<p><strong>ಕಲಘಟಗಿ:</strong> ತಾಲ್ಲೂಕಿನ ಬೇಗೂರ ಗ್ರಾಮದ ಹೊಂಡದಲ್ಲಿ ನೂತನವಾಗಿ ನಿರ್ಮಿಸಿದ ಸಿದ್ಧಾರೂಢರ ತೆಪ್ಪೋತ್ಸವದ ತೇರು ಭಾನುವಾರ ಸಂಭ್ರಮದಿಂದ ಜರುಗಿತು.</p>.<p>ಬೆಳಿಗ್ಗೆಯಿಂದ ಮಹಿಳೆಯರು ಆರತಿ ಹಿಡಿದು, ಕುಂಭಮೇಳ ಹೊತ್ತು ಸಾಗಿದರು. ವಿವಿಧ ವಾದ್ಯ ವೈಭವದೊಂದಿಗೆ ಸಿದ್ಧಾರೂಢರ ಮೂರ್ತಿ ಮೆರವಣಿಗೆ ನಡೆಯಿತು. ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಹೂಮಾಲೆ, ಹಣ್ಣು ಅರ್ಪಿಸಿ ಭಕ್ತಿ ಮೆರೆದರು.</p>.<p>ಕಲಘಟಗಿಯ ಹನ್ನೆರಡು ಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ತೆಪ್ಪದ ತೆರಿನ ಕಳಸಾರೋಹಣ ನೆರೆವೇರಿಸಿದರು. ಸಂಜೆ ಹೊಂಡದಲ್ಲಿ ತೆಪ್ಪದ ತೆರಿಗೆ ಗ್ರಾಮದ ಗುರು ಹಿರಿಯರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.</p>.<p>ತೆರಿಗೆ ಭಕ್ತರು ಉತ್ತತ್ತಿ, ಬಾಳೆಹಣ್ಣು ಎಸೆದರು. ಅನ್ನಪ್ರಸಾದ ಏರ್ಪಡಿಸಲಾಗಿತ್ತು. ಒಂದು ತಿಂಗಳು ಕಾಲ ಗ್ರಾಮದ ಗುರುಚನ್ನಯ್ಯ ಹಿರೇಮಠ ಅವರಿಂದ ಸಿದ್ದಾರೂಢರ ಪುರಾಣ ಪ್ರವಚನ ನಡೆದು ಬಂದಿದೆ. 9 ದಿನಗಳ ಕಾಲ ಬೆಳಿಗ್ಗೆ ಸಂಜೆ ಅಖಂಡ ಶಿವನಾಮ ಸ್ಮರಣೆ ಹಾಗೂ ಸ್ವಾಮೀಜಿಗಳಿಂದ ಪ್ರವಚನ ಜರುಗಿದವು.</p>.<p>ಸಚಿವ ಸಂತೋಷ್ ಲಾಡ್ ಅವರ ಆಪ್ತ ಕಾರ್ಯದರ್ಶಿ ಸೋಮಶೇಖರ ಬೆನ್ನೂರ ಹಾಗೂ ಹುಲ್ಲಂಬಿಯ ಗುರು ರಾಜೇಶ್ವರ ಹಾಗೂ ಸಂಗಯ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಗ್ರಾಮದ ಗುರು ಹಿರಿಯರು ಇದ್ದರು.</p>.<p>ಸೋಮವಾರ ಬೆಳಿಗ್ಗೆ ಮಹಾಮಂಗಲ ಜರುಗಲಿದೆ. ಫೆ.17 ಮಂಗಳವಾರ ಪುರಾಣದ ಉತ್ತರ ಪೂಜೆ, ಅಜ್ಜನ ತೊಟ್ಟಿಲೋತ್ಸವ, ಕೌದಿ ಪೂಜೆಯೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ:</strong> ತಾಲ್ಲೂಕಿನ ಬೇಗೂರ ಗ್ರಾಮದ ಹೊಂಡದಲ್ಲಿ ನೂತನವಾಗಿ ನಿರ್ಮಿಸಿದ ಸಿದ್ಧಾರೂಢರ ತೆಪ್ಪೋತ್ಸವದ ತೇರು ಭಾನುವಾರ ಸಂಭ್ರಮದಿಂದ ಜರುಗಿತು.</p>.<p>ಬೆಳಿಗ್ಗೆಯಿಂದ ಮಹಿಳೆಯರು ಆರತಿ ಹಿಡಿದು, ಕುಂಭಮೇಳ ಹೊತ್ತು ಸಾಗಿದರು. ವಿವಿಧ ವಾದ್ಯ ವೈಭವದೊಂದಿಗೆ ಸಿದ್ಧಾರೂಢರ ಮೂರ್ತಿ ಮೆರವಣಿಗೆ ನಡೆಯಿತು. ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಹೂಮಾಲೆ, ಹಣ್ಣು ಅರ್ಪಿಸಿ ಭಕ್ತಿ ಮೆರೆದರು.</p>.<p>ಕಲಘಟಗಿಯ ಹನ್ನೆರಡು ಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ತೆಪ್ಪದ ತೆರಿನ ಕಳಸಾರೋಹಣ ನೆರೆವೇರಿಸಿದರು. ಸಂಜೆ ಹೊಂಡದಲ್ಲಿ ತೆಪ್ಪದ ತೆರಿಗೆ ಗ್ರಾಮದ ಗುರು ಹಿರಿಯರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.</p>.<p>ತೆರಿಗೆ ಭಕ್ತರು ಉತ್ತತ್ತಿ, ಬಾಳೆಹಣ್ಣು ಎಸೆದರು. ಅನ್ನಪ್ರಸಾದ ಏರ್ಪಡಿಸಲಾಗಿತ್ತು. ಒಂದು ತಿಂಗಳು ಕಾಲ ಗ್ರಾಮದ ಗುರುಚನ್ನಯ್ಯ ಹಿರೇಮಠ ಅವರಿಂದ ಸಿದ್ದಾರೂಢರ ಪುರಾಣ ಪ್ರವಚನ ನಡೆದು ಬಂದಿದೆ. 9 ದಿನಗಳ ಕಾಲ ಬೆಳಿಗ್ಗೆ ಸಂಜೆ ಅಖಂಡ ಶಿವನಾಮ ಸ್ಮರಣೆ ಹಾಗೂ ಸ್ವಾಮೀಜಿಗಳಿಂದ ಪ್ರವಚನ ಜರುಗಿದವು.</p>.<p>ಸಚಿವ ಸಂತೋಷ್ ಲಾಡ್ ಅವರ ಆಪ್ತ ಕಾರ್ಯದರ್ಶಿ ಸೋಮಶೇಖರ ಬೆನ್ನೂರ ಹಾಗೂ ಹುಲ್ಲಂಬಿಯ ಗುರು ರಾಜೇಶ್ವರ ಹಾಗೂ ಸಂಗಯ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಗ್ರಾಮದ ಗುರು ಹಿರಿಯರು ಇದ್ದರು.</p>.<p>ಸೋಮವಾರ ಬೆಳಿಗ್ಗೆ ಮಹಾಮಂಗಲ ಜರುಗಲಿದೆ. ಫೆ.17 ಮಂಗಳವಾರ ಪುರಾಣದ ಉತ್ತರ ಪೂಜೆ, ಅಜ್ಜನ ತೊಟ್ಟಿಲೋತ್ಸವ, ಕೌದಿ ಪೂಜೆಯೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>