<p><strong>ಧಾರವಾಡ</strong>: ನಗರದ ಸಾಯಿದರ್ಶನ ಬಡಾವಣೆಯ ಮನೆಯೊಂದರಲ್ಲಿ ವಾಸವಿದ್ದ ನೇಪಾಳ ಮೂಲದ ಏಳು ಮಂದಿಯಲ್ಲಿ ಒಬ್ಬರು ಮೃತಪಟ್ಟು, ಆರು ಮಂದಿ ಶನಿವಾರ ಅಸ್ವಸ್ಥರಾಗಿದ್ದಾರೆ.</p>.<p>ವಿವೇಕ (40) ಮೃತಪಟ್ಟವರು. ಅಸ್ವಸ್ಥಗೊಂಡಿದ್ದ ನರೇಶ್, ನಿತೀಶ್, ಡಿಕೇಶ್, ಲಕ್ಷ್ಮಣ, ಸೂಧನ್ ಮತ್ತು ಕಮಾರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ. </p>.<p>ಏಳು ಮಂದಿ ‘ಚಿಂಗ್ಸ್ ಚಾಂಗ್’ ಮೊಮೊಸ್ ಅಂಗಡಿ ನಡೆಸುತ್ತಿದ್ದರು. ಮನೆಯಲ್ಲಿ ಅವರು ಅಡುಗೆ ಒಲೆಗೆ ಇದ್ದಿಲು ಬಳಸಿರುವುದು ಕಂಡುಬಂದಿದೆ. ಶನಿವಾರ ಬೆಳಿಗ್ಗೆ ನೆರೆಹೊರೆಯವರು ಆ ಮನೆಯಲ್ಲಿದ್ದವರು ಅಸ್ವಸ್ಥರಾಗಿರುವುದನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪರಿಶೀಲನೆ ನಡೆಸಿದಾಗ ಒಬ್ಬರು ಮೃತಪಟ್ಟಿದ್ದರು.</p>.<p>‘ಹೊಗೆ ಆವರಿಸಿ ಉಸಿರುಗಟ್ಟಿರಬಹುದು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ತನಿಖೆ ನಡೆಸಲಾಗುವುದು’ ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು. ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ನಗರದ ಸಾಯಿದರ್ಶನ ಬಡಾವಣೆಯ ಮನೆಯೊಂದರಲ್ಲಿ ವಾಸವಿದ್ದ ನೇಪಾಳ ಮೂಲದ ಏಳು ಮಂದಿಯಲ್ಲಿ ಒಬ್ಬರು ಮೃತಪಟ್ಟು, ಆರು ಮಂದಿ ಶನಿವಾರ ಅಸ್ವಸ್ಥರಾಗಿದ್ದಾರೆ.</p>.<p>ವಿವೇಕ (40) ಮೃತಪಟ್ಟವರು. ಅಸ್ವಸ್ಥಗೊಂಡಿದ್ದ ನರೇಶ್, ನಿತೀಶ್, ಡಿಕೇಶ್, ಲಕ್ಷ್ಮಣ, ಸೂಧನ್ ಮತ್ತು ಕಮಾರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ. </p>.<p>ಏಳು ಮಂದಿ ‘ಚಿಂಗ್ಸ್ ಚಾಂಗ್’ ಮೊಮೊಸ್ ಅಂಗಡಿ ನಡೆಸುತ್ತಿದ್ದರು. ಮನೆಯಲ್ಲಿ ಅವರು ಅಡುಗೆ ಒಲೆಗೆ ಇದ್ದಿಲು ಬಳಸಿರುವುದು ಕಂಡುಬಂದಿದೆ. ಶನಿವಾರ ಬೆಳಿಗ್ಗೆ ನೆರೆಹೊರೆಯವರು ಆ ಮನೆಯಲ್ಲಿದ್ದವರು ಅಸ್ವಸ್ಥರಾಗಿರುವುದನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪರಿಶೀಲನೆ ನಡೆಸಿದಾಗ ಒಬ್ಬರು ಮೃತಪಟ್ಟಿದ್ದರು.</p>.<p>‘ಹೊಗೆ ಆವರಿಸಿ ಉಸಿರುಗಟ್ಟಿರಬಹುದು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ತನಿಖೆ ನಡೆಸಲಾಗುವುದು’ ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು. ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>