ಅಗ್ನಿಪಥ ಯೋಜನೆ ವಿರುದ್ಧ ಯುವಕರು ಆಕ್ರೋಶಗೊಂಡಿದ್ದಾರೆ. ಹಿಂದಿನ ಪದ್ದತಿಯನ್ನೇ ಮುಂದುವರಿಸಬೇಕು, ರಕ್ಷಣಾ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಬಿಜೆಪಿ ಕೇಸರೀಕರಣ ಮಾಡಲು ಹೊರಟಿದೆ. ಆ ಮೂಲಕ ಅಶಾಂತಿ ಸೃಷ್ಟಿಸಲು ಹೊರಟಿದ್ದಾರೆ. ವಿವಾದ ಸೃಷ್ಟಿಸುವಲ್ಲಿ ಬಿಜೆಪಿಗರು ನಿಸ್ಸೀಮರು. ರಾಜ್ಯದಲ್ಲಿರುವುದು ಆರ್ಎಸ್ಎಸ್ ಪ್ರಾಯೋಜಿತ ಸರ್ಕಾರ ಹೀಗಾಗಿ ಅವರು ಪೊಲೀಸ್ ಠಾಣೆಗೂ ಮುತ್ತಿಗೆ ಹಾಕಿ ಗಲಾಟೆ ಮಾಡುತ್ತಾರೆ. ಅದೇ ಕಾಂಗ್ರೆಸ್ಸಿಗರು ಮಾಡಿದರೆ ಕೇಸ್ ಹಾಕಿ ಪಕ್ಷಪಾತ ಮಾಡುತ್ತಿದ್ದಾರೆ.