<p><strong>ಹುಬ್ಬಳ್ಳಿ:</strong> ‘ಶಿಕ್ಷಣದಲ್ಲಿ ಅರ್ಥಪೂರ್ಣ ಬದಲಾವಣೆ ತರಲು ಸಮನ್ವಯ ನೀತಿ ಹಾಗೂ ಕೌಶಲಾಧಾರಿತ ಶಿಕ್ಷಣದ ತರಬೇತಿ ತುಂಬಾ ಅವಶ್ಯವಿದೆ’ ಎಂದು ಡಾ.ಇ.ವಿ.ರಮಣರೆಡ್ಡಿ ಹೇಳಿದರು.</p>.<p>ನಗರದಲ್ಲಿ ದೇಶಪಾಂಡೆ ಫೌಂಡೇಶನ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ಅಭಿವೃದ್ಧಿ ಸಂವಾದ–2026, ದೇಶಪಾಂಡೆ ಡೈಲಾಗ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪದವಿ ಶಿಕ್ಷಣದ ಜೊತೆಗೆ ಕೌಶಲಾಧಾರಿತ ಶಿಕ್ಷಣದ ಅವಶ್ಯಕತೆ ಇದೆ. ಇದರಿಂದ ಶಿಕ್ಷಣ ಮತ್ತು ಉದ್ಯೋಗದ ನಡುವಿನ ಅಂತರ ಕಾಯ್ದುಕೊಳ್ಳಬಹುದು’ ಎಂದರು. </p>.<p>ರಾಜನ್ ಅವರು, ‘ಇಂಟರ್ನ್ಶಿಪ್ ಹಾಗೂ ಅಗತ್ಯ ತರಬೇತಿಯಿಂದ ಉದ್ಯೋಗಾವಕಾಶ ಪಡೆಯಬಹುದು. ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚು ಆದ್ಯತೆ ನೀಡಬೇಕಿದೆ’ ಎಂದರು. </p>.<p>ಇದೇ ವೇಳೆ ಅವರು, ಶಿಕ್ಷಣ ವ್ಯವಸ್ಥೆ ಮತ್ತು ಉದ್ಯೋಗ ಮಾರುಕಟ್ಟೆಯ ಅಗತ್ಯಗಳ ಕುರಿತು ಮಾತನಾಡಿದರು. </p>.<p>ಪ್ರೊ.ಸುಶಿಲ್ ವಾಚಾನಿ ಅವರು, ‘ಆಧುನಿಕ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ವಿಷಯ ಕುರಿತು ಮಾತನಾಡಿದರು. ಗುರುರಾಜ ದೇಶಪಾಂಡೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಶಿಕ್ಷಣದಲ್ಲಿ ಅರ್ಥಪೂರ್ಣ ಬದಲಾವಣೆ ತರಲು ಸಮನ್ವಯ ನೀತಿ ಹಾಗೂ ಕೌಶಲಾಧಾರಿತ ಶಿಕ್ಷಣದ ತರಬೇತಿ ತುಂಬಾ ಅವಶ್ಯವಿದೆ’ ಎಂದು ಡಾ.ಇ.ವಿ.ರಮಣರೆಡ್ಡಿ ಹೇಳಿದರು.</p>.<p>ನಗರದಲ್ಲಿ ದೇಶಪಾಂಡೆ ಫೌಂಡೇಶನ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ಅಭಿವೃದ್ಧಿ ಸಂವಾದ–2026, ದೇಶಪಾಂಡೆ ಡೈಲಾಗ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಪದವಿ ಶಿಕ್ಷಣದ ಜೊತೆಗೆ ಕೌಶಲಾಧಾರಿತ ಶಿಕ್ಷಣದ ಅವಶ್ಯಕತೆ ಇದೆ. ಇದರಿಂದ ಶಿಕ್ಷಣ ಮತ್ತು ಉದ್ಯೋಗದ ನಡುವಿನ ಅಂತರ ಕಾಯ್ದುಕೊಳ್ಳಬಹುದು’ ಎಂದರು. </p>.<p>ರಾಜನ್ ಅವರು, ‘ಇಂಟರ್ನ್ಶಿಪ್ ಹಾಗೂ ಅಗತ್ಯ ತರಬೇತಿಯಿಂದ ಉದ್ಯೋಗಾವಕಾಶ ಪಡೆಯಬಹುದು. ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚು ಆದ್ಯತೆ ನೀಡಬೇಕಿದೆ’ ಎಂದರು. </p>.<p>ಇದೇ ವೇಳೆ ಅವರು, ಶಿಕ್ಷಣ ವ್ಯವಸ್ಥೆ ಮತ್ತು ಉದ್ಯೋಗ ಮಾರುಕಟ್ಟೆಯ ಅಗತ್ಯಗಳ ಕುರಿತು ಮಾತನಾಡಿದರು. </p>.<p>ಪ್ರೊ.ಸುಶಿಲ್ ವಾಚಾನಿ ಅವರು, ‘ಆಧುನಿಕ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ವಿಷಯ ಕುರಿತು ಮಾತನಾಡಿದರು. ಗುರುರಾಜ ದೇಶಪಾಂಡೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>