<p><strong>ಹುಬ್ಬಳ್ಳಿ: ‘</strong>ವಂದೇ ಮಾತರಂ ಮತ್ತು ಜನಗಣಮನ ಎರಡೂ ರಾಷ್ಟ್ರಗೀತೆಗಳಾಗಿದ್ದು, ಅವುಗಳಿಗೆ ಅಪಮಾನಿಸುವ ಕೆಲಸ ಯಾರೂ ಮಾಡಬಾರದು’ ಎಂದು ಸಂಸದ ಜಗದೀಶ್ ಶೆಟ್ಟರ್ ಇಲ್ಲಿ ಹೇಳಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಂದೇ ಮಾತರಂ ಗೀತೆ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ಆಗಿದ್ದರೆ, ಸಂವಿಧಾನದ ಪ್ರಕಾರ ಜನಗಣಮನ ಅಧಿಕೃತ ರಾಷ್ಟ್ರಗೀತೆಯಾಗಿದೆ’ ಎಂದು ಹೇಳಿದರು. </p>.<p>‘ಈ ಎರಡೂ ಗೀತೆಗಳಿಗೆ ಅದರದ್ದೇ ಆದ ಗೌರವವಿದ್ದು, ಈ ಬಗ್ಗೆ ಚರ್ಚಿಸುವುದು ಅನಗತ್ಯ’ ಎಂದರು.</p>.<p>‘ಬಿಜೆಪಿಯಲ್ಲಿ ಆಂತರಿಕ ಕಲಹವಿಲ್ಲ. ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಎನ್ನುವುದು ಊಹಾಪೋಹ. ಮೂರು ವರ್ಷಕ್ಕೊಮ್ಮೆ ಅಧ್ಯಕ್ಷರ ಬದಲಾವಣೆ ಇರುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಉಗ್ರರಿಗೆ ರಾಜಾತಿಥ್ಯ ಕುರಿತ ಪ್ರಶ್ನೆಗೆ, ‘ಲಷ್ಕರ್ ಉಗ್ರರೇ ಇರಲಿ, ಉಮೇಶ ರೆಡ್ಡಿಯೇ ಇರಲಿ ರಾಜಾತಿಥ್ಯ ಕೈಬಿಟ್ಟು, ಅಧಿಕಾರಿಗಳ ವಿರುದ್ಧ ಕ್ರಮಜರುಗಿಸಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: ‘</strong>ವಂದೇ ಮಾತರಂ ಮತ್ತು ಜನಗಣಮನ ಎರಡೂ ರಾಷ್ಟ್ರಗೀತೆಗಳಾಗಿದ್ದು, ಅವುಗಳಿಗೆ ಅಪಮಾನಿಸುವ ಕೆಲಸ ಯಾರೂ ಮಾಡಬಾರದು’ ಎಂದು ಸಂಸದ ಜಗದೀಶ್ ಶೆಟ್ಟರ್ ಇಲ್ಲಿ ಹೇಳಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ವಂದೇ ಮಾತರಂ ಗೀತೆ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ಆಗಿದ್ದರೆ, ಸಂವಿಧಾನದ ಪ್ರಕಾರ ಜನಗಣಮನ ಅಧಿಕೃತ ರಾಷ್ಟ್ರಗೀತೆಯಾಗಿದೆ’ ಎಂದು ಹೇಳಿದರು. </p>.<p>‘ಈ ಎರಡೂ ಗೀತೆಗಳಿಗೆ ಅದರದ್ದೇ ಆದ ಗೌರವವಿದ್ದು, ಈ ಬಗ್ಗೆ ಚರ್ಚಿಸುವುದು ಅನಗತ್ಯ’ ಎಂದರು.</p>.<p>‘ಬಿಜೆಪಿಯಲ್ಲಿ ಆಂತರಿಕ ಕಲಹವಿಲ್ಲ. ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಎನ್ನುವುದು ಊಹಾಪೋಹ. ಮೂರು ವರ್ಷಕ್ಕೊಮ್ಮೆ ಅಧ್ಯಕ್ಷರ ಬದಲಾವಣೆ ಇರುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಉಗ್ರರಿಗೆ ರಾಜಾತಿಥ್ಯ ಕುರಿತ ಪ್ರಶ್ನೆಗೆ, ‘ಲಷ್ಕರ್ ಉಗ್ರರೇ ಇರಲಿ, ಉಮೇಶ ರೆಡ್ಡಿಯೇ ಇರಲಿ ರಾಜಾತಿಥ್ಯ ಕೈಬಿಟ್ಟು, ಅಧಿಕಾರಿಗಳ ವಿರುದ್ಧ ಕ್ರಮಜರುಗಿಸಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>