<p><strong>ಹುಬ್ಬಳ್ಳಿ:</strong> ‘ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ(ಎಸ್.ಎಸ್.ಕೆ) ಸಮಾಜವು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಈ ಸಮಾಜಕ್ಕೆ ಪರಿಶಿಷ್ಟ ಪಂಗಡದ ಸ್ಥಾನ ನೀಡಬೇಕು’ ಎಂದು ಹುಬ್ಬಳ್ಳಿ–ಧಾರವಾಡದ ಎಸ್ಎಸ್ಕೆ ಸಮಾಜದ ಕೇಂದ್ರ ಪಂಚ ಸಮಿತಿಯ ಧರ್ಮದರ್ಶಿ ನೀಲಕಂಠ ಪಿ.ಜಡಿ ಆಗ್ರಹಿಸಿದರು.</p>.<p>‘ಎಸ್ಎಸ್ಕೆ ಸಮಾಜವನ್ನು ‘2ಎ‘ ಪ್ರವರ್ಗದಲ್ಲಿ ಸೇರಿಸಲಾಗಿದೆ. ಕೆಲವು ರಾಜ್ಯಗಳಲ್ಲಿ ಎಸ್.ಟಿ ಪ್ರವರ್ಗದ ಮೀಸಲಾತಿ ನೀಡಲಾಗಿದೆ. ರಾಜ್ಯದಲ್ಲಿಯೂ ಎಸ್.ಟಿ ಪಂಗಡಕ್ಕೆ ಸೇರ್ಪಡೆ ಮಾಡಿ ಮೀಸಲಾತಿ ನೀಡಬೇಕು‘ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಪಾದಿಸಿದರು.</p>.<p>‘ಸಮಾಜದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ನಿಗಮ ಅಥವಾ ಮಂಡಳಿ ಸ್ಥಾಪಿಸಿ, ₹500 ಕೋಟಿ ಅನುದಾನ ನೀಡಬೇಕು. ಹುಬ್ಬಳ್ಳಿ–ಧಾರವಾಡದಲ್ಲಿ ದೇವಸ್ಥಾನ ನಿರ್ಮಾಣಕ್ಕಾಗಿ ಜಮೀನು ನೀಡಬೇಕು. ವಿದ್ಯಾರ್ಥಿಗಳಿಗಾಗಿ ವಸತಿ ನಿಲಯ ಸ್ಥಾಪಿಸಬೇಕು’ ಎಂದು ಮನವಿ ಮಾಡಿದರು.</p>.<p><strong>ಅಭಿನಂದನಾ ಸಮಾರಂಭ:</strong> ನಮ್ಮ ಸಮಾಜದವರಾದ ನಾಗೇಶ ಕಲಬುರ್ಗಿ ಅವರು ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ.21ರಂದು ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕ ರಾಜು ವಿ.ಜರತಾರಘರ, ಭೂನ್ಯಾಯ ಮಂಡಳಿ ಸದಸ್ಯೆ ಸಂಗೀತಾ ಬದ್ದಿ, ಆಶ್ರಯ ಸಮಿತಿ ಸದಸ್ಯೆ ರಂಜನಾ ಬಂಕಾಪುರ ಅವರನ್ನೂ ಸತ್ಕರಿಸಲು ನಿರ್ಧರಿಸಲಾಗಿದೆ‘ ಎಂದು ಹೇಳಿದರು.</p>.<p>‘ಕೇಶ್ವಾಪುರದ ಶ್ರೀನಿವಾಸ್ ಗಾರ್ಡ್ನಲ್ಲಿ 21ರಂದು ಸಂಜೆ 6ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಸಚಿವ ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪಾಲ್ಗೊಳ್ಳಲಿದ್ದಾರೆ. ವಿವಿಧ ಹುದ್ದೆಗಳಲ್ಲಿರುವ ಸಮಾಜದ 65 ಮಂದಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು‘ ಎಂದು ತಿಳಿಸಿದರು.</p>.<p><strong>ಜ್ಯೋತಿಯಾತ್ರೆ:</strong> ‘ಸಮಾಜದ ಮೂಲಪುರಷ ಸಹಸ್ರಾರ್ಜುನ ಮಹಾರಾಜರ ದಿವ್ಯ ಜ್ಯೋತಿ ಮಧ್ಯಪ್ರದೇಶದಿಂದ ನಗರಕ್ಕೆ ಬಂದು ಫೆ.20ಕ್ಕೆ ಒಂದು ವರ್ಷ ಪೂರ್ಣವಾಗಲಿದೆ. ಅಂದು ಜ್ಯೊತಿಯ ಮೆರವಣಿಗೆ, ವಿಶೇಷ ಪೂಜೆ ಹಾಗೂ ಹೋಮಹವನಗಳು ನಡೆಯಲಿವೆ’ ಎಂದು ನೀಲಕಂಠ ಜಡಿ ಅವರು ಮಾಹಿತಿ ನೀಡಿದರು.</p>.<p>ಪಂಚ ಸಮಿತಿಯ ಗೌರವ ಕಾರ್ಯದರ್ಶಿ ನಾರಾಯಣ ಎನ್.ಖೋಡೆ, ಉಪ ಮುಖ್ಯ ಧರ್ಮದರ್ಶಿ ಹನುಮಂತಸಾ ಜಿ.ನಿರಂಜನ, ಸಹ ಗೌರವ ಕಾರ್ಯದರ್ಶಿ, ಉಪ ಮುಖ್ಯಕಾರ್ಯದರ್ಶಿ ಕೆ.ಟಿ.ಪವಾರ, ಕೋಶಾಧಿಕಾರಿ ಕೆ.ಪಿ. ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ(ಎಸ್.ಎಸ್.ಕೆ) ಸಮಾಜವು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಈ ಸಮಾಜಕ್ಕೆ ಪರಿಶಿಷ್ಟ ಪಂಗಡದ ಸ್ಥಾನ ನೀಡಬೇಕು’ ಎಂದು ಹುಬ್ಬಳ್ಳಿ–ಧಾರವಾಡದ ಎಸ್ಎಸ್ಕೆ ಸಮಾಜದ ಕೇಂದ್ರ ಪಂಚ ಸಮಿತಿಯ ಧರ್ಮದರ್ಶಿ ನೀಲಕಂಠ ಪಿ.ಜಡಿ ಆಗ್ರಹಿಸಿದರು.</p>.<p>‘ಎಸ್ಎಸ್ಕೆ ಸಮಾಜವನ್ನು ‘2ಎ‘ ಪ್ರವರ್ಗದಲ್ಲಿ ಸೇರಿಸಲಾಗಿದೆ. ಕೆಲವು ರಾಜ್ಯಗಳಲ್ಲಿ ಎಸ್.ಟಿ ಪ್ರವರ್ಗದ ಮೀಸಲಾತಿ ನೀಡಲಾಗಿದೆ. ರಾಜ್ಯದಲ್ಲಿಯೂ ಎಸ್.ಟಿ ಪಂಗಡಕ್ಕೆ ಸೇರ್ಪಡೆ ಮಾಡಿ ಮೀಸಲಾತಿ ನೀಡಬೇಕು‘ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಪಾದಿಸಿದರು.</p>.<p>‘ಸಮಾಜದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ನಿಗಮ ಅಥವಾ ಮಂಡಳಿ ಸ್ಥಾಪಿಸಿ, ₹500 ಕೋಟಿ ಅನುದಾನ ನೀಡಬೇಕು. ಹುಬ್ಬಳ್ಳಿ–ಧಾರವಾಡದಲ್ಲಿ ದೇವಸ್ಥಾನ ನಿರ್ಮಾಣಕ್ಕಾಗಿ ಜಮೀನು ನೀಡಬೇಕು. ವಿದ್ಯಾರ್ಥಿಗಳಿಗಾಗಿ ವಸತಿ ನಿಲಯ ಸ್ಥಾಪಿಸಬೇಕು’ ಎಂದು ಮನವಿ ಮಾಡಿದರು.</p>.<p><strong>ಅಭಿನಂದನಾ ಸಮಾರಂಭ:</strong> ನಮ್ಮ ಸಮಾಜದವರಾದ ನಾಗೇಶ ಕಲಬುರ್ಗಿ ಅವರು ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ.21ರಂದು ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕ ರಾಜು ವಿ.ಜರತಾರಘರ, ಭೂನ್ಯಾಯ ಮಂಡಳಿ ಸದಸ್ಯೆ ಸಂಗೀತಾ ಬದ್ದಿ, ಆಶ್ರಯ ಸಮಿತಿ ಸದಸ್ಯೆ ರಂಜನಾ ಬಂಕಾಪುರ ಅವರನ್ನೂ ಸತ್ಕರಿಸಲು ನಿರ್ಧರಿಸಲಾಗಿದೆ‘ ಎಂದು ಹೇಳಿದರು.</p>.<p>‘ಕೇಶ್ವಾಪುರದ ಶ್ರೀನಿವಾಸ್ ಗಾರ್ಡ್ನಲ್ಲಿ 21ರಂದು ಸಂಜೆ 6ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಸಚಿವ ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪಾಲ್ಗೊಳ್ಳಲಿದ್ದಾರೆ. ವಿವಿಧ ಹುದ್ದೆಗಳಲ್ಲಿರುವ ಸಮಾಜದ 65 ಮಂದಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು‘ ಎಂದು ತಿಳಿಸಿದರು.</p>.<p><strong>ಜ್ಯೋತಿಯಾತ್ರೆ:</strong> ‘ಸಮಾಜದ ಮೂಲಪುರಷ ಸಹಸ್ರಾರ್ಜುನ ಮಹಾರಾಜರ ದಿವ್ಯ ಜ್ಯೋತಿ ಮಧ್ಯಪ್ರದೇಶದಿಂದ ನಗರಕ್ಕೆ ಬಂದು ಫೆ.20ಕ್ಕೆ ಒಂದು ವರ್ಷ ಪೂರ್ಣವಾಗಲಿದೆ. ಅಂದು ಜ್ಯೊತಿಯ ಮೆರವಣಿಗೆ, ವಿಶೇಷ ಪೂಜೆ ಹಾಗೂ ಹೋಮಹವನಗಳು ನಡೆಯಲಿವೆ’ ಎಂದು ನೀಲಕಂಠ ಜಡಿ ಅವರು ಮಾಹಿತಿ ನೀಡಿದರು.</p>.<p>ಪಂಚ ಸಮಿತಿಯ ಗೌರವ ಕಾರ್ಯದರ್ಶಿ ನಾರಾಯಣ ಎನ್.ಖೋಡೆ, ಉಪ ಮುಖ್ಯ ಧರ್ಮದರ್ಶಿ ಹನುಮಂತಸಾ ಜಿ.ನಿರಂಜನ, ಸಹ ಗೌರವ ಕಾರ್ಯದರ್ಶಿ, ಉಪ ಮುಖ್ಯಕಾರ್ಯದರ್ಶಿ ಕೆ.ಟಿ.ಪವಾರ, ಕೋಶಾಧಿಕಾರಿ ಕೆ.ಪಿ. ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>