<p><strong>ಹುಬ್ಬಳ್ಳಿ:</strong> ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಬೆಣ್ಣೆಹಳ್ಳವು ಮಂಗಳವಾರ ಉಕ್ಕಿ ಹರಿದಿದೆ. ನಸುಕಿನಲ್ಲಿ ಬೆಳಿಗ್ಗೆ 3ರ ಹೊತ್ತಿಗೆ ತಾಲ್ಲೂಕಿನ ಕಿರೇಸೂರು, ಹೆಬಸೂರು, ಇಂಗಳಹಳ್ಳಿ, ನಾಗರಹಳ್ಳಿ, ಮಂಟೂರು ಗ್ರಾಮಗಳಿಗೆ ನೀರು ನುಗ್ಗಿದ್ದು, ಜನರ ಬದುಕು ಅಸ್ತವ್ಯಸ್ತಗೊಂಡಿದೆ.</p>.<p>ಪ್ರವಾಹದಿಂದ ಎಚ್ಚೆತ್ತ ಜನ ತಕ್ಷಣ ತಮ್ಮ ಕುಟುಂಬದವರೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಿದರು. ವಿಷಯ ತಿಳಿಯುತ್ತಿದ್ದಂತೆ ತಾಲ್ಲೂಕು ಆಡಳಿತವು ಅಗತ್ಯವಿರುವೆಡೆ ಕಾಳಜಿ ಕೇಂದ್ರಗಳನ್ನು ತೆರೆದು, ಸಂತ್ರಸ್ತರಿಗೆ ಆಹಾರ ವ್ಯವಸ್ಥೆ ಮಾಡಿದೆ. ತಾಸುಗಟ್ಟಲೆ ನಿಂತ ನೀರಿನಿಂದಾಗಿ ಹಲವು ಮನೆಗಳ ಗೋಡೆ ಕುಸಿದಿದೆ.</p>.<p>‘ಪಕ್ಕದ ಮನೆಯವರು ಬಾಗಿಲು ಬಡಿದಾಗಲೇ ಪ್ರವಾಹ ಬಂದಿರುವುದು ಗೊತ್ತಾಯಿತು. ಅಷ್ಟೊತ್ತಿಗೆ ಇಡೀ ಊರೇ ಎಚ್ಚರಗೊಂಡಿತ್ತು. ಸರಕು–ಸಾಮಾನುಗಳನ್ನು ಮೇಲಕ್ಕಿಟ್ಟು, ಸುರಕ್ಷಿತ ಸ್ಥಳಕ್ಕೆ ತೆರಳಿದವು’ ಎಂದು ಕಿರೇಸೂರಿನ ಶಿವಾನಂದ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಪ್ರವಾಹದಿಂದಾಗಿ ವಿವಿಧ ಗ್ರಾಮಗಳಲ್ಲಿ ನೂರಾರು ಮನೆಗಳು ಜಲಾವೃತವಾಗಿವೆ. ಕೆಲವೆಡೆ ಕಾಳಜಿ ಕೇಂದ್ರಗಳನ್ನು ತೆರೆದು ತಾತ್ಕಾಲಿಕ ಆಶ್ರಯ ಒದಗಿಸಲಾಗಿದೆ. ಯಾವುದೇ ಜೀವಹಾನಿಯ ವರದಿಯಾಗಿಲ್ಲ’ ಎಂದು ತಹಶೀಲ್ದಾರ್ ಪ್ರಕಾಶ ನಾಶಿ ತಿಳಿಸಿದರು.</p>.<p><strong>ಕುಸಿದ ಮನೆ:</strong> ಮಳೆಗೆ ಹುಬ್ಬಳ್ಳಿಯ ಕಮರಿಪೇಟೆಯ ಅಬಿದಾ ಬೇಗಂ ಸಿಂಗೋಟಿ ಅವರ ಮನೆ ಭಾಗಶಃ ಕುಸಿದಿದೆ. ತಾಲ್ಲೂಕಿನ ಅದರಗುಂಚಿಯಲ್ಲಿ ಹಟೇಲಸಾಬ ಛಬ್ಬಿ ಅವರ ಮನೆ ಮುಂಭಾಗ ಬಿದ್ದು ಹೋಗಿದೆ. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. ಸ್ಥಳಕ್ಕೆ ತಾಲ್ಲೂಕು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p class="Briefhead">ಹಳ್ಳಗಳ ಪಥ ಬದಲಾವಣೆಯಿಂದ ಪ್ರವಾಹ: ಸಚಿವ</p>.<p>‘ಬೆಣ್ಣೆಹಳ್ಳ, ತುಪ್ಪರಿಹಳ್ಳ, ನಿಗದಿ ಹಳ್ಳಗಳು ತಮ್ಮ ಪಥ ಬದಲಾಯಿಸಿದ್ದರಿಂದ ಗ್ರಾಮಗಳು ಪ್ರವಾಹ ಭೀತಿ ಎದುರಿಸುವಂತಾಗಿದೆ. ಹಳ್ಳಗಳ ಪಾತ್ರದ ಒತ್ತುವರಿ ಹಾಗೂ ತೋಟ ನಿರ್ಮಾಣವೂ ಇದಕ್ಕೆ ಕಾರಣ’ ಎಂದು ವಸತಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.</p>.<p>ತಾಲ್ಲೂಕಿನ ಪ್ರವಾಹಪೀಡಿತ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವಾಹ ಬಾರದಂತೆ ಹಳ್ಳಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ತುಪ್ಪರಿಹಳ್ಳ ಅಭಿವೃದ್ಧಿಗೆ ₹312 ಕೋಟಿ ಮೊತ್ತದ ಟೆಂಡರ್ ಕರೆಯಲಾಗಿದ್ದು, ಬೆಣ್ಣೆಹಳ್ಳಕ್ಕೂ ಯೋಜನೆ ರೂಪಿಸಲಾಗುತ್ತಿದೆ. ಮಳೆಹಾನಿ ಸಮೀಕ್ಷೆ ನಡೆಸಿ ಶೀಘ್ರ ಪರಿಹಾರ ವಿತರಿಸಲಾಗುವುದು’ ಎಂದರು.</p>.<p>‘ಹೆಬಸೂರು, ಇಂಗಳಹಳ್ಳಿ ಗ್ರಾಮಗಳ ಶಾಲೆಗಳು ಸೇರಿದಂತೆ ಹಳ್ಳದ ಪಕ್ಕದಲ್ಲಿರುವ ಶಾಲೆಗಳನ್ನು ಸ್ಥಳಾಂತರ ಮಾಡಲು ಯೋಜನೆ ರೂಪಿಸಲಾಗುವುದು’ ಎಂದು ತಿಳಿಸಿದರು.</p>.<p>ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ, ತಾಲೂಕು ಪಂಚಾಯಿತಿ ಗಂಗಾಧರ ಕಂದಕೂರ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಮೇಶ ಗೋಕಾಕ, ಕಿರೇಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಜುರೆಡ್ಡಿ ನೀಲರೆಡ್ಡಿ, ಹೆಬಸೂರು ಪಂಚಾಯಿತಿ ಅಧ್ಯಕ್ಷೆ ಮಲ್ಲವ್ವ ಕುರುಡಿಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಬೆಣ್ಣೆಹಳ್ಳವು ಮಂಗಳವಾರ ಉಕ್ಕಿ ಹರಿದಿದೆ. ನಸುಕಿನಲ್ಲಿ ಬೆಳಿಗ್ಗೆ 3ರ ಹೊತ್ತಿಗೆ ತಾಲ್ಲೂಕಿನ ಕಿರೇಸೂರು, ಹೆಬಸೂರು, ಇಂಗಳಹಳ್ಳಿ, ನಾಗರಹಳ್ಳಿ, ಮಂಟೂರು ಗ್ರಾಮಗಳಿಗೆ ನೀರು ನುಗ್ಗಿದ್ದು, ಜನರ ಬದುಕು ಅಸ್ತವ್ಯಸ್ತಗೊಂಡಿದೆ.</p>.<p>ಪ್ರವಾಹದಿಂದ ಎಚ್ಚೆತ್ತ ಜನ ತಕ್ಷಣ ತಮ್ಮ ಕುಟುಂಬದವರೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಿದರು. ವಿಷಯ ತಿಳಿಯುತ್ತಿದ್ದಂತೆ ತಾಲ್ಲೂಕು ಆಡಳಿತವು ಅಗತ್ಯವಿರುವೆಡೆ ಕಾಳಜಿ ಕೇಂದ್ರಗಳನ್ನು ತೆರೆದು, ಸಂತ್ರಸ್ತರಿಗೆ ಆಹಾರ ವ್ಯವಸ್ಥೆ ಮಾಡಿದೆ. ತಾಸುಗಟ್ಟಲೆ ನಿಂತ ನೀರಿನಿಂದಾಗಿ ಹಲವು ಮನೆಗಳ ಗೋಡೆ ಕುಸಿದಿದೆ.</p>.<p>‘ಪಕ್ಕದ ಮನೆಯವರು ಬಾಗಿಲು ಬಡಿದಾಗಲೇ ಪ್ರವಾಹ ಬಂದಿರುವುದು ಗೊತ್ತಾಯಿತು. ಅಷ್ಟೊತ್ತಿಗೆ ಇಡೀ ಊರೇ ಎಚ್ಚರಗೊಂಡಿತ್ತು. ಸರಕು–ಸಾಮಾನುಗಳನ್ನು ಮೇಲಕ್ಕಿಟ್ಟು, ಸುರಕ್ಷಿತ ಸ್ಥಳಕ್ಕೆ ತೆರಳಿದವು’ ಎಂದು ಕಿರೇಸೂರಿನ ಶಿವಾನಂದ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಪ್ರವಾಹದಿಂದಾಗಿ ವಿವಿಧ ಗ್ರಾಮಗಳಲ್ಲಿ ನೂರಾರು ಮನೆಗಳು ಜಲಾವೃತವಾಗಿವೆ. ಕೆಲವೆಡೆ ಕಾಳಜಿ ಕೇಂದ್ರಗಳನ್ನು ತೆರೆದು ತಾತ್ಕಾಲಿಕ ಆಶ್ರಯ ಒದಗಿಸಲಾಗಿದೆ. ಯಾವುದೇ ಜೀವಹಾನಿಯ ವರದಿಯಾಗಿಲ್ಲ’ ಎಂದು ತಹಶೀಲ್ದಾರ್ ಪ್ರಕಾಶ ನಾಶಿ ತಿಳಿಸಿದರು.</p>.<p><strong>ಕುಸಿದ ಮನೆ:</strong> ಮಳೆಗೆ ಹುಬ್ಬಳ್ಳಿಯ ಕಮರಿಪೇಟೆಯ ಅಬಿದಾ ಬೇಗಂ ಸಿಂಗೋಟಿ ಅವರ ಮನೆ ಭಾಗಶಃ ಕುಸಿದಿದೆ. ತಾಲ್ಲೂಕಿನ ಅದರಗುಂಚಿಯಲ್ಲಿ ಹಟೇಲಸಾಬ ಛಬ್ಬಿ ಅವರ ಮನೆ ಮುಂಭಾಗ ಬಿದ್ದು ಹೋಗಿದೆ. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. ಸ್ಥಳಕ್ಕೆ ತಾಲ್ಲೂಕು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p class="Briefhead">ಹಳ್ಳಗಳ ಪಥ ಬದಲಾವಣೆಯಿಂದ ಪ್ರವಾಹ: ಸಚಿವ</p>.<p>‘ಬೆಣ್ಣೆಹಳ್ಳ, ತುಪ್ಪರಿಹಳ್ಳ, ನಿಗದಿ ಹಳ್ಳಗಳು ತಮ್ಮ ಪಥ ಬದಲಾಯಿಸಿದ್ದರಿಂದ ಗ್ರಾಮಗಳು ಪ್ರವಾಹ ಭೀತಿ ಎದುರಿಸುವಂತಾಗಿದೆ. ಹಳ್ಳಗಳ ಪಾತ್ರದ ಒತ್ತುವರಿ ಹಾಗೂ ತೋಟ ನಿರ್ಮಾಣವೂ ಇದಕ್ಕೆ ಕಾರಣ’ ಎಂದು ವಸತಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.</p>.<p>ತಾಲ್ಲೂಕಿನ ಪ್ರವಾಹಪೀಡಿತ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವಾಹ ಬಾರದಂತೆ ಹಳ್ಳಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ತುಪ್ಪರಿಹಳ್ಳ ಅಭಿವೃದ್ಧಿಗೆ ₹312 ಕೋಟಿ ಮೊತ್ತದ ಟೆಂಡರ್ ಕರೆಯಲಾಗಿದ್ದು, ಬೆಣ್ಣೆಹಳ್ಳಕ್ಕೂ ಯೋಜನೆ ರೂಪಿಸಲಾಗುತ್ತಿದೆ. ಮಳೆಹಾನಿ ಸಮೀಕ್ಷೆ ನಡೆಸಿ ಶೀಘ್ರ ಪರಿಹಾರ ವಿತರಿಸಲಾಗುವುದು’ ಎಂದರು.</p>.<p>‘ಹೆಬಸೂರು, ಇಂಗಳಹಳ್ಳಿ ಗ್ರಾಮಗಳ ಶಾಲೆಗಳು ಸೇರಿದಂತೆ ಹಳ್ಳದ ಪಕ್ಕದಲ್ಲಿರುವ ಶಾಲೆಗಳನ್ನು ಸ್ಥಳಾಂತರ ಮಾಡಲು ಯೋಜನೆ ರೂಪಿಸಲಾಗುವುದು’ ಎಂದು ತಿಳಿಸಿದರು.</p>.<p>ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ, ತಾಲೂಕು ಪಂಚಾಯಿತಿ ಗಂಗಾಧರ ಕಂದಕೂರ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಮೇಶ ಗೋಕಾಕ, ಕಿರೇಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಜುರೆಡ್ಡಿ ನೀಲರೆಡ್ಡಿ, ಹೆಬಸೂರು ಪಂಚಾಯಿತಿ ಅಧ್ಯಕ್ಷೆ ಮಲ್ಲವ್ವ ಕುರುಡಿಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>