<p><strong>ಹುಬ್ಬಳ್ಳಿ: </strong>‘ಶಿಕ್ಷಣದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯವಿದ್ದು, ಶಿಕ್ಷಣದ ಗುರಿ ಇದೇ ಆಗಿದೆ. ವಿದ್ಯಾರ್ಥಿಗಳು ಸಹ ತಾವು ಪಡೆದ ಶಿಕ್ಷಣವನ್ನು ದೇಶದ ಪ್ರಗತಿಗೆ ಬಳಸಬೇಕು’ ಎಂದು ಧಾರವಾಡ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಗಜಾನನ ಮುನ್ನಿಕೇರಿ ಸಲಹೆ ನೀಡಿದರು.</p>.<p>ಇಲ್ಲಿನ ರೇಣುಕಾ ನಗರದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ರಾಷ್ಟ್ರೋತ್ಥಾನ ವಿದ್ಯಾಕೇಂದ್ರವು ರಾಷ್ಟ್ರದ ಅಭಿವೃದ್ಧಿ ಉದ್ದೇಶದಿಂದ ಆರಂಭವಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗೆ ಕಲಿಸುವ ಸಂಪ್ರದಾಯ, ಆ ಕುಟುಂಬದ ಪರಿವರ್ತನೆಗೆ ಕಾರಣವಾಗುತ್ತದೆ’ ಎಂದರು.</p>.<p>‘ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಮಾತನಾಡಿ, ವ್ಯಕ್ತಿ ನಿರ್ಮಾಣದ ಜೊತೆಗೆ ರಾಷ್ಟ್ರ ನಿರ್ಮಾಣದ ಉದ್ದೇಶದಿಂದ ಈ ವಿದ್ಯಾ ಕೇಂದ್ರ ಸ್ಥಾಪಿಸಲಾಗಿದೆ’ ಎಂದರು.</p>.<p>ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ವಿದ್ಯಾಕೇಂದ್ರದ ನಿರ್ದೇಶಕ ಶ್ರೀಧರ ಜೋಶಿ, ಪ್ರಾಚಾರ್ಯೆ ಶರಾವತಿ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ಶಿಕ್ಷಣದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯವಿದ್ದು, ಶಿಕ್ಷಣದ ಗುರಿ ಇದೇ ಆಗಿದೆ. ವಿದ್ಯಾರ್ಥಿಗಳು ಸಹ ತಾವು ಪಡೆದ ಶಿಕ್ಷಣವನ್ನು ದೇಶದ ಪ್ರಗತಿಗೆ ಬಳಸಬೇಕು’ ಎಂದು ಧಾರವಾಡ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಗಜಾನನ ಮುನ್ನಿಕೇರಿ ಸಲಹೆ ನೀಡಿದರು.</p>.<p>ಇಲ್ಲಿನ ರೇಣುಕಾ ನಗರದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ರಾಷ್ಟ್ರೋತ್ಥಾನ ವಿದ್ಯಾಕೇಂದ್ರವು ರಾಷ್ಟ್ರದ ಅಭಿವೃದ್ಧಿ ಉದ್ದೇಶದಿಂದ ಆರಂಭವಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗೆ ಕಲಿಸುವ ಸಂಪ್ರದಾಯ, ಆ ಕುಟುಂಬದ ಪರಿವರ್ತನೆಗೆ ಕಾರಣವಾಗುತ್ತದೆ’ ಎಂದರು.</p>.<p>‘ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಮಾತನಾಡಿ, ವ್ಯಕ್ತಿ ನಿರ್ಮಾಣದ ಜೊತೆಗೆ ರಾಷ್ಟ್ರ ನಿರ್ಮಾಣದ ಉದ್ದೇಶದಿಂದ ಈ ವಿದ್ಯಾ ಕೇಂದ್ರ ಸ್ಥಾಪಿಸಲಾಗಿದೆ’ ಎಂದರು.</p>.<p>ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು. ವಿದ್ಯಾಕೇಂದ್ರದ ನಿರ್ದೇಶಕ ಶ್ರೀಧರ ಜೋಶಿ, ಪ್ರಾಚಾರ್ಯೆ ಶರಾವತಿ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>