‘ಮೂರು ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಯಲಿದ್ದು, ಭಗವದ್ಗೀತೆಯ 3ನೇ ಅಧ್ಯಾಯ ಕರ್ಮಯೋಗವನ್ನು ಸ್ಪರ್ಧೆಗೆ ನಿಗದಿ ಪಡಿಸಲಾಗಿದೆ. ಈ ಅಧ್ಯಾಯದ ಎಲ್ಲ ಶ್ಲೋಕಗಳನ್ನು ಕಂಠಪಾಠ ಮಾಡಿ, ನಿರ್ಣಾಯಕರು ಸೂಚಿಸುವ ಯಾವುದೇ ಶ್ಲೋಕವನ್ನು ಅನುಕ್ರಮವಾಗಿ ಐದು ನಿಮಿಷದಲ್ಲಿ ಹೇಳಬೇಕು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಹಾಗೂ ಗಾಂಧೀಜಿ ವಿಷಯದ ಕುರಿತು, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಮತ್ತು ತಿಲಕರು ವಿಷಯದ ಕುರಿತು ಐದು ನಿಮಿಷದ ಭಾಷಣ ಸ್ಪರ್ಧೆ ನಡೆಯಲಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.