<p><strong>ಧಾರವಾಡ:</strong> ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಅವರಿಗೆ ಸ್ಥಳ ನಿಯುಕ್ತಿ ಮಾಡಿಲ್ಲ. ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕಿ ಸ್ನೇಹಲ್ ಆರ್. ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.</p>.<p>2024 ಜ.27ರಂದು ಧಾರವಾಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ದಿವ್ಯಪ್ರಭು. ಕೆಲ ದಿನಗಳಿಂದ ರಜೆಯಲ್ಲಿದ್ದರು. ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ಮಿಷನ್ ವಿದ್ಯಾಕಾಶಿ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಿದ್ದರು. ಸ್ನೇಹಲ್ ಆರ್.ಅವರು 2013ನೇ ಬ್ಯಾಚ್ನ ಐಎಎಸ್ ಅಧಿಕಾರಿ. ಮನಃಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.</p>.<p>ಚಿಕ್ಕಮಗಳೂರು ಉಪವಿಭಾಗಾಧಿಕಾರಿ, ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ, ಪಿಯು ಶಿಕ್ಷಣ ಮಂಡಳಿ ನಿರ್ದೇಶಕಿ, ಯಾದಗಿರಿ ಜಿಲ್ಲಾಧಿಕಾರಿ, ಬಿಎಂಟಿಸಿ ಐಟಿ ವಿಭಾಗದ ನಿರ್ದೇಶಕಿ, ಬಿಬಿಎಂಪಿ ಪಶ್ಚಿಮ ವಲಯ ಆಯಕ್ತರಾಗಿ ಕಾರ್ಯನಿರ್ವಹಿಸಿದ್ಧಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಅವರಿಗೆ ಸ್ಥಳ ನಿಯುಕ್ತಿ ಮಾಡಿಲ್ಲ. ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕಿ ಸ್ನೇಹಲ್ ಆರ್. ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.</p>.<p>2024 ಜ.27ರಂದು ಧಾರವಾಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ದಿವ್ಯಪ್ರಭು. ಕೆಲ ದಿನಗಳಿಂದ ರಜೆಯಲ್ಲಿದ್ದರು. ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ಮಿಷನ್ ವಿದ್ಯಾಕಾಶಿ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಿದ್ದರು. ಸ್ನೇಹಲ್ ಆರ್.ಅವರು 2013ನೇ ಬ್ಯಾಚ್ನ ಐಎಎಸ್ ಅಧಿಕಾರಿ. ಮನಃಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.</p>.<p>ಚಿಕ್ಕಮಗಳೂರು ಉಪವಿಭಾಗಾಧಿಕಾರಿ, ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ, ಪಿಯು ಶಿಕ್ಷಣ ಮಂಡಳಿ ನಿರ್ದೇಶಕಿ, ಯಾದಗಿರಿ ಜಿಲ್ಲಾಧಿಕಾರಿ, ಬಿಎಂಟಿಸಿ ಐಟಿ ವಿಭಾಗದ ನಿರ್ದೇಶಕಿ, ಬಿಬಿಎಂಪಿ ಪಶ್ಚಿಮ ವಲಯ ಆಯಕ್ತರಾಗಿ ಕಾರ್ಯನಿರ್ವಹಿಸಿದ್ಧಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>