ಸಚಿವರು ಬುಧವಾರ ರಾತ್ರಿ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿದ್ದರು. ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ವಿಜಯಪುರಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಗೋಕುಲ ರಸ್ತೆಯ ಬಸವೇಶ್ವರ ರಸ್ತೆ ಕ್ರಾಸ್ ಹಾಗೂ ಕೇಶ್ವಾಪುರ ಬಳಿಯ ದೇಸಾಯಿ ಕ್ರಾಸ್ ಬಳಿಯ ಸೇತುವೆ ಬಳಿ ಏಕಮುಖ ಸಂಚಾರ ಇತ್ತು. ಈ ಎರಡು ಸ್ಥಳಗಳಲ್ಲಿ ಸಚಿವರ ಕಾರು ಹೋಗುವವರೆಗೆ ಇತರ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಸಂಚಾರ ಎಸಿಪಿ ಎಂ.ವಿ. ನಾಗನೂರ, ಉತ್ತರ ಸಂಚಾರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀಕಾಂತ ತೋಟಗಿ ಹಾಗೂ ಪೂರ್ವ ಸಂಚಾರ ಠಾಣೆ ಇನ್ಸ್ಪೆಕ್ಟರ್ ಶ್ರೀಪಾದ ಜಲ್ದೆ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಕಮಿಷನರ್ ಎಂ.ಎನ್. ನಾಗರಾಜ ತಿಳಿಸಿದ್ದಾರೆ.