<p><strong>ಹುಬ್ಬಳ್ಳಿ</strong>: ‘ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿಲ್ಲಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.</p><p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಬಿಸಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕು ಎಂದು ರಾಜ್ಯ ಸರ್ಕಾರ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಮಾಡಿತ್ತು. ಆಯೋಗವು ಅದನ್ನು ತಿರಸ್ಕರಿಸಿ, ಮುಖ್ಯಕಾರ್ಯದರ್ಶಿಗೆ ನೋಟಿಸ್ ನೀಡಿದೆ’ ಎಂದರು.</p><p>‘ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರ ಇದ್ದಾಗ ಮೀಸಲಾತಿಯಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿತ್ತು. ಪ್ರವರ್ಗ 2ಬಿಯಲ್ಲಿ ಮುಸ್ಲಿಮರಿಗೆ ಇದ್ದ ಶೇ 4ರಷ್ಟು ಮೀಸಲಾತಿಯನ್ನು ತೆಗೆದು ಪ್ರವರ್ಗ 3ಎ, 3ಬಿಗೆ ಹಂಚಿಕೆ ಮಾಡಿತ್ತು. ಅದನ್ನು ಈ ಸರ್ಕಾರ ನಿಲ್ಲಿಸಿರುವುದು ಖಂಡನೀಯ’ ಎಂದು ಹೇಳಿದರು.</p><p>‘ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡುವ ಕೆಟ್ಟ ಪದ್ಧತಿಗೆ ಕಾಂಗ್ರೆಸ್ ಸರ್ಕಾರ ನಾಂದಿ ಹಾಡಿದೆ. ಇದಕ್ಕೆ ಅಂತ್ಯ ಹಾಡುವ ಕಾಲ ಬಂದಿದೆ’ ಎಂದರು.</p><p>‘ಸದ್ಯ ಪ್ರವರ್ಗ–1ಕ್ಕೆ ಶೇ 4, ಪ್ರವರ್ಗ–2ಎಗೆ ಶೇ15, ಪ್ರವರ್ಗ 2ಬಿಗೆ ಶೇ 4, ಪ್ರವರ್ಗ 3ಎಗೆ ಶೇ 4 ಮತ್ತು 3ಬಿಗೆ ಶೇ 5ರಷ್ಟು ಮೀಸಲಾತಿ ಇದೆ. ಇದರಲ್ಲಿ ಒಟ್ಟಾರೆಯಾಗಿ ಮುಸ್ಲಿಮರಿಗೆ ಶೇ 23ರಷ್ಟು ಮೀಸಲಾತಿ ಸಿಗುತ್ತಿದೆ. ಹೆಸರಿಗೆ ಇದು ಒಬಿಸಿ ಮೀಸಲಾತಿಯಾಗಿದ್ದರೂ, ಮುಸ್ಲಿಮರು ಇದರ ಗರಿಷ್ಠ ಉಪಯೋಗ ಪಡೆಯುತ್ತಿದ್ದಾರೆ’ ಎಂದು ದೂರಿದರು.</p><p>‘ಮುಸ್ಲಿಮರಲ್ಲಿ ಜಾತಿ, ಮೇಲು –ಕೀಳು ಇಲ್ಲ. ಹೀಗಾಗಿ ಅವರಿಗೆ ಧರ್ಮ ಆಧಾರಿತ ಮೀಸಲಾತಿ ನೀಡಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದೆ. ಆದ್ದರಿಂದ ಮುಸ್ಲಿಮರಿಗೆ ಒಬಿಸಿಯಲ್ಲಿ ಮೀಸಲಾತಿ ನೀಡಬಾರದು. ಒಂದು ವೇಳೆ ಈ ಸರ್ಕಾರ ಇದನ್ನು ಸರಿಪಡಿಸದಿದ್ದರೆ ಮುಂದೆ ನಮ್ಮ ಸರ್ಕಾರ ಬಂದಾಗ ಈ ಅನ್ಯಾಯ ಸರಿಪಡಿಸಲಾಗುವುದು’ ಎಂದರು.</p><p>ಮಾ.ನಾಗರಾಜ್, ಕರುಣಾಕರ್, ಸತೀಶ ಹಾನಗಲ್, ದತ್ತಮೂರ್ತಿ ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p><strong>‘ಧರ್ಮ ಆಧಾರಿತ ಮೀಸಲಾತಿ ಸಾಧ್ಯವಿಲ್ಲ’</strong></p><p><strong>ಹುಬ್ಬಳ್ಳಿ:</strong> ‘ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿಸಿ, ಹಿಂದುಳಿದ ವರ್ಗದವರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ’ ಎಂದು ಕೇಂದ್ರ ಸಚಿವ, ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಟೀಕಿಸಿದರು.</p><p>ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಒಂದೆಡೆ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯ ಜಾತಿಯಲ್ಲ, ಧರ್ಮ ಎನ್ನುತ್ತಾರೆ. ಇನ್ನೊಂದೆಡೆ ಮೀಸಲಾತಿ ನೀಡುತ್ತಾರೆ’ ಎಂದರು.</p><p>‘ಪ್ರವರ್ಗ 1ರಲ್ಲಿ ಮುಸ್ಲಿಂ ಸಮುದಾಯದ 17 ಜಾತಿಗಳು, ಪ್ರವರ್ಗ 2ರಲ್ಲಿ 19 ಜಾತಿಗಳನ್ನು ಸೇರಿಸಲಾಗಿದೆ. ನಿಜವಾದ ಹಿಂದುಳಿದ ಜಾತಿಗಳಾದ ಕುರುಬ, ಮರಾಠ, ಉಪ್ಪಾರ ಸೇರಿ ಉಳಿದವರಿಗೆ ಚಿಪ್ಪು ನೀಡುತ್ತಿದೆ. ಸಂವಿಧಾನದಲ್ಲಿ ಧರ್ಮ ಆಧಾರಿತವಾಗಿ ಮೀಸಲಾತಿ ನೀಡಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿಲ್ಲಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.</p><p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಬಿಸಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕು ಎಂದು ರಾಜ್ಯ ಸರ್ಕಾರ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಮಾಡಿತ್ತು. ಆಯೋಗವು ಅದನ್ನು ತಿರಸ್ಕರಿಸಿ, ಮುಖ್ಯಕಾರ್ಯದರ್ಶಿಗೆ ನೋಟಿಸ್ ನೀಡಿದೆ’ ಎಂದರು.</p><p>‘ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರ ಇದ್ದಾಗ ಮೀಸಲಾತಿಯಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿತ್ತು. ಪ್ರವರ್ಗ 2ಬಿಯಲ್ಲಿ ಮುಸ್ಲಿಮರಿಗೆ ಇದ್ದ ಶೇ 4ರಷ್ಟು ಮೀಸಲಾತಿಯನ್ನು ತೆಗೆದು ಪ್ರವರ್ಗ 3ಎ, 3ಬಿಗೆ ಹಂಚಿಕೆ ಮಾಡಿತ್ತು. ಅದನ್ನು ಈ ಸರ್ಕಾರ ನಿಲ್ಲಿಸಿರುವುದು ಖಂಡನೀಯ’ ಎಂದು ಹೇಳಿದರು.</p><p>‘ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡುವ ಕೆಟ್ಟ ಪದ್ಧತಿಗೆ ಕಾಂಗ್ರೆಸ್ ಸರ್ಕಾರ ನಾಂದಿ ಹಾಡಿದೆ. ಇದಕ್ಕೆ ಅಂತ್ಯ ಹಾಡುವ ಕಾಲ ಬಂದಿದೆ’ ಎಂದರು.</p><p>‘ಸದ್ಯ ಪ್ರವರ್ಗ–1ಕ್ಕೆ ಶೇ 4, ಪ್ರವರ್ಗ–2ಎಗೆ ಶೇ15, ಪ್ರವರ್ಗ 2ಬಿಗೆ ಶೇ 4, ಪ್ರವರ್ಗ 3ಎಗೆ ಶೇ 4 ಮತ್ತು 3ಬಿಗೆ ಶೇ 5ರಷ್ಟು ಮೀಸಲಾತಿ ಇದೆ. ಇದರಲ್ಲಿ ಒಟ್ಟಾರೆಯಾಗಿ ಮುಸ್ಲಿಮರಿಗೆ ಶೇ 23ರಷ್ಟು ಮೀಸಲಾತಿ ಸಿಗುತ್ತಿದೆ. ಹೆಸರಿಗೆ ಇದು ಒಬಿಸಿ ಮೀಸಲಾತಿಯಾಗಿದ್ದರೂ, ಮುಸ್ಲಿಮರು ಇದರ ಗರಿಷ್ಠ ಉಪಯೋಗ ಪಡೆಯುತ್ತಿದ್ದಾರೆ’ ಎಂದು ದೂರಿದರು.</p><p>‘ಮುಸ್ಲಿಮರಲ್ಲಿ ಜಾತಿ, ಮೇಲು –ಕೀಳು ಇಲ್ಲ. ಹೀಗಾಗಿ ಅವರಿಗೆ ಧರ್ಮ ಆಧಾರಿತ ಮೀಸಲಾತಿ ನೀಡಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದೆ. ಆದ್ದರಿಂದ ಮುಸ್ಲಿಮರಿಗೆ ಒಬಿಸಿಯಲ್ಲಿ ಮೀಸಲಾತಿ ನೀಡಬಾರದು. ಒಂದು ವೇಳೆ ಈ ಸರ್ಕಾರ ಇದನ್ನು ಸರಿಪಡಿಸದಿದ್ದರೆ ಮುಂದೆ ನಮ್ಮ ಸರ್ಕಾರ ಬಂದಾಗ ಈ ಅನ್ಯಾಯ ಸರಿಪಡಿಸಲಾಗುವುದು’ ಎಂದರು.</p><p>ಮಾ.ನಾಗರಾಜ್, ಕರುಣಾಕರ್, ಸತೀಶ ಹಾನಗಲ್, ದತ್ತಮೂರ್ತಿ ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<p><strong>‘ಧರ್ಮ ಆಧಾರಿತ ಮೀಸಲಾತಿ ಸಾಧ್ಯವಿಲ್ಲ’</strong></p><p><strong>ಹುಬ್ಬಳ್ಳಿ:</strong> ‘ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿಸಿ, ಹಿಂದುಳಿದ ವರ್ಗದವರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ’ ಎಂದು ಕೇಂದ್ರ ಸಚಿವ, ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಟೀಕಿಸಿದರು.</p><p>ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಒಂದೆಡೆ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯ ಜಾತಿಯಲ್ಲ, ಧರ್ಮ ಎನ್ನುತ್ತಾರೆ. ಇನ್ನೊಂದೆಡೆ ಮೀಸಲಾತಿ ನೀಡುತ್ತಾರೆ’ ಎಂದರು.</p><p>‘ಪ್ರವರ್ಗ 1ರಲ್ಲಿ ಮುಸ್ಲಿಂ ಸಮುದಾಯದ 17 ಜಾತಿಗಳು, ಪ್ರವರ್ಗ 2ರಲ್ಲಿ 19 ಜಾತಿಗಳನ್ನು ಸೇರಿಸಲಾಗಿದೆ. ನಿಜವಾದ ಹಿಂದುಳಿದ ಜಾತಿಗಳಾದ ಕುರುಬ, ಮರಾಠ, ಉಪ್ಪಾರ ಸೇರಿ ಉಳಿದವರಿಗೆ ಚಿಪ್ಪು ನೀಡುತ್ತಿದೆ. ಸಂವಿಧಾನದಲ್ಲಿ ಧರ್ಮ ಆಧಾರಿತವಾಗಿ ಮೀಸಲಾತಿ ನೀಡಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>