ಹುಬ್ಬಳ್ಳಿ: ತಾಲ್ಲೂಕಿನ ಶಿರಗುಪ್ಪಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ –63ರ ವಿಸ್ತರಣೆಗಾಗಿ, ರಸ್ತೆ ಬದಿಯ ಕೆಲ ಅಂಗಡಿಗಳನ್ನು ತಾಲ್ಲೂಕು ಆಡಳಿತವು ಸೋಮವಾರ ತೆರವುಗೊಳಿಸಿತು.ಬೆಳಿಗ್ಗೆ 6ಕ್ಕೆಜೆಸಿಬಿ ವಾಹನದೊಂದಿಗೆ ಸ್ಥಳಕ್ಕೆ ಬಂದ ಅಧಿಕಾರಿಗಳು, ಮಧ್ಯಾಹ್ನ 12ರ ತನಕ ತೆರವು ಕಾರ್ಯಾಚರಣೆ ನಡೆಸಿದರು. ಅಹಿತಕರ ಘಟನೆ ನಡೆಯದಂತೆ, ಸ್ಥಳದಲ್ಲಿ 50ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿತ್ತು. ನಗರ ಸಶಸ್ತ್ರ ಪಡೆಯ ವಾಹನ ಸಹ ಸ್ಥಳದಲ್ಲಿ ಬೀಡು ಬಿಟ್ಟಿತ್ತು.