<p><strong>ಹುಬ್ಬಳ್ಳಿ:</strong> ‘ಉತ್ತರ ಕರ್ನಾಟಕ ಭಾಗದ ಕೃಷಿ ಉತ್ಪನ್ನಗಳು ಹಾಗೂ ಸಿರಿಧಾನ್ಯಗಳ ರಫ್ತು ಕೈಗೊಳ್ಳಲು ವಿಪುಲ ಅವಕಾಶಗಳಿವೆ’ ಎಂದು ಬೆಂಗಳೂರಿನ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ (ವಿಟಿಪಿಸಿ) ಜಂಟಿ ನಿರ್ದೇಶಕ ಬಾಬು ನಾಗೇಶ ತಿಳಿಸಿದರು.</p>.<p>ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ (ಕೆಸಿಸಿಐ) ವಿಟಿಪಿಸಿ, ಕೃಷಿ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರೈತ ಸಮೃದ್ಧಿ ಯೋಜನೆ ನೆರವಿನೊಂದಿಗೆ ಆಯೋಜಿಸಿರುವ ಆರು ದಿನಗಳ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ತರಬೇತಿಯ ನಂತರ ರಫ್ತು ಕೈಗೊಳ್ಳಲು ವಿಟಿಪಿಸಿ ಬೆಂಗಾವಲಾಗಿ ನಿಲ್ಲಲಿದೆ’ ಎಂದ ಅವರು, ರಫ್ತುದಾರರಾಗಲು ಇರುವ ಅವಕಾಶಗಳನ್ನು ವಿವರಿಸಿದರು.</p>.<p>ಧಾರವಾಡದ ವಿಟಿಪಿಸಿ ಉಪ ನಿರ್ದೇಶಕ ಟಿ.ಎಸ್. ಮಲ್ಲಿಕಾರ್ಜುನ, ‘ಶಿಬಿರದಲ್ಲಿ ರಫ್ತು ವ್ಯಾಪಾರದ ಜ್ಞಾನ ಪಡೆದು ರಫ್ತುದಾರರಾಬೇಕು’ ಎಂದು ಕೋರಿದರು.</p>.<p>30 ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ಕೆಸಿಸಿಐ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸಿದ್ದೇಶ್ವರ ಕಮ್ಮಾರ, ಸಹಾಯಕ ಕಾರ್ಯದರ್ಶಿ ನಂದೀಶ ಅಣ್ಣಿಗೇರಿ, ಗೌರವ ಕಾರ್ಯದರ್ಶಿ ಉದಯ ರೇವಣಕರ ಇದ್ದರು.</p>.<div><blockquote>ಸುಸ್ಥಿರ ಕೃಷಿ ಅಳವಡಿಸಿಕೊಂಡು ವೈವಿಧ್ಯಮಯ ಬೆಳೆ ಉತ್ಪಾದಿಸುವ ಜೊತೆಗೆ ಕೃಷಿ ಉತ್ಪನ್ನಗಳನ್ನು ಸಂಸ್ಕರಿಸಿ ಮೌಲ್ಯವರ್ಧನೆ ಕೈಗೊಂಡು ರಫ್ತು ಮಾಡಿದರೆ ಹೆಚ್ಚಿನ ಲಾಭ ಗಳಿಸಲು ಸಾಧ್ಯ </blockquote><span class="attribution">ಮಂಜುನಾಥ ಅಂತರವಳ್ಳಿ ಕೃಷಿ ಇಲಾಖೆ ಜಂಟಿ ನಿರ್ದೇಶಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಉತ್ತರ ಕರ್ನಾಟಕ ಭಾಗದ ಕೃಷಿ ಉತ್ಪನ್ನಗಳು ಹಾಗೂ ಸಿರಿಧಾನ್ಯಗಳ ರಫ್ತು ಕೈಗೊಳ್ಳಲು ವಿಪುಲ ಅವಕಾಶಗಳಿವೆ’ ಎಂದು ಬೆಂಗಳೂರಿನ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ (ವಿಟಿಪಿಸಿ) ಜಂಟಿ ನಿರ್ದೇಶಕ ಬಾಬು ನಾಗೇಶ ತಿಳಿಸಿದರು.</p>.<p>ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ (ಕೆಸಿಸಿಐ) ವಿಟಿಪಿಸಿ, ಕೃಷಿ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರೈತ ಸಮೃದ್ಧಿ ಯೋಜನೆ ನೆರವಿನೊಂದಿಗೆ ಆಯೋಜಿಸಿರುವ ಆರು ದಿನಗಳ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ತರಬೇತಿಯ ನಂತರ ರಫ್ತು ಕೈಗೊಳ್ಳಲು ವಿಟಿಪಿಸಿ ಬೆಂಗಾವಲಾಗಿ ನಿಲ್ಲಲಿದೆ’ ಎಂದ ಅವರು, ರಫ್ತುದಾರರಾಗಲು ಇರುವ ಅವಕಾಶಗಳನ್ನು ವಿವರಿಸಿದರು.</p>.<p>ಧಾರವಾಡದ ವಿಟಿಪಿಸಿ ಉಪ ನಿರ್ದೇಶಕ ಟಿ.ಎಸ್. ಮಲ್ಲಿಕಾರ್ಜುನ, ‘ಶಿಬಿರದಲ್ಲಿ ರಫ್ತು ವ್ಯಾಪಾರದ ಜ್ಞಾನ ಪಡೆದು ರಫ್ತುದಾರರಾಬೇಕು’ ಎಂದು ಕೋರಿದರು.</p>.<p>30 ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ಕೆಸಿಸಿಐ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸಿದ್ದೇಶ್ವರ ಕಮ್ಮಾರ, ಸಹಾಯಕ ಕಾರ್ಯದರ್ಶಿ ನಂದೀಶ ಅಣ್ಣಿಗೇರಿ, ಗೌರವ ಕಾರ್ಯದರ್ಶಿ ಉದಯ ರೇವಣಕರ ಇದ್ದರು.</p>.<div><blockquote>ಸುಸ್ಥಿರ ಕೃಷಿ ಅಳವಡಿಸಿಕೊಂಡು ವೈವಿಧ್ಯಮಯ ಬೆಳೆ ಉತ್ಪಾದಿಸುವ ಜೊತೆಗೆ ಕೃಷಿ ಉತ್ಪನ್ನಗಳನ್ನು ಸಂಸ್ಕರಿಸಿ ಮೌಲ್ಯವರ್ಧನೆ ಕೈಗೊಂಡು ರಫ್ತು ಮಾಡಿದರೆ ಹೆಚ್ಚಿನ ಲಾಭ ಗಳಿಸಲು ಸಾಧ್ಯ </blockquote><span class="attribution">ಮಂಜುನಾಥ ಅಂತರವಳ್ಳಿ ಕೃಷಿ ಇಲಾಖೆ ಜಂಟಿ ನಿರ್ದೇಶಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>