‘ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿತ್ತಿಪತ್ರಗಳನ್ನು ಮನೆಗಳಿಗೆ ತಲುಪಿಸುವುದು, ಬೃಹತ್ ಹೋರ್ಡಿಂಗ್ಗಳನ್ನು ಹಾಕುವುದು, ಬೀದಿ ನಾಟಕಗಳ ಮೂಲಕ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು. ಜತೆಗೆ ಮುಖಗವಸು ತೊಡದಿರುವುದು ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸದವರ ವಿರುದ್ಧ ಕಾನೂನು ರೀತಿಯಲ್ಲೂ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ ಸಾರ್ವಜನಿಕರು ಇದಕ್ಕೆ ಅವಕಾಶ ನೀಡದೆ, ವೈಯಕ್ತಿಕ ಸುರಕ್ಷತೆಗೆ ಆದ್ಯತೆ ನೀಡಬೇಕು’ ಎಂದು ಶೆಟ್ಟರ್ ಹೇಳಿದರು.