ನೈರುತ್ಯ ರೈಲ್ವೆ ವಲಯ ಸ್ಥಾಪನೆಗೊಂಡು ಎರಡು ದಶಕಗಳೇ ಕಳೆದಿವೆ. ಆದರೂ ಕೂಡ ಇನ್ನೂ ಅನೇಕ ರೈಲ್ವೆ ಇಲಾಖೆ ಕಚೇರಿಗಳು ಹಾಗೂ ರೈಲ್ವೆ ಸಿಬ್ಬಂದಿಗಳು ಮತ್ತು ಪ್ರಯಾಣಿಕರಿಗೆ ಬೇಕಾದ ಹಲವಾರು ಸೌಲಭ್ಯಗಳಿಗೆ ಕಟ್ಟಡಗಳನ್ನು ನಿರ್ಮಿಸಬೇಕಾದ ಅವಶ್ಯಕತೆ ಇದೆ. ಮುಂದಿನ 50 ವರ್ಷಗಳ ಕಾಲ ಹುಬ್ಬಳ್ಳಿ ನಗರ ಸಾಕಷ್ಟು ಪ್ರಮಾಣದಲ್ಲಿ ಬೆಳವಣಿಗೆ ಆಗಲಿದ್ದು, ಅದಕ್ಕೆ ತಕ್ಕಂತೆ ರೈಲ್ವೆ ಇಲಾಖೆ, ಸೌಲಭ್ಯ ಅಭಿವೃದ್ಧಿಪಡಿಸಲು ಹತ್ತಾರು ಎಕರೆ ಭೂಮಿಯ ಅವಶ್ಯಕತೆ ಬೀಳಲಿದೆ. ಹೀಗಾಗಿ ರೈಲ್ವೆ ಇಲಾಖೆ ಈ ಜಾಗವನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಬದಲು ತನ್ನ ಆಸ್ತಿಯಾಗಿಯೇ ಉಳಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.