<p><strong>ಧಾರವಾಡ</strong>: ‘ಹಸಿರುಕ್ರಾಂತಿ ಕಾಲಘಟ್ಟದಲ್ಲಿ ಆಹಾರ ಉತ್ಪಾದನೆ ವೇಗವಾಗಿತ್ತು. ಈಗ ಮಣ್ಣಿನ ಫಲವತ್ತತೆ ಕುಸಿದು, ಕುಂಠಿತಗೊಂಡಿದೆ. ಕೃಷಿ ವಿಶ್ವವಿದ್ಯಾಲಯಗಳು ಇದನ್ನು ಗಂಭೀರವಾಗಿ ಪರಿಗಣಿಸಿ, ಪರಿಹಾರಕ್ಕೆ ಆದ್ಯತೆ ನೀಡಬೇಕು’ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಹೇಳಿದರು.</p>.<p>ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜನಸಂಖ್ಯೆಗೆ ಅನುಗುಣವಾಗಿ ಆಹಾರ ಬೆಳೆ ಉತ್ಪಾದನೆ ಹೆಚ್ಚಳ ಮಾಡಬೇಕು’ ಎಂದರು.</p>.<p>‘ಹೈನುಗಾರಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಪ್ರತಿ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತದೆ. ರೈತರು ಕೃಷಿ ಜತೆಗೆ ಪಶುಸಂಗೋಪನೆ ಮೊದಲಾದ ಉಪಕಸುಬುಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಇದಕ್ಕೂ ಮುನ್ನ ಮುಖ್ಯಮಂತ್ರಿ ಮತ್ತು ಸಚಿವರು ಹಣ್ಣುಹಂಪಲು ಮತ್ತು ಫಲಪುಷ್ಪಗಳ ಪ್ರದರ್ಶನ ಮಳಿಗೆಗೆ ಭೇಟಿ ನೀಡಿದರು.</p>.<p>ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಸಂತೋಷ ಲಾಡ್, ಎನ್.ಚಲುವರಾಯಸ್ವಾಮಿ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್.ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಹಸಿರುಕ್ರಾಂತಿ ಕಾಲಘಟ್ಟದಲ್ಲಿ ಆಹಾರ ಉತ್ಪಾದನೆ ವೇಗವಾಗಿತ್ತು. ಈಗ ಮಣ್ಣಿನ ಫಲವತ್ತತೆ ಕುಸಿದು, ಕುಂಠಿತಗೊಂಡಿದೆ. ಕೃಷಿ ವಿಶ್ವವಿದ್ಯಾಲಯಗಳು ಇದನ್ನು ಗಂಭೀರವಾಗಿ ಪರಿಗಣಿಸಿ, ಪರಿಹಾರಕ್ಕೆ ಆದ್ಯತೆ ನೀಡಬೇಕು’ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಹೇಳಿದರು.</p>.<p>ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜನಸಂಖ್ಯೆಗೆ ಅನುಗುಣವಾಗಿ ಆಹಾರ ಬೆಳೆ ಉತ್ಪಾದನೆ ಹೆಚ್ಚಳ ಮಾಡಬೇಕು’ ಎಂದರು.</p>.<p>‘ಹೈನುಗಾರಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಪ್ರತಿ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತದೆ. ರೈತರು ಕೃಷಿ ಜತೆಗೆ ಪಶುಸಂಗೋಪನೆ ಮೊದಲಾದ ಉಪಕಸುಬುಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಇದಕ್ಕೂ ಮುನ್ನ ಮುಖ್ಯಮಂತ್ರಿ ಮತ್ತು ಸಚಿವರು ಹಣ್ಣುಹಂಪಲು ಮತ್ತು ಫಲಪುಷ್ಪಗಳ ಪ್ರದರ್ಶನ ಮಳಿಗೆಗೆ ಭೇಟಿ ನೀಡಿದರು.</p>.<p>ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಸಂತೋಷ ಲಾಡ್, ಎನ್.ಚಲುವರಾಯಸ್ವಾಮಿ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್.ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>