ಇಲ್ಲಿನ ದೇಶಪಾಂಡೆ ನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ, ‘ರಾಮ ಮಂದಿರ ನಿರ್ಮಾಣವಾಯಿತು ಮುಂದೇನು?’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ರಾಮ ರಾಜ್ಯದ ಕನಸು ನನಸು ಮಾಡುವುದೇ ನಮ್ಮ ಮುಂದಿನ ಯೋಜನೆ. ಗೋಶಾಲೆಯಲ್ಲಿ ಹಸು ಸಾಕುವುದು, ಮಕ್ಕಳ ಶಿಕ್ಷಣ ವೆಚ್ಚ ಭರಿಸುವುದು, ಮನೆ ನಿರ್ಮಾಣ, ವೈದ್ಯಕೀಯ ಸೇವೆ ಸೇರಿದಂತೆ ಎಲ್ಲ ವಿಭಾಗದವರಿಂದಲೂ ಉಚಿತ ಸೇವೆ ಮಾಡಿಸಿ ರಾಮರಾಜ್ಯ ಹೀಗಿತ್ತು ಎಂಬುದನ್ನು ತೋರಿಸುವುದಾಗಿದೆ’ ಎಂದರು.