<p><strong>ಹುಬ್ಬಳ್ಳಿ</strong>: ‘ಅಸಂಘಟಿತ ವಲಯದಲ್ಲಿರುವ ಶಾಮಿಯಾನ ಕಾರ್ಮಿಕರ ಕಲ್ಯಾಣಕ್ಕಾಗಿ ಶಾಮಿಯಾನ ಕಾರ್ಮಿಕರ ಕಲ್ಯಾಣ ಸಂಘ ಸ್ಥಾಪಿಸುವ ಚಿಂತನೆ ಇದೆ‘ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.</p>.<p>ನಗರದ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ನಲ್ಲಿ ಉತ್ತರ ಕರ್ನಾಟಕ ಶಾಮಿಯಾನ ಸಪ್ಲೈಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಷನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ‘ಶೃಂಗಾರ್ –2’ ಸಮಾವೇಶದ ಅಂಗವಾಗಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಾಮಿಯಾನ ಮಾಲೀಕರು ಸೆಸ್ ನೀಡಿದರೆ, ಅದಕ್ಕೆ ಸರ್ಕಾರದ ಅನುದಾನ ಸೇರಿಸಿ ಸಂಘ ಸ್ಥಾಪನೆ ಮಾಡಬಹುದು. ಇದರಿಂದ ಕಾರ್ಮಿಕರಿಗೂ ಅನುಕೂಲವಾಗುತ್ತದೆ’ ಎಂದರು. </p>.<p>‘ಕೆಲಸದ ವೇಳೆ ಸಂಭವಿಸುವ ಅವಘಡಗಳಿಂದ ಕಾರ್ಮಿಕರು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಎಲ್ಲರೂ ತಪ್ಪದೆ ಆರೋಗ್ಯ ವಿಮೆ ಮಾಡಿಸಬೇಕು. ಜಿಎಸ್ಟಿ ತೆರಿಗೆಯನ್ನು ಶೇ 18ರಿಂದ ಶೇ 12ಕ್ಕೆ ಇಳಿಕೆ ಮಾಡುವ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುವುದು’ ಎಂದು ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಮಾತನಾಡಿ, ‘ಶಾಮಿಯಾನ ಕಾರ್ಮಿಕರದ್ದು ಪರಿಶ್ರಮದ ಕೆಲಸ. ಯಾವುದೇ ಕಾರ್ಯಕ್ರಮ ಯಶಸ್ವಿಯಾಗಲು ಶಾಮಿಯಾನದವರ ಕೊಡುಗೆ ಇರುತ್ತದೆ. ಆಧುನಿಕ ತಂತ್ರಜ್ಞಾನ, ಪರಿಕರಗಳನ್ನು ಬಳಸಿಕೊಂಡು ಪ್ರಗತಿ ಸಾಧಿಸಬೇಕು’ ಎಂದರು.</p>.<p>‘ಈ ಹಿಂದೆ ನಾನು ಸಂಘಕ್ಕೆ ಜಾಗ ಮಂಜೂರು ಮಾಡಿಸಿ, ಅಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದೆ. ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ ಅನುದಾನ ಕೊಡಿಸಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಆಲ್ ಇಂಡಿಯಾ ಟೆಂಟ್ ಡೀಲರ್ಸ್ ವೆಲ್ಫೇರ್ ಆರ್ಗನೈಸೇಷನ್ ಉಪಾಧ್ಯಕ್ಷ ಪೂರ್ಣಚಂದ್ರ ರಾವ್ ಮಾತನಾಡಿ, ‘ಸಂಘದಲ್ಲಿ 5 ಸಾವಿರ ಸದಸ್ಯರು, ನೋಂದಾಯಿತ 25 ಸಾವಿರ ಕಾರ್ಮಿಕರಿದ್ದಾರೆ. ಇವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಕೆಲಸದ ವೇಳೆ ಅವಘಡ ಸಂಭವಿಸಿ ಕಳೆದ ಮೂರ್ನಾಲ್ಕು ತಿಂಗಳಲ್ಲಿ 15ಕ್ಕೂ ಅಧಿಕ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸರ್ಕಾರ ಅವರ ಕುಟುಂಬಗಳಿಗೆ ಪರಿಹಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಪ್ರಮುಖರಾದ ಎನ್.ರಾಮರಾವ್, ಕೆ.ನರಸಿಂಹಮೂರ್ತಿ ಅಪ್ಪಣ್ಣ, ಮೋಹನ್ ಎಂ.ಗಜಕೋಶ, ಮನೋಹರ ಶೆಟ್ಟಿ, ಗಂಗಾಧರ ದುಬೆ, ಮಯೂರ ಮೋರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಅಸಂಘಟಿತ ವಲಯದಲ್ಲಿರುವ ಶಾಮಿಯಾನ ಕಾರ್ಮಿಕರ ಕಲ್ಯಾಣಕ್ಕಾಗಿ ಶಾಮಿಯಾನ ಕಾರ್ಮಿಕರ ಕಲ್ಯಾಣ ಸಂಘ ಸ್ಥಾಪಿಸುವ ಚಿಂತನೆ ಇದೆ‘ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.</p>.<p>ನಗರದ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ನಲ್ಲಿ ಉತ್ತರ ಕರ್ನಾಟಕ ಶಾಮಿಯಾನ ಸಪ್ಲೈಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಷನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ‘ಶೃಂಗಾರ್ –2’ ಸಮಾವೇಶದ ಅಂಗವಾಗಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಾಮಿಯಾನ ಮಾಲೀಕರು ಸೆಸ್ ನೀಡಿದರೆ, ಅದಕ್ಕೆ ಸರ್ಕಾರದ ಅನುದಾನ ಸೇರಿಸಿ ಸಂಘ ಸ್ಥಾಪನೆ ಮಾಡಬಹುದು. ಇದರಿಂದ ಕಾರ್ಮಿಕರಿಗೂ ಅನುಕೂಲವಾಗುತ್ತದೆ’ ಎಂದರು. </p>.<p>‘ಕೆಲಸದ ವೇಳೆ ಸಂಭವಿಸುವ ಅವಘಡಗಳಿಂದ ಕಾರ್ಮಿಕರು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಎಲ್ಲರೂ ತಪ್ಪದೆ ಆರೋಗ್ಯ ವಿಮೆ ಮಾಡಿಸಬೇಕು. ಜಿಎಸ್ಟಿ ತೆರಿಗೆಯನ್ನು ಶೇ 18ರಿಂದ ಶೇ 12ಕ್ಕೆ ಇಳಿಕೆ ಮಾಡುವ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುವುದು’ ಎಂದು ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಮಾತನಾಡಿ, ‘ಶಾಮಿಯಾನ ಕಾರ್ಮಿಕರದ್ದು ಪರಿಶ್ರಮದ ಕೆಲಸ. ಯಾವುದೇ ಕಾರ್ಯಕ್ರಮ ಯಶಸ್ವಿಯಾಗಲು ಶಾಮಿಯಾನದವರ ಕೊಡುಗೆ ಇರುತ್ತದೆ. ಆಧುನಿಕ ತಂತ್ರಜ್ಞಾನ, ಪರಿಕರಗಳನ್ನು ಬಳಸಿಕೊಂಡು ಪ್ರಗತಿ ಸಾಧಿಸಬೇಕು’ ಎಂದರು.</p>.<p>‘ಈ ಹಿಂದೆ ನಾನು ಸಂಘಕ್ಕೆ ಜಾಗ ಮಂಜೂರು ಮಾಡಿಸಿ, ಅಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದೆ. ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ ಅನುದಾನ ಕೊಡಿಸಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಆಲ್ ಇಂಡಿಯಾ ಟೆಂಟ್ ಡೀಲರ್ಸ್ ವೆಲ್ಫೇರ್ ಆರ್ಗನೈಸೇಷನ್ ಉಪಾಧ್ಯಕ್ಷ ಪೂರ್ಣಚಂದ್ರ ರಾವ್ ಮಾತನಾಡಿ, ‘ಸಂಘದಲ್ಲಿ 5 ಸಾವಿರ ಸದಸ್ಯರು, ನೋಂದಾಯಿತ 25 ಸಾವಿರ ಕಾರ್ಮಿಕರಿದ್ದಾರೆ. ಇವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಕೆಲಸದ ವೇಳೆ ಅವಘಡ ಸಂಭವಿಸಿ ಕಳೆದ ಮೂರ್ನಾಲ್ಕು ತಿಂಗಳಲ್ಲಿ 15ಕ್ಕೂ ಅಧಿಕ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸರ್ಕಾರ ಅವರ ಕುಟುಂಬಗಳಿಗೆ ಪರಿಹಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಪ್ರಮುಖರಾದ ಎನ್.ರಾಮರಾವ್, ಕೆ.ನರಸಿಂಹಮೂರ್ತಿ ಅಪ್ಪಣ್ಣ, ಮೋಹನ್ ಎಂ.ಗಜಕೋಶ, ಮನೋಹರ ಶೆಟ್ಟಿ, ಗಂಗಾಧರ ದುಬೆ, ಮಯೂರ ಮೋರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>