ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಗೌರವಾಧ್ಯಕ್ಷರೂ ಆಗಿರುವ ‘ಮುಖ್ಯಮಂತ್ರಿ’ ಚಂದ್ರು, ಈ ವರದಿಗೆ ಸಂಬಂಧಿಸಿದಂತೆ 2021ರ ಜುಲೈನಲ್ಲಿ ಹೈಕೋರ್ಟ್ಗೆ ರಿಟ್ ಅರ್ಜಿ ಹಾಕಿದ್ದಾರೆ. 2015ರಲ್ಲಿ ಸಿದ್ಧಗೊಂಡಿರುವ ವರದಿಯನ್ನು ಬಹಿರಂಗಪಡಿಸಲು ಸರ್ಕಾರಕ್ಕೆ ಆದೇಶ ನೀಡುವಂತೆ ಕೋರಿದ್ದಾರೆ’ ಎಂದರು.