ಧಾರವಾಡ: 'ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಖಂಡಿಸಿ ಮತ್ತು ಪ್ರಕರಣದ ಆರೋಪಿ ಫಯಾಜ್ಗೆ ಕಠಿಣ ಶಿಕ್ಷೆ ಆಗಬೇಕು ಎಂದು ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಏಪ್ರಿಲ್ 22ರಂದು ಮೌನ ಮೆರವಣಿಗೆ ನಡೆಸಲಾಗುವುದು. ಸ್ವಯಂ ಸಮುದಾಯದವರು (ಮುಸ್ಲಿಂ) ಮಾಡುವುದಾಗಿ ತಿಳಿಸಿದ್ಧಾರೆ’ ಎಂದು ಧಾರವಾಡ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ತಿಳಿಸಿದರು.