ವಿಶ್ವ ಹಿಂದೂ ಪರಿಷತ್ ಸಭೆಗೆ ತೊಂದರೆ ಆಗಲಿದೆ ಎಂಬ ಕಾರಣಕ್ಕೆ ಮಹಾತ್ಮ ಗಾಂಧೀಜಿ ಅವರ ಸ್ಮಾರಕವನ್ನು ಜೂನ್ 24 ಮತ್ತು 25ರಂದು ಬಂದ್ ಮಾಡಲಾಗಿತ್ತು. ಸ್ಮಾರಕ ಆರಂಭವಾದ ದಿನದಿಂದ ಇಲ್ಲಿಯ ವರೆಗೆ ಬಾಗಿಲು ಮುಚ್ಚಿರಲಿಲ್ಲ. ಒಂದು ಸಂಘಟನೆಗೆ ಅನುಕೂಲ ಮಾಡಿಕೊಡಲು ಈ ರೀತಿ ಮಾಡಿರುವ ಕ್ರಮಕ್ಕೆ ತೀವ್ರ ವಿರೋಧ ಇದೆ. ಈ ಬಗ್ಗೆ ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ಅವರು ಹೇಳಿದರು.