<p><strong>ನವಲಗುಂದ (ಧಾರವಾಡ):</strong> 'ದಂಪತಿ ಒಂದು ಅಥವಾ ಎರಡು ಮಕ್ಕಳು ಮಾಡಿಕೊಳ್ಳಬೇಕು. ಜನಸಂಖ್ಯೆ ನಿಯಂತ್ರಣ ಮಾಡಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಪಟ್ಟಣದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. 'ದೇಶದ ಜನಸಂಖ್ಯೆ ಹೆಚ್ಚಾಗಿದೆ 'ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿದೆ' ಎಂದರು.</p><p>'ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಜಾತಿ, ವರ್ಗ ಪದ್ಧತಿ, ಅಸ್ಪೃಶ್ಯತೆ ಇವೆಲ್ಲವೂ ನಿರ್ಮೂಲನೆಯಾಗಬೇಕು ಎಂದು ಹೇಳಿದರು.</p><p>ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಹೊಸ ಬಾಳಿಗೆ ಕಾಲಿಟ್ಟ ವಧು- ವರರು ಆದರ್ಶ ದಂಪತಿಗಳಾಗಬೇಕು ಎಂದು ಹೇಳಿದರು.</p><p>'ಸ್ವಂತ ಉದ್ಯೋಗ ಆರಂಭಿಸಬೇಕು. ಉದ್ಯೋಗದಾತರಾಗಬೇಕು. ಉತ್ತಮ ಬದುಕು ಕಟ್ಟಿಕೊಳ್ಳಬೇಕು' ಎಂದರು.</p><p>ಕುವೆಂಪು ಹೇಳಿದಂತೆ ನಾಡನ್ನು</p><p>ಸರ್ವ ಜನಾಂಗದ ಶಾಂತಿಯ ತೋಟವಾಗಿಸುವುದು ನಮ್ಮ ಆಶಯ. ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವಗಳು ನಮ್ಮ ಧ್ಯೇಯ ಎಂದರು.</p><p>ಕಾರ್ಯಕ್ರಮದಲ್ಲಿ 75 ಜೋಡಿ ದಾಂಪತ್ಯಕ್ಕೆ ಕಾಲಿಟ್ಟರು. ಶಾಸಕ ಎನ್.ಎಚ್.ಕೋನರಡ್ಡಿ ಪುತ್ರ ನವೀನ ಕುಮಾರ್- ಸಹನಾ ಆರತಕ್ಷತೆ ನಡೆಯಿತು.</p><p>ಸಚಿವರಾದ ಸಂತೋಷ ಲಾಡ್, ಕೃಷ್ಣ ಬೈರೇಗೌಡ, ಡಾ ಎಚ್.ಸಿ. ಮಹದೇವಪ್ಪ, ಶಾಸಕ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ (ಧಾರವಾಡ):</strong> 'ದಂಪತಿ ಒಂದು ಅಥವಾ ಎರಡು ಮಕ್ಕಳು ಮಾಡಿಕೊಳ್ಳಬೇಕು. ಜನಸಂಖ್ಯೆ ನಿಯಂತ್ರಣ ಮಾಡಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಪಟ್ಟಣದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. 'ದೇಶದ ಜನಸಂಖ್ಯೆ ಹೆಚ್ಚಾಗಿದೆ 'ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿದೆ' ಎಂದರು.</p><p>'ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಜಾತಿ, ವರ್ಗ ಪದ್ಧತಿ, ಅಸ್ಪೃಶ್ಯತೆ ಇವೆಲ್ಲವೂ ನಿರ್ಮೂಲನೆಯಾಗಬೇಕು ಎಂದು ಹೇಳಿದರು.</p><p>ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಹೊಸ ಬಾಳಿಗೆ ಕಾಲಿಟ್ಟ ವಧು- ವರರು ಆದರ್ಶ ದಂಪತಿಗಳಾಗಬೇಕು ಎಂದು ಹೇಳಿದರು.</p><p>'ಸ್ವಂತ ಉದ್ಯೋಗ ಆರಂಭಿಸಬೇಕು. ಉದ್ಯೋಗದಾತರಾಗಬೇಕು. ಉತ್ತಮ ಬದುಕು ಕಟ್ಟಿಕೊಳ್ಳಬೇಕು' ಎಂದರು.</p><p>ಕುವೆಂಪು ಹೇಳಿದಂತೆ ನಾಡನ್ನು</p><p>ಸರ್ವ ಜನಾಂಗದ ಶಾಂತಿಯ ತೋಟವಾಗಿಸುವುದು ನಮ್ಮ ಆಶಯ. ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವಗಳು ನಮ್ಮ ಧ್ಯೇಯ ಎಂದರು.</p><p>ಕಾರ್ಯಕ್ರಮದಲ್ಲಿ 75 ಜೋಡಿ ದಾಂಪತ್ಯಕ್ಕೆ ಕಾಲಿಟ್ಟರು. ಶಾಸಕ ಎನ್.ಎಚ್.ಕೋನರಡ್ಡಿ ಪುತ್ರ ನವೀನ ಕುಮಾರ್- ಸಹನಾ ಆರತಕ್ಷತೆ ನಡೆಯಿತು.</p><p>ಸಚಿವರಾದ ಸಂತೋಷ ಲಾಡ್, ಕೃಷ್ಣ ಬೈರೇಗೌಡ, ಡಾ ಎಚ್.ಸಿ. ಮಹದೇವಪ್ಪ, ಶಾಸಕ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>