<p><strong>ಕಲಘಟಗಿ:</strong> ಸ್ಪರ್ಧಾತ್ಮಕ ಯುಗದಲ್ಲಿ ಸಾಂಪ್ರದಾಯಿಕ ಕೋರ್ಸ್ಗಳಿಗೆ ಸೇರದೆ ವಿವಿಧ ವೃತ್ತಿಪರ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ವಿದ್ಯಾರ್ಥಿಗಳು ಸ್ವಂತ ಉದ್ಯೋಗ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.</p>.<p>ತಾಲ್ಲೂಕಿನ ಚಳಮಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆ ಹುಬ್ಬಳ್ಳಿಯ ಪ್ಯುಲ್ ಸಂಸ್ಥೆಯವರು ಹಮ್ಮಿಕೊಂಡಿದ್ದ ‘ಎಸ್ಎಸ್ಎಲ್ಸಿ ನಂತರ ಮುಂದೇನು’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ರೋಟರಿ ಸಂಸ್ಥೆಯ ಅಧ್ಯಕ್ಷ ವಿವೇಕ ನಾಯ್ಕ ಮಾತನಾಡಿದರು. ಅನಂತ ಪ್ಯುಲ್ ಸಂಸ್ಥೆಯವರು ಪಿಪಿಟಿ ಮೂಲಕ ಮಕ್ಕಳ ಜೊತೆ ಸಂವಾದ ರೂಪದಲ್ಲಿ ವಿವಿಧ ಕೊರ್ಸ್ ಹಾಗೂ ಉದ್ಯೋಗವಕಾಶಗಳ ಕುರಿತು ಮಾಹಿತಿ ನೀಡಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ್ ಕೆ.ಎಫ್. ಶಾಲೆಯ ಮುಖ್ಯ ಶಿಕ್ಷಕ ಶ್ಯಾಮ ಶೇರಖಾನೆ ಅಧ್ಯಕ್ಷತೆ ವಹಿಸಿದ್ದರು. ಸಿ.ಸಿ. ಅಳಗೋಡಿ, ಕೌಸ್ತುಬ ಸಂಶಿಕರ, ಸಂಜಯ ಕುನ್ನಾಳ, ಎಂ.ಆರ್. ರಾಮನಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ:</strong> ಸ್ಪರ್ಧಾತ್ಮಕ ಯುಗದಲ್ಲಿ ಸಾಂಪ್ರದಾಯಿಕ ಕೋರ್ಸ್ಗಳಿಗೆ ಸೇರದೆ ವಿವಿಧ ವೃತ್ತಿಪರ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ವಿದ್ಯಾರ್ಥಿಗಳು ಸ್ವಂತ ಉದ್ಯೋಗ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.</p>.<p>ತಾಲ್ಲೂಕಿನ ಚಳಮಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆ ಹುಬ್ಬಳ್ಳಿಯ ಪ್ಯುಲ್ ಸಂಸ್ಥೆಯವರು ಹಮ್ಮಿಕೊಂಡಿದ್ದ ‘ಎಸ್ಎಸ್ಎಲ್ಸಿ ನಂತರ ಮುಂದೇನು’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ರೋಟರಿ ಸಂಸ್ಥೆಯ ಅಧ್ಯಕ್ಷ ವಿವೇಕ ನಾಯ್ಕ ಮಾತನಾಡಿದರು. ಅನಂತ ಪ್ಯುಲ್ ಸಂಸ್ಥೆಯವರು ಪಿಪಿಟಿ ಮೂಲಕ ಮಕ್ಕಳ ಜೊತೆ ಸಂವಾದ ರೂಪದಲ್ಲಿ ವಿವಿಧ ಕೊರ್ಸ್ ಹಾಗೂ ಉದ್ಯೋಗವಕಾಶಗಳ ಕುರಿತು ಮಾಹಿತಿ ನೀಡಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ್ ಕೆ.ಎಫ್. ಶಾಲೆಯ ಮುಖ್ಯ ಶಿಕ್ಷಕ ಶ್ಯಾಮ ಶೇರಖಾನೆ ಅಧ್ಯಕ್ಷತೆ ವಹಿಸಿದ್ದರು. ಸಿ.ಸಿ. ಅಳಗೋಡಿ, ಕೌಸ್ತುಬ ಸಂಶಿಕರ, ಸಂಜಯ ಕುನ್ನಾಳ, ಎಂ.ಆರ್. ರಾಮನಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>