳಿಗೆ ಒಳ್ಳೆಯದು. ಜನರ ಮನಸ್ಸು ಗೆಲ್ಲುವ ಮಾತಗಳನ್ನಾಡಬೇಕೆ ಹೊರತು ಇನ್ನೊಬ್ಬರನ್ನು ನಿಂದಿಸುವ ಕೆಲಸ ಮಾಡಬಾರದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>