ಹುಬ್ಬಳ್ಳಿ: ರಾಜ್ಯದಲ್ಲಿ ಮೇ 16ರಿಂದ ಶಾಲೆಗಳನ್ನು ಪ್ರಾರಂಭಿಸಬೇಕೇ ಬೇಡವೇ ಕುರಿತು ತಜ್ಞರ ವರದಿ ಪಡೆದು ನಿರ್ಧಾರ ಕೈಗೊಳ್ಳಬೇಕು.ಬಿಸಿಲಿನ ತಾಪಮಾನ ಹೆಚ್ಚಾಗಿರುವ ಜೊತೆಗೆ, ಅಕಾಲಿಕ ಮಳೆ ಸುರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಮೊದಲು ಶಿಕ್ಷಣ ತಜ್ಞರ ಹಾಗೂ ಮಕ್ಕಳ ತಜ್ಞರ ವರದಿಯನ್ನು ಪಡೆಯಬೇಕು ಎಂದು ಅಶೋಕ ಸಜ್ಜನ ಹೇಳಿದ್ದಾರೆ