<p><strong>ಹುಬ್ಬಳ್ಳಿ:</strong> ‘ಸ್ಲಂ ಪ್ರದೇಶದ ಎಲ್ಲ ನಿವಾಸಿಗಳಿಗೆ ಹಕ್ಕುಪತ್ರ ಕೊಡುವಂತಹ ಕೆಲಸ ಮಾಡುತ್ತೇನೆ’ ಎಂದು ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಭರವಸೆ ನೀಡಿದರು.</p>.<p>ನಗರದ ಮೇದಾರ ಓಣಿ ಸಿದ್ಧಾರ್ಥ ಕಾಲೊನಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿಶೇಷ ಅನುದಾನದಡಿ ₹2 ಕೋಟಿ ವೆಚ್ಚದಲ್ಲಿ ಒಳಚರಂಡಿ ಹಾಗೂ ರಸ್ತೆ ಕಾಮಗಾರಿ, ಬಾಳಿಕಾಯಿ ಪ್ಲಾಟ್ನಲ್ಲಿ ಲೋಕೋಪಯೋಗಿ ಇಲಾಖೆಯ ₹1 ಕೋಟಿ ಅನುದಾನದಲ್ಲಿ ಡಾಂಬರ್ ರಸ್ತೆ ಕಾಮಗಾರಿ ಮತ್ತು ನೂರಾಣಿ ಪ್ಲಾಟ್ನಲ್ಲಿ ಯುಜಿಡಿ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಜನರಿಗೆ ಉಚಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಲಾಗಿದೆ. ವಿವಿಧ ಸಮಾಜಗಳ ಅಭಿವೃದ್ಧಿಗಾಗಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆಗೆ ಹತ್ತಾರು ಸಮುದಾಯ ಭವನ ನಿರ್ಮಿಸಲಾಗಿದೆ ಎಂದು ಹೇಳಿದರು.</p>.<p>ನ್ಯೂ ಇಂಗ್ಲಿಷ್ ಸ್ಕೂಲ್ ಬಳಿ ₹8 ಕೋಟಿ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಳೇ ಹುಬ್ಬಳ್ಳಿ ಪ್ರಮುಖ ರಸ್ತೆಯನ್ನು ದ್ವಿಪಥವಾಗಿ ಮಾಡಲು ಹಾಗೂ ಮಟನ್ ಮಾರುಕಟ್ಟೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು’ ಎಂದು ಹೇಳಿದರು.</p>.<p>ಕ್ಷೇತ್ರ ಸರ್ಕಾರಿ ಶಾಲೆಗಳ ನವೀಕರಣ, ಸ್ಮಾರ್ಟ್ ಕ್ಲಾಸ್ ಸೌಲಭ್ಯ ಮತ್ತು ಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಕೊಳಗೇರಿ ಪ್ರದೇಶದಲ್ಲಿ ಸಿಸಿ ರಸ್ತೆಗಳು ಮತ್ತು ಯುಜಿಡಿ ವ್ಯವಸ್ಥೆ ನಿರ್ಮಿಸುವುದಕ್ಕಾಗಿ ಕೋಟ್ಯಂತರ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.</p>.<p>ಪಾಲಿಕೆ ಸದಸ್ಯರಾದ ರಾಧಾಬಾಯಿ ಸಪಾರಿ, ಮನ್ಸೂರಾ ಮುದಗಲ್ಲ, ಮುಖಂಡರಾದ ರಾಜಕುಮಾರ ಕಾಮರೆಡ್ಡಿ, ಭಾಗಣ್ಣ ಬಿರಾಜದಾರ, ಮುಸ್ತಾಕ ಮುದಗಲ್ಲ, ಬಸೀರ ಗುಡಮಾಲ್, ಅಂಬರೀಶ ಛಲವಾದಿ, ಆರೀಫ್ ದೊಡ್ಡಮನಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಸ್ಲಂ ಪ್ರದೇಶದ ಎಲ್ಲ ನಿವಾಸಿಗಳಿಗೆ ಹಕ್ಕುಪತ್ರ ಕೊಡುವಂತಹ ಕೆಲಸ ಮಾಡುತ್ತೇನೆ’ ಎಂದು ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಭರವಸೆ ನೀಡಿದರು.</p>.<p>ನಗರದ ಮೇದಾರ ಓಣಿ ಸಿದ್ಧಾರ್ಥ ಕಾಲೊನಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿಶೇಷ ಅನುದಾನದಡಿ ₹2 ಕೋಟಿ ವೆಚ್ಚದಲ್ಲಿ ಒಳಚರಂಡಿ ಹಾಗೂ ರಸ್ತೆ ಕಾಮಗಾರಿ, ಬಾಳಿಕಾಯಿ ಪ್ಲಾಟ್ನಲ್ಲಿ ಲೋಕೋಪಯೋಗಿ ಇಲಾಖೆಯ ₹1 ಕೋಟಿ ಅನುದಾನದಲ್ಲಿ ಡಾಂಬರ್ ರಸ್ತೆ ಕಾಮಗಾರಿ ಮತ್ತು ನೂರಾಣಿ ಪ್ಲಾಟ್ನಲ್ಲಿ ಯುಜಿಡಿ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಜನರಿಗೆ ಉಚಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಲಾಗಿದೆ. ವಿವಿಧ ಸಮಾಜಗಳ ಅಭಿವೃದ್ಧಿಗಾಗಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆಗೆ ಹತ್ತಾರು ಸಮುದಾಯ ಭವನ ನಿರ್ಮಿಸಲಾಗಿದೆ ಎಂದು ಹೇಳಿದರು.</p>.<p>ನ್ಯೂ ಇಂಗ್ಲಿಷ್ ಸ್ಕೂಲ್ ಬಳಿ ₹8 ಕೋಟಿ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಳೇ ಹುಬ್ಬಳ್ಳಿ ಪ್ರಮುಖ ರಸ್ತೆಯನ್ನು ದ್ವಿಪಥವಾಗಿ ಮಾಡಲು ಹಾಗೂ ಮಟನ್ ಮಾರುಕಟ್ಟೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು’ ಎಂದು ಹೇಳಿದರು.</p>.<p>ಕ್ಷೇತ್ರ ಸರ್ಕಾರಿ ಶಾಲೆಗಳ ನವೀಕರಣ, ಸ್ಮಾರ್ಟ್ ಕ್ಲಾಸ್ ಸೌಲಭ್ಯ ಮತ್ತು ಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಕೊಳಗೇರಿ ಪ್ರದೇಶದಲ್ಲಿ ಸಿಸಿ ರಸ್ತೆಗಳು ಮತ್ತು ಯುಜಿಡಿ ವ್ಯವಸ್ಥೆ ನಿರ್ಮಿಸುವುದಕ್ಕಾಗಿ ಕೋಟ್ಯಂತರ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.</p>.<p>ಪಾಲಿಕೆ ಸದಸ್ಯರಾದ ರಾಧಾಬಾಯಿ ಸಪಾರಿ, ಮನ್ಸೂರಾ ಮುದಗಲ್ಲ, ಮುಖಂಡರಾದ ರಾಜಕುಮಾರ ಕಾಮರೆಡ್ಡಿ, ಭಾಗಣ್ಣ ಬಿರಾಜದಾರ, ಮುಸ್ತಾಕ ಮುದಗಲ್ಲ, ಬಸೀರ ಗುಡಮಾಲ್, ಅಂಬರೀಶ ಛಲವಾದಿ, ಆರೀಫ್ ದೊಡ್ಡಮನಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>