ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸಮತ ಸಾಬೀತಿಗಾಗಿ ಬರೊಬ್ಬರಿ ಐದು ದಿನ ತೆಗೆದುಕೊಳ್ಳುವ ಮೂಲಕ, ರಾಜ್ಯದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಸ್ಪೀಕರ್ ಕೂಡ ಮೈತ್ರಿ ಸರ್ಕಾರದ ಆಣತಿಯಂತೆ ವರ್ತಿಸುವ ಮೂಲಕ ನಮ್ಮ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ’ ಎಂದರು.