<p><strong>ಹುಬ್ಬಳ್ಳಿ:</strong> ಸುಗಮ ಸಂಚಾರಕ್ಕೆ ಉತ್ತಮ ರಸ್ತೆ ಇಲ್ಲ. ಚರಂಡಿ ವ್ಯವಸ್ಥೆಯಿಲ್ಲ. ಬೀದಿ ದೀಪಗಳ ಸಮಸ್ಯೆ, ಸಕಾಲಕ್ಕೆ ಪೂರೈಕೆಯಾಗದ ಕುಡಿಯುವ ನೀರು, ಸ್ವಚ್ಛತೆ ಎನ್ನುವುದು ಇಲ್ಲಿ ಮರೀಚಿಕೆ.</p><p>ಇಂತಹ ಹಲವು ಸಮಸ್ಯೆಗಳ ನಡುವೆಯೇ ಇಲ್ಲಿನ ಮಂಜುನಾಥ ನಗರದ ಬಳಿಯ ಶಕ್ತಿನಗರ ಅರುಣ ಕಾಲೊನಿಯ ಬಡಾವಣೆಯ ನಿವಾಸಿಗಳು ನಿತ್ಯ ಬದುಕು ಸಾಗಿಸುತ್ತಿದ್ದಾರೆ. </p><p>ಬಡಾವಣೆಯಲ್ಲಿ ವ್ಯವಸ್ಥಿತ ರಸ್ತೆ, ಚರಂಡಿಗಳಿಲ್ಲ. ಎಲ್ಲೆಂದರಲ್ಲಿ ಕೊಳಚೆ ನೀರು ಹರಿಯುತ್ತಿರುತ್ತದೆ. ಇದರಲ್ಲಿಯೇ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಚರಿಸುತ್ತಾರೆ. </p><p>ಇಲ್ಲಿನ ನಿವಾಸಿಗಳಿಗೆ ಸಕಾಲಕ್ಕೆ ಕುಡಿಯುವ ನೀರು ಪೂರೈಕೆ ಆಗುವುದಿಲ್ಲ. ಬೀದಿ ದೀಪಗಳಿಲ್ಲದ್ದ ಕಾರಣ ರಾತ್ರಿ ವೇಳೆ ಮಹಿಳೆಯರು, ಮಕ್ಕಳು ಓಡಾಡಲು ಭಯಪಡುತ್ತಾರೆ. ಶಕ್ತಿನಗರದಲ್ಲಿ ಸ್ವಚ್ಛತೆ ಎನ್ನುವುದು ಮರೀಚಿಕೆಯಾಗಿದೆ. ರಸ್ತೆ ಬದಿಯಲ್ಲಿ ಹಾಗೂ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಎಸೆಯಲಾಗುತ್ತದೆ. ಈ ತ್ಯಾಜ್ಯದಿಂದ ದುರ್ವಾಸನೆ ಬರುತ್ತಿದೆ. ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಮಲೇರಿಯಾ, ಡೆಂಗಿ ಹರಡುವ ಭೀತಿ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ. </p><p>ಇಲ್ಲಿ ಶಕ್ತಿದೇವಿ ದೇವಸ್ಥಾನವಿದ್ದು, ಈ ಮಾರ್ಗದಲ್ಲಿನ ವಾಕಿಂಗ್ ಪಾತ್ ಹಾಳಾಗಿದೆ. ಗಿಡಗಂಟಿಗಳು ಬೆಳೆದಿವೆ. ಇದರಿಂದ ಪಾದಚಾರಿಗಳಿಗೆ ಹಾಗೂ ವಾಯುವಿಹಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. </p><p>ಇಲ್ಲಿನ ಬಹುತೇಕ ರಸ್ತೆಗಳ ಹಾಳಾಗಿದ್ದು, ವಾಹನಗಳ ಸಂಚಾರಕ್ಕೂ ತೊಂದರೆಯಾಗುತ್ತಿದೆ.</p><p>‘ವ್ಯವಸ್ಥಿತ ಚರಂಡಿ ಇಲ್ಲದ ಕಾರಣ, ಮಳೆ ಬಂದಾಗ ಕೊಳಚೆ ನೀರು ರಸ್ತೆಯ ಮೇಲೆಯೇ ಹರಿಯುತ್ತದೆ. ಮನೆಯ ಮುಂದೆಯೇ ಚರಂಡಿ ನೀರು ನಿಲ್ಲುತ್ತದೆ’ ಎಂದು ಶಕ್ತಿನಗರದ ನಿವಾಸಿ ಸುಪರ್ಣಾ ಜೈನ್ ಹೇಳುತ್ತಾರೆ. </p><p>‘ಅರುಣ ಕಾಲೊನಿಯಲ್ಲಿ ರಸ್ತೆ ದುರಸ್ತಿ ಹಾಗೂ ಚರಂಡಿ ವ್ಯವಸ್ಥೆ ಮಾಡಿಕೊಡಿ ಎಂದು ಹಲವು ಬಾರಿ ಪಾಲಿಕೆಯ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ನಿವಾಸಿಗಳಾದ ಅನಿಲ್ ಕುಮಾರ್ ಆರೋಪಿಸುತ್ತಾರೆ.</p>.<div><blockquote>ಶಕ್ತಿನಗರದ ಅರುಣ ಕಾಲೊನಿಯಲ್ಲಿ ಉತ್ತಮ ರಸ್ತೆ, ಒಳಚರಂಡಿ ವ್ಯವಸ್ಥೆಯಿದೆ. ಒಂದು ವೇಳೆ ಸಮಸ್ಯೆಯಿದ್ದಲ್ಲಿ ಸರಿಪಡಿಸಲಾಗುವುದು </blockquote><span class="attribution">ಚಂದ್ರಶೇಖರ ಮಾಲಿಪಾಟೀಲ, ವಲಯಾಧಿಕಾರಿ, ಹು–ಧಾ ಮಹಾನಗರ ಪಾಲಿಕೆ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಸುಗಮ ಸಂಚಾರಕ್ಕೆ ಉತ್ತಮ ರಸ್ತೆ ಇಲ್ಲ. ಚರಂಡಿ ವ್ಯವಸ್ಥೆಯಿಲ್ಲ. ಬೀದಿ ದೀಪಗಳ ಸಮಸ್ಯೆ, ಸಕಾಲಕ್ಕೆ ಪೂರೈಕೆಯಾಗದ ಕುಡಿಯುವ ನೀರು, ಸ್ವಚ್ಛತೆ ಎನ್ನುವುದು ಇಲ್ಲಿ ಮರೀಚಿಕೆ.</p><p>ಇಂತಹ ಹಲವು ಸಮಸ್ಯೆಗಳ ನಡುವೆಯೇ ಇಲ್ಲಿನ ಮಂಜುನಾಥ ನಗರದ ಬಳಿಯ ಶಕ್ತಿನಗರ ಅರುಣ ಕಾಲೊನಿಯ ಬಡಾವಣೆಯ ನಿವಾಸಿಗಳು ನಿತ್ಯ ಬದುಕು ಸಾಗಿಸುತ್ತಿದ್ದಾರೆ. </p><p>ಬಡಾವಣೆಯಲ್ಲಿ ವ್ಯವಸ್ಥಿತ ರಸ್ತೆ, ಚರಂಡಿಗಳಿಲ್ಲ. ಎಲ್ಲೆಂದರಲ್ಲಿ ಕೊಳಚೆ ನೀರು ಹರಿಯುತ್ತಿರುತ್ತದೆ. ಇದರಲ್ಲಿಯೇ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಚರಿಸುತ್ತಾರೆ. </p><p>ಇಲ್ಲಿನ ನಿವಾಸಿಗಳಿಗೆ ಸಕಾಲಕ್ಕೆ ಕುಡಿಯುವ ನೀರು ಪೂರೈಕೆ ಆಗುವುದಿಲ್ಲ. ಬೀದಿ ದೀಪಗಳಿಲ್ಲದ್ದ ಕಾರಣ ರಾತ್ರಿ ವೇಳೆ ಮಹಿಳೆಯರು, ಮಕ್ಕಳು ಓಡಾಡಲು ಭಯಪಡುತ್ತಾರೆ. ಶಕ್ತಿನಗರದಲ್ಲಿ ಸ್ವಚ್ಛತೆ ಎನ್ನುವುದು ಮರೀಚಿಕೆಯಾಗಿದೆ. ರಸ್ತೆ ಬದಿಯಲ್ಲಿ ಹಾಗೂ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಎಸೆಯಲಾಗುತ್ತದೆ. ಈ ತ್ಯಾಜ್ಯದಿಂದ ದುರ್ವಾಸನೆ ಬರುತ್ತಿದೆ. ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಮಲೇರಿಯಾ, ಡೆಂಗಿ ಹರಡುವ ಭೀತಿ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ. </p><p>ಇಲ್ಲಿ ಶಕ್ತಿದೇವಿ ದೇವಸ್ಥಾನವಿದ್ದು, ಈ ಮಾರ್ಗದಲ್ಲಿನ ವಾಕಿಂಗ್ ಪಾತ್ ಹಾಳಾಗಿದೆ. ಗಿಡಗಂಟಿಗಳು ಬೆಳೆದಿವೆ. ಇದರಿಂದ ಪಾದಚಾರಿಗಳಿಗೆ ಹಾಗೂ ವಾಯುವಿಹಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. </p><p>ಇಲ್ಲಿನ ಬಹುತೇಕ ರಸ್ತೆಗಳ ಹಾಳಾಗಿದ್ದು, ವಾಹನಗಳ ಸಂಚಾರಕ್ಕೂ ತೊಂದರೆಯಾಗುತ್ತಿದೆ.</p><p>‘ವ್ಯವಸ್ಥಿತ ಚರಂಡಿ ಇಲ್ಲದ ಕಾರಣ, ಮಳೆ ಬಂದಾಗ ಕೊಳಚೆ ನೀರು ರಸ್ತೆಯ ಮೇಲೆಯೇ ಹರಿಯುತ್ತದೆ. ಮನೆಯ ಮುಂದೆಯೇ ಚರಂಡಿ ನೀರು ನಿಲ್ಲುತ್ತದೆ’ ಎಂದು ಶಕ್ತಿನಗರದ ನಿವಾಸಿ ಸುಪರ್ಣಾ ಜೈನ್ ಹೇಳುತ್ತಾರೆ. </p><p>‘ಅರುಣ ಕಾಲೊನಿಯಲ್ಲಿ ರಸ್ತೆ ದುರಸ್ತಿ ಹಾಗೂ ಚರಂಡಿ ವ್ಯವಸ್ಥೆ ಮಾಡಿಕೊಡಿ ಎಂದು ಹಲವು ಬಾರಿ ಪಾಲಿಕೆಯ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ನಿವಾಸಿಗಳಾದ ಅನಿಲ್ ಕುಮಾರ್ ಆರೋಪಿಸುತ್ತಾರೆ.</p>.<div><blockquote>ಶಕ್ತಿನಗರದ ಅರುಣ ಕಾಲೊನಿಯಲ್ಲಿ ಉತ್ತಮ ರಸ್ತೆ, ಒಳಚರಂಡಿ ವ್ಯವಸ್ಥೆಯಿದೆ. ಒಂದು ವೇಳೆ ಸಮಸ್ಯೆಯಿದ್ದಲ್ಲಿ ಸರಿಪಡಿಸಲಾಗುವುದು </blockquote><span class="attribution">ಚಂದ್ರಶೇಖರ ಮಾಲಿಪಾಟೀಲ, ವಲಯಾಧಿಕಾರಿ, ಹು–ಧಾ ಮಹಾನಗರ ಪಾಲಿಕೆ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>