ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾನಗರ ಪಾಲಿಕೆ ಚುನಾವಣೆ ಮುಂದೂಡಲು ಹಿರೇಮಠ ಆಗ್ರಹ

Last Updated 18 ಆಗಸ್ಟ್ 2021, 11:54 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೋವಿಡ್‌ ಆತಂಕ ಪೂರ್ಣವಾಗಿ ಕಡಿಮೆಯಾಗದಿದ್ದರೂ ಮಹಾನಗರ ಪಾಲಿಕೆ ಚುನಾವಣೆ ನಡೆಸುತ್ತಿರುವುದು ಸರಿಯಲ್ಲ. ಇದನ್ನು ಮುಂದೂಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕುಂಭಮೇಳ ಹಾಗೂ ಪಶ್ಚಿಮ ಬಂಗಾಳದಲ್ಲಿ ವಿನಾಕಾರಣ ಹಲವು ಹಂತಗಳಲ್ಲಿ ಚುನಾವಣೆ ನಡೆಸಿದ ಪರಿಣಾಮ ಕೋವಿಡ್‌ ಎರಡನೇ ಅಲೆ ತೀವ್ರಗತಿಯಲ್ಲಿ ಹೆಚ್ಚಾಯಿತು. ಮೂರನೆ ಅಲೆಯ ಆತಂಕದಲ್ಲಿರುವ ಕಾರಣ ಈಗ ಚುನಾವಣೆ ನಡೆಸಬಾರದು. ಸರ್ಕಾರ ಯಾವಾಗಲೂ ಸಮಸ್ಯೆಯ ಭಾಗವಾಗಬಾರದು, ಜನರ ಜೀವದ ಜೊತೆ ಚೆಲ್ಲಾಟವಾಡಬಾರದು’ ಎಂದರು.

‘ಕೋವಿಡ್‌ ಪೂರ್ಣವಾಗಿ ಹೋಗುವ ತನಕ ಚುನಾವಣೆ ನಡೆಸದಂತೆ ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗೆ ಕೆಲ ತಿಂಗಳ ಹಿಂದೆಯೇ ಪತ್ರ ಬರೆದಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT