ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕಮಾಂಡ್ ಬೆಂಬಲದಿಂದ ಯತ್ನಾಳ ಹೇಳಿಕೆ: ಬಸವರಾಜ ಹೊರಟ್ಟಿ

Last Updated 28 ಅಕ್ಟೋಬರ್ 2020, 17:00 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹೈಕಮಾಂಡ್‌ ಬೆಂಬಲವಿಲ್ಲದೆ ಹೋದರೆರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಲು ಹೇಗೆ ಸಾಧ್ಯ? ಎಂದು ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಪ್ರಶ್ನಿಸಿದರು.

ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಹೊರಟ್ಟಿ ’ಹೈಕಮಾಂಡ್‌ನ ಕುಮ್ಮಕ್ಕು ಇಲ್ಲದೇ ಯತ್ನಾಳ ಮಾತನಾಡಿರುವುದಿಲ್ಲ. ಪಕ್ಷದ ವಿರುದ್ಧವಾಗಿ ಮಾತನಾಡಿದ್ದರೂಅವರ ವಿರುದ್ಧ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಇದೇ ಎಲ್ಲವನ್ನೂ ಅರ್ಥೈಸುತ್ತದೆ’ ಎಂದರು. ಯತ್ನಾಳ ಹೇಳಿಕೆ, ಬಿಜೆಪಿ ಪ್ರತಿಕ್ರಿಯೆ ಇವೆಲ್ಲವನ್ನೂ ನೋಡಿದರೆ ಪಕ್ಷದಲ್ಲಿ ಆಂತರಿಕ ಕಲಹ ಇರುವುದು ಗೊತ್ತಾಗುತ್ತದೆ ಎಂದರು.

ಈ ಕುರಿತು ಪ್ರತಿಕ್ರಿಯಿಸಿದಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಸಚಿವ ಜಗದೀಶ ಶೆಟ್ಟರ್‌‘ನಮ್ಮ ನಾಯಕರಾಗಿ ಯಡಿಯೂರಪ್ಪ ಅವರು ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಇದರ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT