ಆಸ್ಪತ್ರೆಗೆ ದಾಖಲಾಗಿದ್ದ ಒಟ್ಟು ಒಂಬತ್ತು ಗಾಯಾಳುಗಳ ಪೈಕಿ ಒಬ್ಬರು ಮೃತಪಟ್ಟಿದ್ದರು. ಐದು ಜನ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಇನ್ನುಳಿದ ಮೂವರು ಗಾಯಾಳುಗಳಾದ ವಿನಾಯಕ ಭಜಂತ್ರಿ, ಅನಿಲ ಮತ್ತು ಮಹಾಂತೇಶ ಹೊಸಮನಿ ಅವರನ್ನು ಭೇಟಿ ಮಾಡಿ ‘ಕಿಮ್ಸ್ನಲ್ಲಿ ನಿಮಗೆ ಸಂಪೂರ್ಣ ಚಿಕಿತ್ಸೆ ಸಿಗುತ್ತದೆ. ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕಿಲ್ಲ’ ಎಂದರು.