<p><strong>ಹುಬ್ಬಳ್ಳಿ: </strong>ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಗುತ್ತಿಗೆದಾರರಿಗೆ ₹1 ಲಕ್ಷದಿಂದ ₹5 ಲಕ್ಷವರೆಗಿನ ಕಾಮಗಾರಿಗಳನ್ನು ತುಂಡು ಗುತ್ತಿಗೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಶನಿವಾರ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯರು ಹೆಸ್ಕಾಂ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು.</p>.<p>ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರಿಂದ ಮೂಲ ಸೌಕರ್ಯ ಶುಲ್ಕವನ್ನು ಹೆಚ್ಚಿನ ಪ್ರಮಾಣದಲ್ಲಿ ವಸೂಲು ಮಾಡಲಾಗುತ್ತಿದೆ. ಇದರಿಂದ ಗ್ರಾಹಕರು ವಿದ್ಯುತ್ ಸಂಪರ್ಕ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ. ಅದನ್ನು ಕೂಡಲೇ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ ಸಲ್ಲಿಸುವಂತೆ ಸೂಚಿಸುತ್ತಿರುವುದರಿಂದ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ. ಗಂಗಾ ಕಲ್ಯಾಣ, ಕುಡಿಯುವ ನೀರು ಕಾಮಗಾರಿಗಳನ್ನು ಕೆಲವೇ ಬಂಡವಾಳಶಾಹಿ ಗುತ್ತಿಗೆದಾರರಿಗೆ ನೀಡುತ್ತಿರುವುದರಿಂದ ಹಾಲಿ ಕಾಮಗಾರಿ ನಿರ್ವಹಿಸುತ್ತಿರುವವರಿಗೆ ಕೆಲಸಗಳಿಲ್ಲದಂತಾಗಿದೆ ಎಂದು ದೂರಿದರು.</p>.<p>ವಿದ್ಯುತ್ ಕಂಪನಿಗಳನ್ನು ಖಾಸಗೀಕರಣ ಮಾಡುವ ಪ್ರಸ್ತಾವವನ್ನು ಕೈಬಿಡಬೇಕು. ಅತಿವೃಷ್ಟಿಯಾದಾಗ ನೆಲಕ್ಕುರುಳಿದ ವಿದ್ಯುತ್ ಕಂಬಳ ಕಾಮಗಾರಿ ಮಾಡಿಸಿಕೊಂಡು ಕೋಟ್ಯಂತರ ರೂಪಾಯಿ ಬಿಲ್ ಪಾವತಿಸಿಲ್ಲ. ತುರ್ತು ಸಂದರ್ಭದಲ್ಲಿ ಸ್ಥಳೀಯರನ್ನು ಬಳಸಿಕೊಂಡು, ಕಾಮಗಾರಿಗಳನ್ನು ಬೇರೆಯವರಿಗೆ ನೀಡುವುದನ್ನು ವಿರೋಧಿಸಿದರು.</p>.<p>ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಮುಖ್ಯ, ಉಪ ವಿದ್ಯುತ್ ಕೇಂದ್ರಗಳಲ್ಲಿ ಕೆಲಸ ನಿರ್ವಹಣೆ ಮಾಡುತ್ತಿರುವ ಹಾಲಿ ಗುತ್ತಿಗೆದಾರರನ್ನು ಕಡೆಗಣಿಸಿ ಟೆಂಡರ್ ಕರೆಯುತ್ತಿರುವುದನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯ ಘಟಕದ ಅಧ್ಯಕ್ಷ ಎಸ್.ಎಂ. ಕೃಷ್ಣ, ಉಪಾದ್ಯಕ್ಷ ವಿಜಯಕುಮಾರ ಗುಡ್ಡದ, ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಮುತ್ತಗಿ, ಉಪಾಧ್ಯಕ್ಷ ಪ್ರಸನ್ನ ತಳವಾರ, ಕಿರಣ ಹಿರೇಮಠ, ತುಷಾರ ಬದ್ದಿ, ಜಗದೀಶ ಕರಿಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಗುತ್ತಿಗೆದಾರರಿಗೆ ₹1 ಲಕ್ಷದಿಂದ ₹5 ಲಕ್ಷವರೆಗಿನ ಕಾಮಗಾರಿಗಳನ್ನು ತುಂಡು ಗುತ್ತಿಗೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಶನಿವಾರ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯರು ಹೆಸ್ಕಾಂ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು.</p>.<p>ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರಿಂದ ಮೂಲ ಸೌಕರ್ಯ ಶುಲ್ಕವನ್ನು ಹೆಚ್ಚಿನ ಪ್ರಮಾಣದಲ್ಲಿ ವಸೂಲು ಮಾಡಲಾಗುತ್ತಿದೆ. ಇದರಿಂದ ಗ್ರಾಹಕರು ವಿದ್ಯುತ್ ಸಂಪರ್ಕ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ. ಅದನ್ನು ಕೂಡಲೇ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ ಸಲ್ಲಿಸುವಂತೆ ಸೂಚಿಸುತ್ತಿರುವುದರಿಂದ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ. ಗಂಗಾ ಕಲ್ಯಾಣ, ಕುಡಿಯುವ ನೀರು ಕಾಮಗಾರಿಗಳನ್ನು ಕೆಲವೇ ಬಂಡವಾಳಶಾಹಿ ಗುತ್ತಿಗೆದಾರರಿಗೆ ನೀಡುತ್ತಿರುವುದರಿಂದ ಹಾಲಿ ಕಾಮಗಾರಿ ನಿರ್ವಹಿಸುತ್ತಿರುವವರಿಗೆ ಕೆಲಸಗಳಿಲ್ಲದಂತಾಗಿದೆ ಎಂದು ದೂರಿದರು.</p>.<p>ವಿದ್ಯುತ್ ಕಂಪನಿಗಳನ್ನು ಖಾಸಗೀಕರಣ ಮಾಡುವ ಪ್ರಸ್ತಾವವನ್ನು ಕೈಬಿಡಬೇಕು. ಅತಿವೃಷ್ಟಿಯಾದಾಗ ನೆಲಕ್ಕುರುಳಿದ ವಿದ್ಯುತ್ ಕಂಬಳ ಕಾಮಗಾರಿ ಮಾಡಿಸಿಕೊಂಡು ಕೋಟ್ಯಂತರ ರೂಪಾಯಿ ಬಿಲ್ ಪಾವತಿಸಿಲ್ಲ. ತುರ್ತು ಸಂದರ್ಭದಲ್ಲಿ ಸ್ಥಳೀಯರನ್ನು ಬಳಸಿಕೊಂಡು, ಕಾಮಗಾರಿಗಳನ್ನು ಬೇರೆಯವರಿಗೆ ನೀಡುವುದನ್ನು ವಿರೋಧಿಸಿದರು.</p>.<p>ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಮುಖ್ಯ, ಉಪ ವಿದ್ಯುತ್ ಕೇಂದ್ರಗಳಲ್ಲಿ ಕೆಲಸ ನಿರ್ವಹಣೆ ಮಾಡುತ್ತಿರುವ ಹಾಲಿ ಗುತ್ತಿಗೆದಾರರನ್ನು ಕಡೆಗಣಿಸಿ ಟೆಂಡರ್ ಕರೆಯುತ್ತಿರುವುದನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯ ಘಟಕದ ಅಧ್ಯಕ್ಷ ಎಸ್.ಎಂ. ಕೃಷ್ಣ, ಉಪಾದ್ಯಕ್ಷ ವಿಜಯಕುಮಾರ ಗುಡ್ಡದ, ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಮುತ್ತಗಿ, ಉಪಾಧ್ಯಕ್ಷ ಪ್ರಸನ್ನ ತಳವಾರ, ಕಿರಣ ಹಿರೇಮಠ, ತುಷಾರ ಬದ್ದಿ, ಜಗದೀಶ ಕರಿಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>