<p><strong>ಹುಬ್ಬಳ್ಳಿ</strong>: ‘ಕಾಂಗ್ರೆಸ್ ನಾಯಕರು ರಾಜ್ಯಪಾಲರ ಹುದ್ದೆ ಸಾಂವಿಧಾನಿಕ ಹುದ್ದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮೇಲೆ ವಿಶ್ವಾಸ ಇದೆಯೇ ಇಲ್ಲವೇ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭೆ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಏನು ಹೇಳಬೇಕೋ ಅದನ್ನು ಹೇಳಿದ್ದಾರೆ. ಮೊದಲ ಹಾಗೂ ಕೊನೆಯ ಪುಟ ಓದಿದ್ದಾರೆ. ರಾಷ್ಟ್ರಗೀತೆ ಹಾಕುವ ಕೆಲಸ ಯಾರದ್ದು? ರಾಜ್ಯ ಸರ್ಕಾರ ಇಂತಹ ಬೂಟಾಟಿಕೆ ಬಿಡಬೇಕು’ ಎಂದರು.</p>.<p>‘ವಿಬಿ ಜಿ ರಾಮ್ ಜಿ’ ಯೋಜನೆ ಮೂಲಕ ಕೇಂದ್ರ ಸರ್ಕಾರವು ಗ್ರಾಮೀಣ ಜನರಿಗೆ ಅನುಕೂಲ ಮಾಡಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಶೇ 60ರಷ್ಟು ಹಾಗೂ ರಾಜ್ಯ ಸರ್ಕಾರ ಶೇ 40ರಷ್ಟು ಅನುದಾನ ನೀಡಬೇಕು. ಆದರೆ ರಾಜ್ಯ ಸರ್ಕಾರಕ್ಕೆ ಅನುದಾನ ಕೊಡಲು ಆಗದಿರುವ ಕಾರಣ ಯೋಜನೆ ವಿರೋಧಿಸುತ್ತಿದೆ’ ಎಂದು ಅರೋಪಿಸಿದರು.</p>.<p>‘ರಾಜ್ಯ ಸರ್ಕಾರವು ಮನೆ ಹಂಚಿಕೆ ಹಾಗೂ ಹಕ್ಕುಪತ್ರ ವಿತರಿಸಲು ನಮ್ಮ ಅಭ್ಯಂತರವಿಲ್ಲ. ಈ ಸಮಾರಂಭಕ್ಕೆ ಜನರ ಸೇರಿಸಲು ಮದ್ಯ ಹಂಚಲಾಗಿದ್ದು, ಇದರ ಅರ್ಥವೇನು? 2 ಲಕ್ಷ ಜನರನ್ನು ಸೇರಿಸಲು ಮದ್ಯ ನೀಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಕಾಂಗ್ರೆಸ್ ನಾಯಕರು ರಾಜ್ಯಪಾಲರ ಹುದ್ದೆ ಸಾಂವಿಧಾನಿಕ ಹುದ್ದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮೇಲೆ ವಿಶ್ವಾಸ ಇದೆಯೇ ಇಲ್ಲವೇ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭೆ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಏನು ಹೇಳಬೇಕೋ ಅದನ್ನು ಹೇಳಿದ್ದಾರೆ. ಮೊದಲ ಹಾಗೂ ಕೊನೆಯ ಪುಟ ಓದಿದ್ದಾರೆ. ರಾಷ್ಟ್ರಗೀತೆ ಹಾಕುವ ಕೆಲಸ ಯಾರದ್ದು? ರಾಜ್ಯ ಸರ್ಕಾರ ಇಂತಹ ಬೂಟಾಟಿಕೆ ಬಿಡಬೇಕು’ ಎಂದರು.</p>.<p>‘ವಿಬಿ ಜಿ ರಾಮ್ ಜಿ’ ಯೋಜನೆ ಮೂಲಕ ಕೇಂದ್ರ ಸರ್ಕಾರವು ಗ್ರಾಮೀಣ ಜನರಿಗೆ ಅನುಕೂಲ ಮಾಡಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಶೇ 60ರಷ್ಟು ಹಾಗೂ ರಾಜ್ಯ ಸರ್ಕಾರ ಶೇ 40ರಷ್ಟು ಅನುದಾನ ನೀಡಬೇಕು. ಆದರೆ ರಾಜ್ಯ ಸರ್ಕಾರಕ್ಕೆ ಅನುದಾನ ಕೊಡಲು ಆಗದಿರುವ ಕಾರಣ ಯೋಜನೆ ವಿರೋಧಿಸುತ್ತಿದೆ’ ಎಂದು ಅರೋಪಿಸಿದರು.</p>.<p>‘ರಾಜ್ಯ ಸರ್ಕಾರವು ಮನೆ ಹಂಚಿಕೆ ಹಾಗೂ ಹಕ್ಕುಪತ್ರ ವಿತರಿಸಲು ನಮ್ಮ ಅಭ್ಯಂತರವಿಲ್ಲ. ಈ ಸಮಾರಂಭಕ್ಕೆ ಜನರ ಸೇರಿಸಲು ಮದ್ಯ ಹಂಚಲಾಗಿದ್ದು, ಇದರ ಅರ್ಥವೇನು? 2 ಲಕ್ಷ ಜನರನ್ನು ಸೇರಿಸಲು ಮದ್ಯ ನೀಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>