<p><strong>ಉಪ್ಪಿನಬೆಟಗೇರಿ</strong>: ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿಯ 2ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದ ಹಳೆಯ ಬಸ್ ನಿಲ್ದಾಣ ಮೈದಾನದಲ್ಲಿ ಫೆ.10 ರಿಂದ ಆಧ್ಯಾತ್ಮಿಕ ಪ್ರವಚನ ಹಮ್ಮಿಕೊಳ್ಳಲಾಗಿದೆ.</p>.<p>ಬೆಳಿಗ್ಗೆ ಶಿವಲಿಂಗಕ್ಕೆ ಚನ್ನಮಲ್ಲಯ್ಯ ನಂದಿಕೋಲಮಠ, ನಾಗಯ್ಯ ಕೊಣ್ಣೂರಮಠ, ಪುನೀತ ಹಿರೇಮಠ ಅವರ ವೈದಿಕತ್ವದಲ್ಲಿ ನಿತ್ಯ ರುದ್ರಾಭಿಷೇಕ ಜರುವುದು.</p>.<p>ಕಲಬುರ್ಗಿ ಜಿಲ್ಲೆ ಶಹಬಾದ ತಾಲ್ಲೂಕಿನ ರಾವೂರ ಸಿದ್ಧಲಿಂಗೇಶ್ವರ ಸಂಸ್ಥಾನಮಠದ ಸಿದ್ಧಲಿಂಗ ಸ್ವಾಮೀಜಿ 5 ದಿನ ಪ್ರವಚನ ನೀಡಲಿದ್ದಾರೆ. ಹೆಬ್ಬಳ್ಳಿಯ ಬ್ರಹ್ಮ ಚೈತನ್ಯಾಶ್ರಮದ ಶ್ರೀದತ್ತಾವಧೂತ ಮಹಾರಾಜರು ಪ್ರವಚನ ಮಾಲಿಕೆ ಉದ್ಘಾಟಿಸುವರು. ನಾಡಿನ ವಿವಿಧೆಡೆಯ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುವರು. ನಿತ್ಯ ಅನ್ನಪ್ರಸಾದ ವ್ಯವಸ್ಥೆ ಜರುಗಲಿದೆ.</p>.<p>ಫೆ.15 ರಂದು ಶಿವರಾತ್ರಿಯ ದಿನ ಸಂಜೆ 5 ಗಂಟೆಗೆ ಜರುಗಲಿರುವ ನೂತನ ರಥೋತ್ಸವವನ್ನು ಹೆಬ್ಬಳ್ಳಿಯ ದತ್ತಾವಧೂತ ಶ್ರೀಗಳು ಹಾಗೂ ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ ಉದ್ಘಾಟಿಸುವರು. ನೂತನ ರಥ ನಿರ್ಮಾಣ ಮಾಡಿರುವ ಸಾವಿತ್ರಿ ಮಟ್ಟಿ ಹಾಗೂ ಚೆನ್ನಬಸಪ್ಪ ಮಟ್ಟಿ ಅವರನ್ನು ಗೌರವಿಸಲಾಗುವುದು.</p>.<p>ಫೆ.16 ರಂದು ಬೆಳಿಗ್ಗೆ ಕಡುಬಿನ ಕಾಳಗ ನಂತರ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ಪಲ್ಲಕ್ಕಿ ಉತ್ಸವ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ– 9535712890, 9449788181 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಬೆಟಗೇರಿ</strong>: ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿಯ 2ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದ ಹಳೆಯ ಬಸ್ ನಿಲ್ದಾಣ ಮೈದಾನದಲ್ಲಿ ಫೆ.10 ರಿಂದ ಆಧ್ಯಾತ್ಮಿಕ ಪ್ರವಚನ ಹಮ್ಮಿಕೊಳ್ಳಲಾಗಿದೆ.</p>.<p>ಬೆಳಿಗ್ಗೆ ಶಿವಲಿಂಗಕ್ಕೆ ಚನ್ನಮಲ್ಲಯ್ಯ ನಂದಿಕೋಲಮಠ, ನಾಗಯ್ಯ ಕೊಣ್ಣೂರಮಠ, ಪುನೀತ ಹಿರೇಮಠ ಅವರ ವೈದಿಕತ್ವದಲ್ಲಿ ನಿತ್ಯ ರುದ್ರಾಭಿಷೇಕ ಜರುವುದು.</p>.<p>ಕಲಬುರ್ಗಿ ಜಿಲ್ಲೆ ಶಹಬಾದ ತಾಲ್ಲೂಕಿನ ರಾವೂರ ಸಿದ್ಧಲಿಂಗೇಶ್ವರ ಸಂಸ್ಥಾನಮಠದ ಸಿದ್ಧಲಿಂಗ ಸ್ವಾಮೀಜಿ 5 ದಿನ ಪ್ರವಚನ ನೀಡಲಿದ್ದಾರೆ. ಹೆಬ್ಬಳ್ಳಿಯ ಬ್ರಹ್ಮ ಚೈತನ್ಯಾಶ್ರಮದ ಶ್ರೀದತ್ತಾವಧೂತ ಮಹಾರಾಜರು ಪ್ರವಚನ ಮಾಲಿಕೆ ಉದ್ಘಾಟಿಸುವರು. ನಾಡಿನ ವಿವಿಧೆಡೆಯ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುವರು. ನಿತ್ಯ ಅನ್ನಪ್ರಸಾದ ವ್ಯವಸ್ಥೆ ಜರುಗಲಿದೆ.</p>.<p>ಫೆ.15 ರಂದು ಶಿವರಾತ್ರಿಯ ದಿನ ಸಂಜೆ 5 ಗಂಟೆಗೆ ಜರುಗಲಿರುವ ನೂತನ ರಥೋತ್ಸವವನ್ನು ಹೆಬ್ಬಳ್ಳಿಯ ದತ್ತಾವಧೂತ ಶ್ರೀಗಳು ಹಾಗೂ ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ ಉದ್ಘಾಟಿಸುವರು. ನೂತನ ರಥ ನಿರ್ಮಾಣ ಮಾಡಿರುವ ಸಾವಿತ್ರಿ ಮಟ್ಟಿ ಹಾಗೂ ಚೆನ್ನಬಸಪ್ಪ ಮಟ್ಟಿ ಅವರನ್ನು ಗೌರವಿಸಲಾಗುವುದು.</p>.<p>ಫೆ.16 ರಂದು ಬೆಳಿಗ್ಗೆ ಕಡುಬಿನ ಕಾಳಗ ನಂತರ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ಪಲ್ಲಕ್ಕಿ ಉತ್ಸವ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ– 9535712890, 9449788181 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>