ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಯ ನೋಡಿಕೊಂಡು ಕಾಂಗ್ರೆಸ್‌ನ ಇತರೆ ಅಭ್ಯರ್ಥಿಗಳ ಪರ ಪ್ರಚಾರ: ಶಿವರಾಜ್‌ಕುಮಾರ್‌

Published 12 ಮಾರ್ಚ್ 2024, 16:01 IST
Last Updated 12 ಮಾರ್ಚ್ 2024, 16:01 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಶಿವಮೊಗ್ಗದಲ್ಲಿ ಗೀತಾ ಪರ ಇನ್ನೇನು ಪ್ರಚಾರ ಪ್ರಾರಂಭಿಸಬೇಕು. ಕಾಂಗ್ರೆಸ್‌ನ ಇತರೆ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಕರೆದರೆ, ಸಮಯ ನೋಡಿಕೊಂಡು ಹೋಗುತ್ತೇನೆ. ಈ ಹಿಂದೆಯೂ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದೇನೆ’ ಎಂದು ನಟ ಶಿವರಾಜ್‌ಕುಮಾರ್‌ ಹೇಳಿದರು.

‘ಕರಟಕ ದಮನಕ’ ಸಿನಿಮಾ ಈಚೆಗೆ ತೆರೆಕಂಡ ಹಿನ್ನೆಲೆಯಲ್ಲಿ ನಗರದ ರೂಪಂ ಚಿತ್ರಮಂದಿರಕ್ಕೆ ಮಂಗಳವಾರ ಭೇಟಿ ನೀಟಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಶಿವಮೊಗ್ಗ ಗೀತಾ ಅವರ ತವರು. ಅಲ್ಲೇ ಹುಟ್ಟಿ, ಶಿಕ್ಷಣ ಪಡೆದಿದ್ದಾರೆ. ಹಾಗಾಗಿ, ಶಿವಮೊಗ್ಗದಿಂದ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ಅಲ್ಲಿ ಮನೆ ಮಾಡಲಾಗಿದೆ. ಗೀತಾ ಗೆಲ್ಲುವ ವಿಶ್ವಾಸವಿದೆ’ ಎಂದು ನುಡಿದರು.

ಬಿಜೆಪಿಯವರು ಪ್ರಧಾನಿ ಮೋದಿ ಮುಖ ತೋರಿಸಿ, ಮತ ಕೇಳುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ‘ನಾವು ಜನರಿಗೆ ನೀಡುವ ಭರವಸೆ, ವಿಶ್ವಾಸ ಮುಖ್ಯವಾಗುತ್ತದೆ. ಮುಖವಲ್ಲ’ ಎಂದರು.  

‘ಜನಪ್ರತಿನಿಧಿಯಾದರೆ ಜನಸೇವೆ ಮಾಡಲು ಹೆಚ್ಚು ಶಕ್ತಿ ಸಿಗುತ್ತದೆ. ಹಾಗಾಗಿ, ರಾಜಕಾರಣ ಅಗತ್ಯವಿದೆ. ಕಳೆದ ಬಾರಿ ಗೀತಾ ಪರಾಭವಗೊಂಡಿದ್ದರೂ, ಈ ಬಾರಿ ಗೆಲ್ಲಿಸಲು ಯೋಜನೆ ರೂಪಿಸಲಾಗುತ್ತಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT