ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಸ್ಥಾನಕ್ಕೆ ಎಸ್‌.ಆರ್‌. ಪಾಟೀಲ ಪ್ರಬಲ ಸ್ಪರ್ಧಿ: ವೀರಪ್ಪ‌ ಮೊಯಿಲಿ

Last Updated 2 ಆಗಸ್ಟ್ 2022, 15:44 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಮುಖ್ಯಮಂತ್ರಿ ಸ್ಥಾನಕ್ಕೆ ಎಸ್.ಆರ್. ಪಾಟೀಲ ಪ್ರಬಲ ಸ್ಪರ್ಧಿ. ಆದರೆ ಅವರ ಮತ್ತು ಸಿದ್ದರಾಮಯ್ಯ ಅವರ ನಡುವೆ ಹೋಲಿಕೆ ಮಾಡುವುದು ಸರಿಯಲ್ಲ’ ಎಂದು ಕಾಂಗ್ರೆಸ್‌ ಮುಖಂಡ ವೀರಪ್ಪ‌ ಮೊಯಿಲಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಬಳಿಕ‌ ಮುಖ್ಯಮಂತ್ರಿ ಯಾರಾಗಬೇಕು ಎಂದು ಪಕ್ಷದ ಶಾಸಕರು ಹಾಗೂ ಹೈಕಮಾಂಡ್ ನಿರ್ಧರಿಸುತ್ತದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಹತ್ತಕ್ಕೂ ಹೆಚ್ಚು ಮಂದಿ ನಾಯಕರು ಮುಖ್ಯಮಂತ್ರಿಯಾಗಲು ಸಮರ್ಥರಿದ್ದಾರೆ. ಆ ಸ್ಥಾನಕ್ಕೆ ಯಾರು ಸೂಕ್ತ ಎನ್ನುವುದು ಚುನಾವಣೆ ನಂತರದ ತೀರ್ಮಾನ’ ಎಂದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಜನರೇ ಹೇಳುತ್ತಿದ್ದಾರೆ.‌ ಹೀಗಾಗಿ ಮುಖ್ಯಮಂತ್ರಿ ಸ್ಥಾನದ ಕುರಿತು ಚರ್ಚೆಗಳು ನಡೆಯುತ್ತಿವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT