<p><strong>ಧಾರವಾಡ:</strong> ‘ಬಸನಗೌಡ ಪಾಟೀಲ ಯತ್ನಾಳ್, ರಮೇಶ ಜಾರಕಿಹೊಳಿ ಹಾಗೂ ಜಿ.ಎಂ.ಸಿದ್ದೇಶ್ವರ ಅವರು ಹೇಳಿರುವ ಕೆಲವು ವಿಚಾರಗಳು ಸರಿ ಇವೆ. ಅವರ ನಡೆಗೆ ಸಂಬಂಧಿಸಿದಂತೆ ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಲಾಗುವುದು’ ಎಂದು ವಿಧಾನಸಭೆ ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ ಪ್ರತಿಕ್ರಿಯಿಸಿದರು.</p>.ಬೆಳಗಾವಿ ಬಳಿಯ ರೆಸಾರ್ಟ್ನಲ್ಲಿ ಬಿಜೆಪಿ ಅತೃಪ್ತ ನಾಯಕರ ಸಭೆ!.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು. ಎಲ್ಲ ಪಕ್ಷದೊಳಗೂ ಆಂತರಿಕ ಸಮಸ್ಯೆಗಳು ಇರುತ್ತವೆ’ ಎಂದರು. </p><p>‘ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದು ಹಂತದ ಹೋರಾಟ ಮುಗಿದಿದೆ. ಎರಡನೇ ಹಂತದ ಹೋರಾಟ ರಾಜ್ಯಪಾಲರ ಅಂಗಳದಲ್ಲಿದೆ. ರಾಜ್ಯಪಾಲರು ಕ್ರಮವಹಿಸಬೇಕು’ ಎಂದು ಒತ್ತಾಯಿಸಿದರು. </p>.ವಿಜಯೇಂದ್ರ ರಾಜೀನಾಮೆ ನೀಡಿ ಮತ್ತೊಮ್ಮೆ ಚುನಾವಣೆ ಎದುರಿಸಲಿ: ಬಿಜೆಪಿ ಶಾಸಕ ಆಗ್ರಹ.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿವರಣೆ ಕೇಳಿದ್ದಾರೆ. ಸಿದ್ದರಾಮಯ್ಯ ಅವರು ವಿವರಣೆ ನೀಡಿದ್ದಾರೆ. ವಿವರಣೆ ಸಮಂಜಸವಾಗಿರದಿದ್ದರೆ ರಾಜ್ಯಪಾಲರು ಪಾಸಿಕ್ಯೂಷನ್ ಅಥವಾ ಇತರ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ’ ಎಂದು ಉತ್ತರಿಸಿದರು.</p> .ಸಿ.ಪಿ. ಯೋಗೇಶ್ವರ್ಗೆ ಬಿಜೆಪಿ ಹೈಕಮಾಂಡ್ ಬುಲಾವ್: ಸಮಾನ ಮನಸ್ಕರ ಸಮಾವೇಶ ರದ್ದು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಬಸನಗೌಡ ಪಾಟೀಲ ಯತ್ನಾಳ್, ರಮೇಶ ಜಾರಕಿಹೊಳಿ ಹಾಗೂ ಜಿ.ಎಂ.ಸಿದ್ದೇಶ್ವರ ಅವರು ಹೇಳಿರುವ ಕೆಲವು ವಿಚಾರಗಳು ಸರಿ ಇವೆ. ಅವರ ನಡೆಗೆ ಸಂಬಂಧಿಸಿದಂತೆ ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಲಾಗುವುದು’ ಎಂದು ವಿಧಾನಸಭೆ ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ ಪ್ರತಿಕ್ರಿಯಿಸಿದರು.</p>.ಬೆಳಗಾವಿ ಬಳಿಯ ರೆಸಾರ್ಟ್ನಲ್ಲಿ ಬಿಜೆಪಿ ಅತೃಪ್ತ ನಾಯಕರ ಸಭೆ!.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು. ಎಲ್ಲ ಪಕ್ಷದೊಳಗೂ ಆಂತರಿಕ ಸಮಸ್ಯೆಗಳು ಇರುತ್ತವೆ’ ಎಂದರು. </p><p>‘ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದು ಹಂತದ ಹೋರಾಟ ಮುಗಿದಿದೆ. ಎರಡನೇ ಹಂತದ ಹೋರಾಟ ರಾಜ್ಯಪಾಲರ ಅಂಗಳದಲ್ಲಿದೆ. ರಾಜ್ಯಪಾಲರು ಕ್ರಮವಹಿಸಬೇಕು’ ಎಂದು ಒತ್ತಾಯಿಸಿದರು. </p>.ವಿಜಯೇಂದ್ರ ರಾಜೀನಾಮೆ ನೀಡಿ ಮತ್ತೊಮ್ಮೆ ಚುನಾವಣೆ ಎದುರಿಸಲಿ: ಬಿಜೆಪಿ ಶಾಸಕ ಆಗ್ರಹ.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿವರಣೆ ಕೇಳಿದ್ದಾರೆ. ಸಿದ್ದರಾಮಯ್ಯ ಅವರು ವಿವರಣೆ ನೀಡಿದ್ದಾರೆ. ವಿವರಣೆ ಸಮಂಜಸವಾಗಿರದಿದ್ದರೆ ರಾಜ್ಯಪಾಲರು ಪಾಸಿಕ್ಯೂಷನ್ ಅಥವಾ ಇತರ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ’ ಎಂದು ಉತ್ತರಿಸಿದರು.</p> .ಸಿ.ಪಿ. ಯೋಗೇಶ್ವರ್ಗೆ ಬಿಜೆಪಿ ಹೈಕಮಾಂಡ್ ಬುಲಾವ್: ಸಮಾನ ಮನಸ್ಕರ ಸಮಾವೇಶ ರದ್ದು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>