ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೆಟ್ಟರ್ ಫೌಂಡೇಷನ್‌ನಿಂದ ಪುತ್ಥಳಿ ಸ್ವಚ್ಛತೆ

Last Updated 14 ನವೆಂಬರ್ 2022, 5:47 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಎಸ್.ಎಸ್. ಶೆಟ್ಟರ್ ಫೌಂಡೇಷನ್ ವತಿಯಿಂದ ನಗರದಲ್ಲಿರುವ ಮಹಾನ್ ಪುರುಷರ ಪುತ್ಥಳಿಗಳನ್ನು ಸ್ವಚ್ಛಗೊಳಿಸುವ ಅಭಿಯಾನ ಭಾನುವಾರ ಜರುಗಿತು.

ಫೌಂಡೇಷನ್ ಅಧ್ಯಕ್ಷ ಸಂಕಲ್ಪ ಶೆಟ್ಟರ್ ನೇತೃತ್ವದಲ್ಲಿ ರೈಲು ನಿಲ್ದಾಣ ಬಳಿಯ ಸ್ವಾಮಿ ವಿವೇಕಾನಂದ, ಅಂಚೆ ಕಚೇರಿ ಬಳಿಯ ಡಾ.ಬಿ.ಆರ್. ಅಂಬೇಡ್ಕರ್, ಸಿದ್ದಪ್ಪ ಕಂಬಳಿ, ಸಂಗೊಳ್ಳಿ ರಾಯಣ್ಣ, ಬಸವಣ್ಣ, ರಾಣಿ ಚನ್ನಮ್ಮ ಪ್ರತಿಮೆ–ಪುತ್ಥಳಿಗಳನ್ನು ಸದಸ್ಯರು ಸ್ವಚ್ಛಗೊಳಿಸಿದರು.

‘ವಿವೇಕಾನಂದ ಅವರು ನಮಗೆ ಧರ್ಮ ಮತ್ತು ಜೀವನದ ಸಾರವನ್ನು ತಿಳಿಸಿ ಕೊಟ್ಟಿದ್ದರೆ, ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಮಾನತೆಯನ್ನು ಸಾರಿದ್ದಾರೆ. ಕಂಬಳಿ ಅವರು ಧಾರವಾಡಕ್ಕೆ ವಿಶೇಷ ಕೊಡುಗೆ ನೀಡಿದ್ದರೆ, ಚನ್ನಮ್ಮ ಮತ್ತು ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಬಸವಣ್ಣನವರು ಕಾಯಕದ ಮಹತ್ವ ತಿಳಿಸಿ ಕೊಟ್ಟಿದ್ದಾರೆ. ಅಂತಹವರ ಪುತ್ಥಳಿಗಳನ್ನು ಸ್ವಚ್ಛಗೊಳಿಸುವ ಅವಕಾಶ ಸಿಕ್ಕಿದ್ದು ನಮ್ಮೆಲ್ಲರ ಭಾಗ್ಯ’ ಎಂದು ಸಂಕಲ್ಪ ಹೇಳಿದರು.

ಬಿಜೆಪಿ ಮುಖಂಡರಾದ ನಾಗೇಶ ಕಲಬುರ್ಗಿ, ಈಶ್ವರಗೌಡ ಪಾಟೀಲ ಹಾಗೂ ಫೌಂಡೇಷನ್ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT