<p><strong>ಧಾರವಾಡ: ‘</strong>ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದಿಂದ ವೀರಶೈವ ಪದ ತೆಗೆಯಬೇಕೆಂದು ಕೆಲವರು ಸಮಾಜದ ಜನರ ದಾರಿ ತಪ್ಪಿಸುತ್ತಿದ್ದಾರೆ. ಬಸವಾದಿ ಶರಣರ ವಚನಗಳಲ್ಲೇ ವೀರಶೈವ ಪದವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕು’ ಎಂದು ನವನಗರದ ಕಾಶಿ ಶಾಖಾಮಠದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. </p>.<p>ನಗರದ ಹೊಸಯಲ್ಲಾಪುರಸ ಮಳೇಮಲ್ಲೇಶ್ವರ ಸಂಸ್ಥಾನ ಹಿರೇಮಠದಲ್ಲಿ ಈಚೆಗೆ ಆಯೋಜಿಸಿದ್ದ ರೇಣುಕಾಚಾರ್ಯ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಪಂಚಪೀಠಗಳು, ಬಸವಾದಿ ಶರಣರು ಬೇರೆಯಲ್ಲ. ಇವರೆಲ್ಲರೂ ವೀರಶೈವ–ಲಿಂಗಾಯತ ಧರ್ಮಕ್ಕೆ ಶಕ್ತಿ ನೀಡಿದವರು. ಸರಿಯಾಗಿ ಅಧ್ಯಯನ ಮಾಡದೆ, ಸಮಾಜದ ದಾರಿ ತಪ್ಪಿಸಲಾಗುತ್ತಿದೆ. ವೀರಶೈವ ಪದ ತೆಗೆದುಹಾಕಬೇಕೆಂದು ಹೇಳಿದವರಿಗೆ ಪಾಠ ಕಲಿಸಬೇಕು’ ಎಂದರು. </p>.<p>‘ಬಸವಾದಿ ಶರಣರ ನುಡಿದ ನುಡಿಗಳಲ್ಲಿ, ಬರೆದ ವಚನಗಳಲ್ಲಿ ವೀರಶೈವ ಎಂಬುದಿದೆ. ಸರಿಯಾಗಿ ಅಧ್ಯಯನ ಮಾಡಿ ಈ ಬಗ್ಗೆ ಜಾಗೃತರಾಗುವ ಬದಲು ಸಮಾಜ ಒಡೆಯುವ ಕೃತ್ಯ ಸರಿಯಲ್ಲ’ ಎಂದು ಅಭಿಪ್ರಾಯಪಟ್ಟರು.</p>.<p>ಹೊಸಯಲ್ಲಾಪೂರ ಹಿರೇಮಠದ ಶಶಾಂಕ ಸ್ವಾಮೀಜಿ ಮಾತನಾಡಿ, ‘ವೀರಶೈವ ಧರ್ಮ ಸ್ಥಾಪನೆ ಮಾಡಿದ ರೇಣುಕಾಚಾರ್ಯರು ಮಾನವ ಕುಲದ ಒಳಿತಿಗಾಗಿ ಶ್ರಮಿಸಿದರು. ಅವರ ಆಶಯದಂತೆ ಎಲ್ಲರೂ ಬದುಕಬೇಕು. ಸಮಾಜದ ಎಲ್ಲರೊಂದಿಗೆ ಪ್ರೀತಿ, ವಿಶ್ವಾಸದಿಂದ ನಡೆದುಕೊಳ್ಳಬೇಕು’ ಎಂದರು.</p>.<p>ಗದಿಗಯ್ಯ ಸ್ವಾಮೀಜಿ, ಕರಡಿಗುಡ್ಡದ ಚನ್ನಬಸವ ಸ್ವಾಮೀಜಿ, ಮಂಜುನಾಥ ಹಿರೇಮಠ, ರಾಜೇಂದ್ರ ಹಿರೇಮಠ, ಸರೋಜಾ ಪಾಟೀಲ, ಸಿ.ಎನ್. ಹಿರೇಮಠ, ಶಕುಂತಲಾ ಹಿರೇಮಠ, ಜಯಲಕ್ಷ್ಮಿ ಹಿರೇಮಠ, ಬಸವರಾಜ ಕುರಹಟ್ಟಿಮಠ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: ‘</strong>ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದಿಂದ ವೀರಶೈವ ಪದ ತೆಗೆಯಬೇಕೆಂದು ಕೆಲವರು ಸಮಾಜದ ಜನರ ದಾರಿ ತಪ್ಪಿಸುತ್ತಿದ್ದಾರೆ. ಬಸವಾದಿ ಶರಣರ ವಚನಗಳಲ್ಲೇ ವೀರಶೈವ ಪದವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕು’ ಎಂದು ನವನಗರದ ಕಾಶಿ ಶಾಖಾಮಠದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. </p>.<p>ನಗರದ ಹೊಸಯಲ್ಲಾಪುರಸ ಮಳೇಮಲ್ಲೇಶ್ವರ ಸಂಸ್ಥಾನ ಹಿರೇಮಠದಲ್ಲಿ ಈಚೆಗೆ ಆಯೋಜಿಸಿದ್ದ ರೇಣುಕಾಚಾರ್ಯ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಪಂಚಪೀಠಗಳು, ಬಸವಾದಿ ಶರಣರು ಬೇರೆಯಲ್ಲ. ಇವರೆಲ್ಲರೂ ವೀರಶೈವ–ಲಿಂಗಾಯತ ಧರ್ಮಕ್ಕೆ ಶಕ್ತಿ ನೀಡಿದವರು. ಸರಿಯಾಗಿ ಅಧ್ಯಯನ ಮಾಡದೆ, ಸಮಾಜದ ದಾರಿ ತಪ್ಪಿಸಲಾಗುತ್ತಿದೆ. ವೀರಶೈವ ಪದ ತೆಗೆದುಹಾಕಬೇಕೆಂದು ಹೇಳಿದವರಿಗೆ ಪಾಠ ಕಲಿಸಬೇಕು’ ಎಂದರು. </p>.<p>‘ಬಸವಾದಿ ಶರಣರ ನುಡಿದ ನುಡಿಗಳಲ್ಲಿ, ಬರೆದ ವಚನಗಳಲ್ಲಿ ವೀರಶೈವ ಎಂಬುದಿದೆ. ಸರಿಯಾಗಿ ಅಧ್ಯಯನ ಮಾಡಿ ಈ ಬಗ್ಗೆ ಜಾಗೃತರಾಗುವ ಬದಲು ಸಮಾಜ ಒಡೆಯುವ ಕೃತ್ಯ ಸರಿಯಲ್ಲ’ ಎಂದು ಅಭಿಪ್ರಾಯಪಟ್ಟರು.</p>.<p>ಹೊಸಯಲ್ಲಾಪೂರ ಹಿರೇಮಠದ ಶಶಾಂಕ ಸ್ವಾಮೀಜಿ ಮಾತನಾಡಿ, ‘ವೀರಶೈವ ಧರ್ಮ ಸ್ಥಾಪನೆ ಮಾಡಿದ ರೇಣುಕಾಚಾರ್ಯರು ಮಾನವ ಕುಲದ ಒಳಿತಿಗಾಗಿ ಶ್ರಮಿಸಿದರು. ಅವರ ಆಶಯದಂತೆ ಎಲ್ಲರೂ ಬದುಕಬೇಕು. ಸಮಾಜದ ಎಲ್ಲರೊಂದಿಗೆ ಪ್ರೀತಿ, ವಿಶ್ವಾಸದಿಂದ ನಡೆದುಕೊಳ್ಳಬೇಕು’ ಎಂದರು.</p>.<p>ಗದಿಗಯ್ಯ ಸ್ವಾಮೀಜಿ, ಕರಡಿಗುಡ್ಡದ ಚನ್ನಬಸವ ಸ್ವಾಮೀಜಿ, ಮಂಜುನಾಥ ಹಿರೇಮಠ, ರಾಜೇಂದ್ರ ಹಿರೇಮಠ, ಸರೋಜಾ ಪಾಟೀಲ, ಸಿ.ಎನ್. ಹಿರೇಮಠ, ಶಕುಂತಲಾ ಹಿರೇಮಠ, ಜಯಲಕ್ಷ್ಮಿ ಹಿರೇಮಠ, ಬಸವರಾಜ ಕುರಹಟ್ಟಿಮಠ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>