<p><strong>ಹುಬ್ಬಳ್ಳಿ:</strong> ‘ಸಚಿವ ಬಿ. ಶ್ರೀರಾಮುಲು ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಳ್ಳಾರಿಯಲ್ಲಿ 27.25 ಎಕರೆ ಭೂಮಿ ಕಬಳಿಸಲು ಹುನ್ನಾರ ನಡೆಸಿದ್ದಾರೆ’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಆರೋಪಿಸಿದರು.</p>.<p>‘ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಂಡು 2002ರಲ್ಲಿ ಶ್ರೀರಾಮುಲು ಅವರು ಈ ಕೃತ್ಯ ಎಸಗಿದ್ದಾರೆ. ಈ ಪೈಕಿ, ಕಾಲುವೆ ನಿರ್ಮಾಣಕ್ಕಾಗಿ ಸರ್ಕಾರ ವಶಪಡಿಸಿಕೊಂಡಿದ್ದ 10 ಎಕರೆ ಭೂಮಿಯೂ ಸೇರಿದೆ’ ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ನೈಸರ್ಗಿಕ ಸಂಪನ್ಮೂಲಗಳ ರಾಷ್ಟ್ರೀಯ ರಕ್ಷಣಾ ಸಮಿತಿ, ಜನ ಸಂಗ್ರಾಮ ಪರಿಷತ್ ಹಾಗೂ ಸಮಾನ ಮನಸ್ಕ ಸಂಘಟನೆಗಳಿಗೆ ಶ್ರೀರಾಮುಲು ಅವರ ಈ ಅಕ್ರಮಕ್ಕೆ ಸಂಬಂಧಿಸಿದ ದಾಖಲೆಗಳು ಸಿಕ್ಕಿದ್ದು, ಎಲ್ಲಾ ದಾಖಲೆಗಳು ನಕಲಿಯಾಗಿರುವುದು ಖಚಿತವಾಗಿದೆ. ಈ ಕುರಿತು ಸ್ಥಳೀಯರೊಬ್ಬರು ಕೋರ್ಟ್ನಲ್ಲಿ ಹೋರಾಟ ನಡೆಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಪ್ರಕರಣದ ತನಿಖೆಯನ್ನು ಸರ್ಕಾರ ಪಾರದರ್ಶಕವಾಗಿ ನಡೆಸಬೇಕು. ಅದಕ್ಕಾಗಿ ಮಾಜಿ ಲೋಕಾಯುಕ್ತ ಹಾಗೂ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಶ್ರೀರಾಮುಲು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p><strong>ಬೇರೆ ಉದ್ದೇಶಕ್ಕೆ ಬಳಸಬೇಡಿ</strong></p>.<p>‘ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆಗೆ ಮೀಸಲಾದ ₹17 ಸಾವಿರ ಕೋಟಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸಬಾರದು. ಹಣವನ್ನು ಗಣಿ ಬಾಧಿತ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಪರಿಸರ ಪುನಶ್ಚೇತನ ಹಾಗೂ ಆ ಪ್ರದೇಶದ ಬಡಜನರ ಅಭಿವೃದ್ಧಿಗಷ್ಟೇ ಬಳಸಬೇಕು’ ಎಂದು ಹಿರೇಮಠ ಆಗ್ರಹಿಸಿದರು.</p>.<p>‘ಕೆಲ ಹಿತಾಸಕ್ತಿಗಳು ಈ ಹಣವನ್ನು ವಿಮಾನ ನಿಲ್ದಾಣ ಅಭಿವೃದ್ಧಿ ಸೇರಿದಂತೆ ಇತರ ಉದ್ದೇಶಗಳಿಗೆ ಬಳಸಲು ಹುನ್ನಾರ ನಡೆಸಿವೆ. ಈ ನಿಟ್ಟಿನಲ್ಲಿ, ಯೋಜನೆಯ ಅನುಷ್ಠಾನದ ಉಸ್ತುವಾರಿ ನೋಡಿಕೊಳ್ಳಲು ಸುಪ್ರೀಂಕೋರ್ಟ್ ಇತ್ತೀಚೆಗೆ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ಅವರನ್ನು ನೇಮಕ ಮಾಡಿರುವುದು ಸ್ವಾಗತಾರ್ಹ’ ಎಂದರು.</p>.<p>‘ಮೂರು ಜಿಲ್ಲೆಗಳಲ್ಲಿ ಆರೋಗ್ಯ, ಕೃಷಿ, ಪಶು ಸಂಗೋಪನೆ ಸೇರಿದಂತೆ ಆ ಭಾಗದ ಜನರ ಅಭಿವೃದ್ಧಿಗೆ ಪೂರಕವಾಗಿ ಹಣವನ್ನು ಬಳಸಬೇಕು. ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ವರದಿಯನ್ನು ಮೂರು ತಿಂಗಳಿಗೊಮ್ಮೆ ಪರಿಶೀಲಿಸಬೇಕು. ಸಿಎಜಿಯನ್ನು ಸಂಪರ್ಕಿಸಿ ಲೆಕ್ಕಪತ್ರಗಳನ್ನು ಸರಿಯಾಗಿ ಇಡಲು ಸಲಹೆ ಪಡೆಯಬೇಕು ಎಂದು ಕೋರ್ಟ್ ತಿಳಿಸಿದೆ’ ಎಂದು ಹೇಳಿದರು.</p>.<p><strong>‘ಸಂಘ–ಪರಿವಾರದ ಸಿದ್ಧಾಂತ ಮಾರಕ’</strong></p>.<p>‘ಸಂಘ–ಪರಿವಾರದ ಸಿದ್ಧಾಂತ ಸಂವಿಧಾನ ವಿರೋಧಿಯಾಗಿದ್ದು, ಭಾರತಕ್ಕೆ ಮಾರಕವಾಗಿದೆ. 2002ರಲ್ಲಿ ಗುಜರಾತ್ನಲ್ಲಿ ನಡೆದ ಗಲಭೆಯ ಹಿಂದಿದ್ದವರು, ಈಗ ದೇಶದ ಮುಖ್ಯ ಹುದ್ದೆಗಳನ್ನು ಅಲಂಕರಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಅಂತಹದ್ದೇ ಗಲಭೆ ಸೃಷ್ಟಿಸಲು ಮುಂದಾಗಿದ್ದಾರೆ’ ಎಂದು ಹಿರೇಮಠ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕ್ರಾಂತಿಕಾರಿ ಬಸವಣ್ಣನ ಹೆಸರಿಟ್ಟುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಉತ್ತರಪ್ರದೇಶ ಮಾದರಿಯನ್ನು ಇಲ್ಲಿ ಅನುಸರಿಸುವ ಮೂಲಕ ಬಸವಣ್ಣನ ತತ್ವಗಳನ್ನು ಗಾಳಿಗೆ ತೂರಿದ್ದಾರೆ’ ಎಂದು ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಸಚಿವ ಬಿ. ಶ್ರೀರಾಮುಲು ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಳ್ಳಾರಿಯಲ್ಲಿ 27.25 ಎಕರೆ ಭೂಮಿ ಕಬಳಿಸಲು ಹುನ್ನಾರ ನಡೆಸಿದ್ದಾರೆ’ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಆರೋಪಿಸಿದರು.</p>.<p>‘ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಂಡು 2002ರಲ್ಲಿ ಶ್ರೀರಾಮುಲು ಅವರು ಈ ಕೃತ್ಯ ಎಸಗಿದ್ದಾರೆ. ಈ ಪೈಕಿ, ಕಾಲುವೆ ನಿರ್ಮಾಣಕ್ಕಾಗಿ ಸರ್ಕಾರ ವಶಪಡಿಸಿಕೊಂಡಿದ್ದ 10 ಎಕರೆ ಭೂಮಿಯೂ ಸೇರಿದೆ’ ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ನೈಸರ್ಗಿಕ ಸಂಪನ್ಮೂಲಗಳ ರಾಷ್ಟ್ರೀಯ ರಕ್ಷಣಾ ಸಮಿತಿ, ಜನ ಸಂಗ್ರಾಮ ಪರಿಷತ್ ಹಾಗೂ ಸಮಾನ ಮನಸ್ಕ ಸಂಘಟನೆಗಳಿಗೆ ಶ್ರೀರಾಮುಲು ಅವರ ಈ ಅಕ್ರಮಕ್ಕೆ ಸಂಬಂಧಿಸಿದ ದಾಖಲೆಗಳು ಸಿಕ್ಕಿದ್ದು, ಎಲ್ಲಾ ದಾಖಲೆಗಳು ನಕಲಿಯಾಗಿರುವುದು ಖಚಿತವಾಗಿದೆ. ಈ ಕುರಿತು ಸ್ಥಳೀಯರೊಬ್ಬರು ಕೋರ್ಟ್ನಲ್ಲಿ ಹೋರಾಟ ನಡೆಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಪ್ರಕರಣದ ತನಿಖೆಯನ್ನು ಸರ್ಕಾರ ಪಾರದರ್ಶಕವಾಗಿ ನಡೆಸಬೇಕು. ಅದಕ್ಕಾಗಿ ಮಾಜಿ ಲೋಕಾಯುಕ್ತ ಹಾಗೂ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಶ್ರೀರಾಮುಲು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.</p>.<p><strong>ಬೇರೆ ಉದ್ದೇಶಕ್ಕೆ ಬಳಸಬೇಡಿ</strong></p>.<p>‘ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆಗೆ ಮೀಸಲಾದ ₹17 ಸಾವಿರ ಕೋಟಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸಬಾರದು. ಹಣವನ್ನು ಗಣಿ ಬಾಧಿತ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಪರಿಸರ ಪುನಶ್ಚೇತನ ಹಾಗೂ ಆ ಪ್ರದೇಶದ ಬಡಜನರ ಅಭಿವೃದ್ಧಿಗಷ್ಟೇ ಬಳಸಬೇಕು’ ಎಂದು ಹಿರೇಮಠ ಆಗ್ರಹಿಸಿದರು.</p>.<p>‘ಕೆಲ ಹಿತಾಸಕ್ತಿಗಳು ಈ ಹಣವನ್ನು ವಿಮಾನ ನಿಲ್ದಾಣ ಅಭಿವೃದ್ಧಿ ಸೇರಿದಂತೆ ಇತರ ಉದ್ದೇಶಗಳಿಗೆ ಬಳಸಲು ಹುನ್ನಾರ ನಡೆಸಿವೆ. ಈ ನಿಟ್ಟಿನಲ್ಲಿ, ಯೋಜನೆಯ ಅನುಷ್ಠಾನದ ಉಸ್ತುವಾರಿ ನೋಡಿಕೊಳ್ಳಲು ಸುಪ್ರೀಂಕೋರ್ಟ್ ಇತ್ತೀಚೆಗೆ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ಅವರನ್ನು ನೇಮಕ ಮಾಡಿರುವುದು ಸ್ವಾಗತಾರ್ಹ’ ಎಂದರು.</p>.<p>‘ಮೂರು ಜಿಲ್ಲೆಗಳಲ್ಲಿ ಆರೋಗ್ಯ, ಕೃಷಿ, ಪಶು ಸಂಗೋಪನೆ ಸೇರಿದಂತೆ ಆ ಭಾಗದ ಜನರ ಅಭಿವೃದ್ಧಿಗೆ ಪೂರಕವಾಗಿ ಹಣವನ್ನು ಬಳಸಬೇಕು. ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ವರದಿಯನ್ನು ಮೂರು ತಿಂಗಳಿಗೊಮ್ಮೆ ಪರಿಶೀಲಿಸಬೇಕು. ಸಿಎಜಿಯನ್ನು ಸಂಪರ್ಕಿಸಿ ಲೆಕ್ಕಪತ್ರಗಳನ್ನು ಸರಿಯಾಗಿ ಇಡಲು ಸಲಹೆ ಪಡೆಯಬೇಕು ಎಂದು ಕೋರ್ಟ್ ತಿಳಿಸಿದೆ’ ಎಂದು ಹೇಳಿದರು.</p>.<p><strong>‘ಸಂಘ–ಪರಿವಾರದ ಸಿದ್ಧಾಂತ ಮಾರಕ’</strong></p>.<p>‘ಸಂಘ–ಪರಿವಾರದ ಸಿದ್ಧಾಂತ ಸಂವಿಧಾನ ವಿರೋಧಿಯಾಗಿದ್ದು, ಭಾರತಕ್ಕೆ ಮಾರಕವಾಗಿದೆ. 2002ರಲ್ಲಿ ಗುಜರಾತ್ನಲ್ಲಿ ನಡೆದ ಗಲಭೆಯ ಹಿಂದಿದ್ದವರು, ಈಗ ದೇಶದ ಮುಖ್ಯ ಹುದ್ದೆಗಳನ್ನು ಅಲಂಕರಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಅಂತಹದ್ದೇ ಗಲಭೆ ಸೃಷ್ಟಿಸಲು ಮುಂದಾಗಿದ್ದಾರೆ’ ಎಂದು ಹಿರೇಮಠ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕ್ರಾಂತಿಕಾರಿ ಬಸವಣ್ಣನ ಹೆಸರಿಟ್ಟುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಉತ್ತರಪ್ರದೇಶ ಮಾದರಿಯನ್ನು ಇಲ್ಲಿ ಅನುಸರಿಸುವ ಮೂಲಕ ಬಸವಣ್ಣನ ತತ್ವಗಳನ್ನು ಗಾಳಿಗೆ ತೂರಿದ್ದಾರೆ’ ಎಂದು ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>