<p><strong>ಹುಬ್ಬಳ್ಳಿ</strong>: ‘ದೇಶದ ಬೆಳವಣಿಗೆಗೆಆರ್ಎಸ್ಎಸ್ ಕೊಡುಗೆ ಏನೂ ಇಲ್ಲ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿಯೂ ಬಿಜೆಪಿ ಹೋರಾಡಿಲ್ಲ. ಹೀಗಿದ್ದಾಗಲೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ಗೆ ಹೋರಾಟದ ಪಾಠ ಹೇಳುತ್ತಾರೆಯೇ?’ ಎಂದು ವಿಧಾನಸಭೆವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.</p>.<p>‘ಒಂದು ಕೊಠಡಿಯೊಳಗೆ ಇಬ್ಬರು ಹೋದರೆಕಾಂಗ್ರೆಸ್ನಿಂದ ಒಬ್ಬ ನಾಯಕ ಹುಟ್ಟುತ್ತಾನೆ’ ಎನ್ನುವ ಜೋಶಿ ಹೇಳಿಕೆಗೆ ಅವರು ಭಾನುವಾರ ನಗರದಲ್ಲಿ ಹೀಗೆ ಪ್ರತಿಕ್ರಿಯಿಸಿದರು.</p>.<p>‘ಹೋರಾಟ ಕಾಂಗ್ರೆಸ್ಗೆ ರಕ್ತಗತವಾಗಿ ಬಂದಿದೆ.ಹೋರಾಟ ಮಾಡದೆ ಅಧಿಕಾರಕ್ಕೆ ಬಂದ ಪಕ್ಷ ಬಿಜೆಪಿ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿಯಿಂದ ಯಾರಾದರೂ ಜೀವ ಕಳೆದುಕೊಂಡಿದ್ದಾರೆಯೇ? ಆ ಸಂದರ್ಭದಲ್ಲಿ ಜೋಶಿ ಹುಟ್ಟಿದ್ದರೋ ಇಲ್ಲವೋ ಗೊತ್ತಿಲ್ಲ. ಕಾಂಗ್ರೆಸ್ಗೆ ಹೋರಾಟದ ಬಗ್ಗೆ ಹೇಳುತ್ತಾರೆ’ ಎಂದು ತಿರುಗೇಟು ನೀಡಿದರು.</p>.<p><strong>ಕಾರ್ಯಕರ್ತರ ಮೂಲಕ ಸಂಘಟನೆ:</strong> ‘ರಾಜ್ಯದಾದ್ಯಂತ ಜನರ ಸಮಸ್ಯೆ ತಿಳಿದು ಆ ನಿಟ್ಟಿನಲ್ಲಿ ಕಾರ್ಯಕರ್ತರ ಮೂಲಕ ಪಕ್ಷ ಸಂಘಟಿಸಲು ಬೆಳಗಾವಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶವನ್ನು ಸೋಮವಾರ ನಗರದಲ್ಲಿ ಆಯೋಜಿಸಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.</p>.<p>ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾನುವಾರ ರಾತ್ರಿ ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ದೇಶದ ಬೆಳವಣಿಗೆಗೆಆರ್ಎಸ್ಎಸ್ ಕೊಡುಗೆ ಏನೂ ಇಲ್ಲ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿಯೂ ಬಿಜೆಪಿ ಹೋರಾಡಿಲ್ಲ. ಹೀಗಿದ್ದಾಗಲೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ಗೆ ಹೋರಾಟದ ಪಾಠ ಹೇಳುತ್ತಾರೆಯೇ?’ ಎಂದು ವಿಧಾನಸಭೆವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.</p>.<p>‘ಒಂದು ಕೊಠಡಿಯೊಳಗೆ ಇಬ್ಬರು ಹೋದರೆಕಾಂಗ್ರೆಸ್ನಿಂದ ಒಬ್ಬ ನಾಯಕ ಹುಟ್ಟುತ್ತಾನೆ’ ಎನ್ನುವ ಜೋಶಿ ಹೇಳಿಕೆಗೆ ಅವರು ಭಾನುವಾರ ನಗರದಲ್ಲಿ ಹೀಗೆ ಪ್ರತಿಕ್ರಿಯಿಸಿದರು.</p>.<p>‘ಹೋರಾಟ ಕಾಂಗ್ರೆಸ್ಗೆ ರಕ್ತಗತವಾಗಿ ಬಂದಿದೆ.ಹೋರಾಟ ಮಾಡದೆ ಅಧಿಕಾರಕ್ಕೆ ಬಂದ ಪಕ್ಷ ಬಿಜೆಪಿ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿಯಿಂದ ಯಾರಾದರೂ ಜೀವ ಕಳೆದುಕೊಂಡಿದ್ದಾರೆಯೇ? ಆ ಸಂದರ್ಭದಲ್ಲಿ ಜೋಶಿ ಹುಟ್ಟಿದ್ದರೋ ಇಲ್ಲವೋ ಗೊತ್ತಿಲ್ಲ. ಕಾಂಗ್ರೆಸ್ಗೆ ಹೋರಾಟದ ಬಗ್ಗೆ ಹೇಳುತ್ತಾರೆ’ ಎಂದು ತಿರುಗೇಟು ನೀಡಿದರು.</p>.<p><strong>ಕಾರ್ಯಕರ್ತರ ಮೂಲಕ ಸಂಘಟನೆ:</strong> ‘ರಾಜ್ಯದಾದ್ಯಂತ ಜನರ ಸಮಸ್ಯೆ ತಿಳಿದು ಆ ನಿಟ್ಟಿನಲ್ಲಿ ಕಾರ್ಯಕರ್ತರ ಮೂಲಕ ಪಕ್ಷ ಸಂಘಟಿಸಲು ಬೆಳಗಾವಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶವನ್ನು ಸೋಮವಾರ ನಗರದಲ್ಲಿ ಆಯೋಜಿಸಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.</p>.<p>ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾನುವಾರ ರಾತ್ರಿ ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>