<p><strong>ಹುಬ್ಬಳ್ಳಿ:</strong> ‘ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವ ಮೂಲಕ ಮೇಯರ್ ಪಟ್ಟ ನಮ್ಮದಾಗಿಸಿಕೊಳ್ಳಬೇಕು. ಆ ಮೂಲಕ ಸೋನಿಯಾ ಗಾಂಧಿಯವರಿಗೆ ಭರ್ಜರಿ ಉಡುಗೊರೆ ನೀಡಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ನ ಪರಿಶಿಷ್ಟ ವಿಭಾಗದ ಅಧ್ಯಕ್ಷ ಎಫ್.ಎಚ್.ಜಕ್ಕಪ್ಪನವರ ಹೇಳಿದರು.</p>.<p>ಇಲ್ಲಿನ ಕಾರವಾರ ರಸ್ತೆಯ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹಲವು ವರ್ಷಗಳಿಂದ ಪಾಲಿಕೆಯಲ್ಲಿ ನಾವು ಅಧಿಕಾರ ಕಳೆದುಕೊಂಡಿದ್ದೇವೆ. ಈ ಬಾರಿ ನಾವು ಅಧಿಕಾರ ಹಿಡಿಯಲೇಬೇಕು. ಬಿಜೆಪಿ ದುರಾಡಳಿತದಿಂದ ಅವಳಿ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದರು.</p>.<p>"ಸಂಪೂರ್ಣ ನೆಲಕಚ್ಚಿದ್ದ ಕಾಂಗ್ರೆಸ್ ಪಕ್ಷವನ್ನು ಪುನಶ್ಚೇತನಗೊಳಿಸಿದ ಕೀರ್ತಿ ಸೋನಿಯಾ ಅವರಿಗೆ ಸಲ್ಲಬೇಕು. ಸತತ ಪ್ರಯತ್ನದಿಂದಾಗಿ 17 ರಾಜ್ಯಗಳಲ್ಲಿ ಅಧಿಕಾರ ಕೊಡಿಸಿದರಲ್ಲದೇ, ಕೇಂದ್ರದಲ್ಲಿಯೂ ಎರಡು ಬಾರಿ ಅಧಿಕಾರವನ್ನು ತಂದು ಕೊಟ್ಟರು. ಪ್ರಧಾನಿ ಹುದ್ದೆಗೆ ಏರುವ ಎಲ್ಲ ಅರ್ಹತೆಗಳು ಅವರಿಗೆ ಇದ್ದರೂ ಆ ಸ್ಥಾನವನ್ನು ಮನಮೋಹನ್ ಸಿಂಗ್ ಅವರಿಗೆ ಬಿಟ್ಟುಕೊಟ್ಟು ಮಹಾ ತ್ಯಾಗಿಯಾದರು’ ಎಂದು ಶ್ಲಾಘಿಸಿದರು.</p>.<p>‘ಸೋನಿಯಾ ಅವರನ್ನು ಕಾಂಗ್ರೆಸ್ನ ವಿಧವೆ ಎನ್ನುವ ಮೂಲಕ ಮೋದಿ ಪ್ರಧಾನಿ ಹುದ್ದೆಗೇ ಕಳಂಕ ತಂದಿದ್ದಾರೆ. ಕೂಡಲೇ ಅವರು ದೇಶದ ಎಲ್ಲ ಮಹಿಳೆಯರ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.</p>.<p>ಕಾಂಗ್ರೆಸ್ ಮುಖಂಡ ಸದಾನಂದ ಡಂಗನವರ, ಕಾಂಗ್ರೆಸ್ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಮಾತನಾಡಿದರು.</p>.<p>ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಉಪಾಧ್ಯಕ್ಷ ಶರಣಪ್ಪ ಕೊಟಗಿ (ಮತ್ತಿಕಟ್ಟಿ), ಪಾಲಿಕೆ ಸದಸ್ಯರಾದ ಪ್ರಕಾಶ್ ಕ್ಯಾರಕಟ್ಟಿ, ಮೋಹನ ಹಿರೇಮಠ, ನಾಮನಿರ್ದೇಶಿತ ಸದಸ್ಯ ವಿಜನಗೌಡ ಪಾಟೀಲ, ಮುಖಂಡರಾದ ಬಂಗಾರೇಶ ಹಿರೇಮಠ, ಮಂಜುನಾಥ ಉಪ್ಪಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವ ಮೂಲಕ ಮೇಯರ್ ಪಟ್ಟ ನಮ್ಮದಾಗಿಸಿಕೊಳ್ಳಬೇಕು. ಆ ಮೂಲಕ ಸೋನಿಯಾ ಗಾಂಧಿಯವರಿಗೆ ಭರ್ಜರಿ ಉಡುಗೊರೆ ನೀಡಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ನ ಪರಿಶಿಷ್ಟ ವಿಭಾಗದ ಅಧ್ಯಕ್ಷ ಎಫ್.ಎಚ್.ಜಕ್ಕಪ್ಪನವರ ಹೇಳಿದರು.</p>.<p>ಇಲ್ಲಿನ ಕಾರವಾರ ರಸ್ತೆಯ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಹಲವು ವರ್ಷಗಳಿಂದ ಪಾಲಿಕೆಯಲ್ಲಿ ನಾವು ಅಧಿಕಾರ ಕಳೆದುಕೊಂಡಿದ್ದೇವೆ. ಈ ಬಾರಿ ನಾವು ಅಧಿಕಾರ ಹಿಡಿಯಲೇಬೇಕು. ಬಿಜೆಪಿ ದುರಾಡಳಿತದಿಂದ ಅವಳಿ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದರು.</p>.<p>"ಸಂಪೂರ್ಣ ನೆಲಕಚ್ಚಿದ್ದ ಕಾಂಗ್ರೆಸ್ ಪಕ್ಷವನ್ನು ಪುನಶ್ಚೇತನಗೊಳಿಸಿದ ಕೀರ್ತಿ ಸೋನಿಯಾ ಅವರಿಗೆ ಸಲ್ಲಬೇಕು. ಸತತ ಪ್ರಯತ್ನದಿಂದಾಗಿ 17 ರಾಜ್ಯಗಳಲ್ಲಿ ಅಧಿಕಾರ ಕೊಡಿಸಿದರಲ್ಲದೇ, ಕೇಂದ್ರದಲ್ಲಿಯೂ ಎರಡು ಬಾರಿ ಅಧಿಕಾರವನ್ನು ತಂದು ಕೊಟ್ಟರು. ಪ್ರಧಾನಿ ಹುದ್ದೆಗೆ ಏರುವ ಎಲ್ಲ ಅರ್ಹತೆಗಳು ಅವರಿಗೆ ಇದ್ದರೂ ಆ ಸ್ಥಾನವನ್ನು ಮನಮೋಹನ್ ಸಿಂಗ್ ಅವರಿಗೆ ಬಿಟ್ಟುಕೊಟ್ಟು ಮಹಾ ತ್ಯಾಗಿಯಾದರು’ ಎಂದು ಶ್ಲಾಘಿಸಿದರು.</p>.<p>‘ಸೋನಿಯಾ ಅವರನ್ನು ಕಾಂಗ್ರೆಸ್ನ ವಿಧವೆ ಎನ್ನುವ ಮೂಲಕ ಮೋದಿ ಪ್ರಧಾನಿ ಹುದ್ದೆಗೇ ಕಳಂಕ ತಂದಿದ್ದಾರೆ. ಕೂಡಲೇ ಅವರು ದೇಶದ ಎಲ್ಲ ಮಹಿಳೆಯರ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.</p>.<p>ಕಾಂಗ್ರೆಸ್ ಮುಖಂಡ ಸದಾನಂದ ಡಂಗನವರ, ಕಾಂಗ್ರೆಸ್ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಮಾತನಾಡಿದರು.</p>.<p>ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಉಪಾಧ್ಯಕ್ಷ ಶರಣಪ್ಪ ಕೊಟಗಿ (ಮತ್ತಿಕಟ್ಟಿ), ಪಾಲಿಕೆ ಸದಸ್ಯರಾದ ಪ್ರಕಾಶ್ ಕ್ಯಾರಕಟ್ಟಿ, ಮೋಹನ ಹಿರೇಮಠ, ನಾಮನಿರ್ದೇಶಿತ ಸದಸ್ಯ ವಿಜನಗೌಡ ಪಾಟೀಲ, ಮುಖಂಡರಾದ ಬಂಗಾರೇಶ ಹಿರೇಮಠ, ಮಂಜುನಾಥ ಉಪ್ಪಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>