ಹಂಪಿ, ಐಹೊಳೆ, ಬಾದಾಮಿ, ಪಟ್ಟದಕಲ್ಲು, ವಿಜಯನಗರದ ಅರಸರು, ಕನ್ನಡದ ಸಂತರು ಹೀಗೆ ಪ್ರಮುಖ ಎಲ್ಲ ಮಹನೀಯರ ಚಿತ್ರಗಳನ್ನು ಅಂಟಿಸಲಾಗಿತ್ತು. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿಗಳನ್ನು ತಂದುಕೊಟ್ಟ ಮಾಸ್ತಿ ವೆಂಕಟೇಶ ಅಯ್ಯಂಗಾರ, ದ.ರಾ. ಬೇಂದ್ರೆ, ಕುವೆಂಪು, ವಿ.ಕೃ. ಗೋಕಾಕ, ಯು.ಆರ್. ಅನಂತಮೂರ್ತಿ, ಗಿರೀಶ ಕಾರ್ನಾಡ ಮತ್ತು ಚಂದ್ರಶೇಖರ ಕಂಬಾರ ಅವರು ಈ ಪ್ರಶಸ್ತಿಗಳನ್ನು ಪಡೆದ ವರ್ಷ, ಯಾವ ಸಾಧನೆಗೆ ಈ ಗೌರವ ಬಂದಿದೆ ಎನ್ನುವ ಮಾಹಿತಿ ಹೊಂದಿದ್ದ ಪೋಸ್ಟರ್ಗಳು ಬಸ್ನೊಳಗೆ ರಾರಾಜಿಸುತ್ತಿದ್ದವು.